Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಾಹ್ಯಾಕಾಶಕ್ಕೆ ಹಂಸ ತೆಗೆದುಕೊಂಡು ಹೋಗಿದ್ಯಾಕೆ? ಶುಭಾಂಶು ಶುಕ್ಲಾ ಹೇಳಿದ್ದೇನು ಗೊತ್ತಾ?
ಆಕ್ಸಿಯಮ್ -4 ಮಿಷನ್ ಯಶಸ್ವಿ ಉಡಾವಣೆಯೊಂದಿಗೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ್ದಾರೆ. ಅವರೊಂದಿಗೆ ಮೂವರು ಇನ್ನಿತರೆ ಗಗನಯಾತ್ರಿಗಳು ಕೂಡ ಬಾಹ್ಯಾಕಾಶ ನಿಲ್ದಾಣ ಸೇರಿದ್ದಾರೆ. ಸ್ಪೇಸ್ಎಕ್ಸ್ನ ಫಾಲ್ಕನ್ 9 ರಾಕೆಟ್ನಲ್ಲಿ ಹಾರಾಟದ ನಂತರ ಶುಭಾಂಶು ಶುಕ್ಲಾ ತಮ್ಮ ಮೊದಲ ಸಂದೇಶ ಹಂಚಿಕೊಂಡಿರು.
ಬಾಹ್ಯಾಕಾಶದಲ್ಲಿನ ತಮ್ಮ ಮೊದಲ ಅನುಭವವನ್ನು ಅವರು ಹಂಚಿಕೊಂಡಿರುವ ವಿಡಿಯೋ ಇದಾಗಿದೆ. ಈ ಫಾಲ್ಕನ್ 9 ರಾಕೆಟ್ ನಿಗಧಿಗಿಂತ 40 ನಿಮಿಷ ಮೊದಲೇ ಬಾಹ್ಯಾಕಾಶ ತಲುಪಿತ್ತು. ನಾಲ್ವರು ಗಗನಯಾತ್ರಿಗಳು ಯಶಸ್ವಿಯಾಗಿ ನಿಲ್ದಾಣ ತಲುಪಿದರು. ಈ ಮೂಲಕ ಭಾರತ ಕೂಡ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಿಸಿತು.

ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡ್ಡಯನ ಮಾಡಲಾಗಿತ್ತು. ಪುತ್ರ ಶುಭಾಂಶು ಶುಕ್ಲಾರ ಗಗನಯಾನ ಕ್ಷಣವನ್ನು ಅವರ ಪೋಷಕರು, ಪತ್ನಿ ಕಣ್ತುಂಬಿಕೊಂಡರು. ಹಾಗೆ ಆವರು ಬಾಹ್ಯಾಕಾಶದಿಂದ ಮೊದಲ ಸಂದೇಶ ರವಾನಿಸಿರು. ಅಚ್ಚರಿಯಾಗಿ ಅವರು ಹಂಚಿಕೊಂಡ ವಿಡಿಯೋದಲ್ಲಿ ತಮ್ಮ ತಂಡದ ನಾಯಕನನ್ನು ಪರಿಚಯಿಸುವುದು ನೋಡಬಹುದು.
ನಾನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸಿದ ಕ್ಷಣ... ಈ ಸಿಬ್ಬಂದಿ ನನಗೆ ತುಂಬಾ ಸ್ವಾಗತಾರ್ಹ ಭಾವನೆ ಮೂಡಿಸಿದ್ದಾರೆ. ನೀವು ಅಕ್ಷರಶಃ ನಮಗಾಗಿ ನಿಮ್ಮ ಮನೆಯ ಬಾಗಿಲುಗಳನ್ನು ತೆರೆದಂತೆ ಭಾಸವಾಯಿತು. ಈ ಸ್ವಾಗತ ನಿಜಕ್ಕೂ ಅದ್ಭುತವಾಗಿದೆ ಎಂದು ಅವರು ಬಾಹ್ಯಾಕಾಶ ನಿಲ್ದಾಣ ತಲುಪಿ ವಿಡಿಯೋ ಮೂಲಕ ಸಂದೇಶ ರವಾನಿಸಿದರು.
ಹಾಗೆ ಶುಭಾಂಶು ಶುಕ್ಲಾ ಅವರು ಬಿಳಿ ಬಣ್ಣದ ಹಂಸವೊಂದನ್ನು ಪರಿಚಯಿಸುವುದು ನೋಡಬಹುದು. ಅದರಲ್ಲೂ ಹಂಸವು ಏಕೆ ಮುಖ್ಯ ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. 'ಇದು ನಿಜವಾಗಿಯೂ ಇಲ್ಲಿ ಮುದ್ದಾಗಿ ಕಾಣಿಸುತ್ತಿದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ನಮಗೆ ಹಂಸ ಬಹಳ ಮುಖ್ಯವಾಗಿದೆ. ಹಂಸ ಬುದ್ಧಿವಂತಿಕೆಯನ್ನು ಸಂಕೇತಿಸಲಿದೆ. ಇದು ಯಾವ ವಿಚಾರಗಳ ಮೇಲೆ ಗಮನ ಹರಿಸಬೇಕು? ಯಾವುದರ ಮೇಲೆ ಗಮನಹರಿಸಬಾರದು ಎಂಬುದನ್ನು ಗ್ರಹಿಸುವ ಸಾಮರ್ಥ್ಯ ಸಹ ಹೊಂದಿದೆ' ಎಂದು ಅವರು ಹೇಳಿದ್ದಾರೆ.
ಹಾಗೆ ಭಾರತ ಮಾತ್ರವಲ್ಲ ಹಂಸವು ಹಂಗೇರಿ, ಪೋಲೆಂಡ್ನಲ್ಲೂ ಪ್ರಮುಖ ಸ್ಥಾನ ಪಡೆದಿದೆ. ಇದು ಕಾಕತಾಳಿಯ ಅಲ್ಲ, ಇದು ಕೂಡ ನಮ್ಮ ಹೃದಯದಲ್ಲಿ ನೆಲೆಸಲಿದೆ ಎಂದಿದ್ದಾರೆ. ಇದನ್ನು ಝೀರೋ ಜೀ ಸೂಚಕವಾಗಿ ಮಾತ್ರವೇ ನಾವು ನೋಡುತ್ತಿಲ್ಲ ಎಂದಿದ್ದಾರೆ. ಈ ಹಂಸದ ಹೆಸರು ಜಾಯ್ ಎಂದು ಅವರು ಹೇಳಿಕೊಂಡಿದ್ದಾರೆ.
ಝೀರೋ ಜೀ ಸೂಚಕ ಎಂದರೆ ಬಾರವಿಲ್ಲದ, ಬಹಳ ಹಗುರವಾದ ಆಟಿಕೆಯಾಗಿದೆ. ಹಿಂದಿನಿಂದಲೂ ಬಾಹ್ಯಾಕಾಶ ಯಾನಿಗಳು ಈ ರೀತಿ ತೂಕವಿಲ್ಲದ ಆಟಿಕೆಗಳನ್ನು ಬಾಹ್ಯಾಕಾಶಕ್ಕೆ ತೆಗೆದುಕೊಂಡು ಹೋಗುವ ಸಂಪ್ರದಾಯ ಬೆಳೆಸಿಕೊಂಡು ಬಂದಿದ್ದಾರೆ. ಸದ್ಯ ಈಗ ಈ ಹಂಸವನ್ನು ಬಾಹ್ಯಾಕಾಶಕ್ಕೆ ತೆಗೆದುಕೊಂಡು ಹೋಗಲಾಗಿದೆ.
ಹಂಸವನ್ನೇ ಆಯ್ಕೆ ಮಾಡಿಕೊಂಡಿದ್ದೇಕೆ?
ಭಾರತ, ಹಂಗೇರಿ, ಪೋಲೆಂಡ್ ಮತ್ತು ಯುನೈಟೆಡ್ ಸ್ಟೇಟ್ಸ್ ಅನ್ನು ಪ್ರತಿನಿಧಿಸುವ ಆಕ್ಸಿಯಮ್ -4 ಸಿಬ್ಬಂದಿ ಹಂಸವನ್ನೇ ತಮ್ಮ ಝೀರೋ ಜಿ ಸೂಚಕವಾಗಿ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದರು. ಇದು ಬುದ್ದಿವಂತಿಕೆಯ ಹಾಗೆ ಹಿಂದೂ ಪುರಾಣಗಳ ಪ್ರಕಾರ ಸರಸ್ವತಿಯ ವಾಹನವೆಂದು ಪರಿಗಣಿಸಲಾಗುತ್ತದೆ. ಹಾಗೆ ಉಳಿದಂತೆ ಹಂಗೇರಿಯನ್ ಸಂಸ್ಕೃತಿ ಹಾಗೂ ಪೋಲೆಂಡ್ ಸಂಸ್ಕೃತಿಯಲ್ಲೂ ಕೂಡ ಹಂಸವನ್ನು ಪ್ರಮುಖ ಪಕ್ಷಿಯನ್ನಾಗಿ ಪರಿಗಣಿಸಲಾಗಿದೆ ಎಂದು ತಿಳಿದುಬಂದಿದೆ.
ಬಾಹ್ಯಾಕಾಶ ತಲುಪಿದ ಭಾರತೀಯ ತಿಂಡಿ
ಇನ್ನು ಇದೇ ಮೊದಲ ಬಾರಿಗೆ ಬಾಹ್ಯಾಕಾಶ ತಲುಪಿದ ಭಾರತೀಯ ಶುಭಾಂಶು ಶುಕ್ಲಾ ಅಲ್ಲಿ ಭಾರತೀಯ ತಿಂಡಿಯನ್ನು ಕೂಡ ತೆಗೆದುಕೊಂಡು ಹೋಗಿ ಹಂಚಿದ್ದಾರೆ. ಅವರು ಕ್ಯಾರೆಟ್ ಹಲ್ವಾ, ಮೂಂಗ್ ದಾಲ್ ಹಲ್ವಾ, ಮಾವಿನ ಕಾಯಿಯ ಮಕರ ಸೇರಿ ಜನಪ್ರಿಯ ಸಿಹಿ ತಿಂಡಿಯನ್ನು ತೆಗೆದುಕೊಂಡು ಹೋಗಿ ಹಂಚಿಕೊಂಡು ಸವಿದಿದ್ದಾರೆ.



Click it and Unblock the Notifications