Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
'ಆಪರೇಷನ್ ಸಿಂಧೂರ್' ಎಂಬ ಹೆಸರು ಇಟ್ಟಿದ್ಯಾಕೆ? ಒಳಾರ್ಥವೇನು ಗೊತ್ತಾ?
ಪಹಲ್ಗಾಮ್ನಲ್ಲಿ ನಡೆದಿದ್ದ ವಿದ್ವಾಂಸ ಕೃತ್ಯಕ್ಕೆ ಭಾರತ ತಿರುಗೇಟು ನೀಡಲು ಮುಂದಾಗಿದೆ. ಹೀಗಾಗಿ ಇಂದು ಮಧ್ಯರಾತ್ರಿಯಿಂದಲೇ ಪಾಕಿಸ್ತಾನದ ಹಲವು ಕಡೆಗಳಲ್ಲಿ ವಾಯುದಾಳಿ ವರದಿಯಾಗುತ್ತಿದೆ. ಅದರಲ್ಲೂ ಅಡಗು ತಾಣಗಳ ಗುರಿಯಾಗಿಸಿಕೊಂಡು ಭಾರತೀ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕಾಗಿ ಆಪರೇಷನ್ ಸಿಂಧೂರ್ ಎಂದು ನಾಮಕರಣ ಮಾಡಲಾಗಿದೆ.
ರಾತ್ರಿಯಿಂದ ನಡೆದ ದಾಳಿಯಲ್ಲಿ ಪಾಕ್ ನೆಲೆಯಲ್ಲಿ ಬಹಳಷ್ಟು ಹಾನಿಯಾಗಿದೆ ಎಂದು ವರದಿಗಳಾಗಿವೆ. ಪಹಲ್ಗಾಮ್ನಲ್ಲಿ ನಡೆದಿದ್ದ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಯಶಸ್ವಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಭಾರತದಲ್ಲಿ ಮಾಕ್ ಡ್ರಿಲ್ ಮಾಡುವ ಕುರಿತಾದ ಸೂಚನೆ ನೀಡಿ ದಿಢೀರ್ ಪಾಕ್ ನೆಲೆಗಳ ಮೇಲೆ ದಾಳಿ ಮಾಡಿರುವುದು ಅಚ್ಚರಿ ಮೂಡಿಸಿದೆ.

ಹಾಗೆ ಈಗ ಪಾಕ್ ವಿರುದ್ಧ ಆರಂಭಗೊಂಡಿರುವ ಆಪರೇಷನ್ ಸಿಂಧೂರ್ ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದೆ. ಹಾಗಾದ್ರೆ ಈ ಕಾರ್ಯಾಚರಣೆಗೆ ಸಿಂಧೂರ್ ಎಂದು ಹೆಸರು ಇಟ್ಟಿದ್ದು ಏಕೆ? ಇದರ ಹಿಂದಿರುವ ಅರ್ಥವೇನು ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ. ಹಿಂದಿಯಲ್ಲಿ ಸಿಂಧೂರ್ ಎಂದು ಹೇಳಲಾಗುತ್ತದೆ. ಹಾಗೆ ಕನ್ನಡದಲ್ಲಿ ಇದನ್ನು ಸಿಂಧೂರ ಎನ್ನಬಹುದು. ಹಣೆ ಮೇಲೆ ಅಗಲವಾಗಿ ಇಡುವ ಕುಂಕುಮವಾಗಿದೆ.
ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ 25 ಭಾರತೀಯರು ಹಾಗೆ ಓರ್ವ ನೇಪಾಳಿ ನಾಗರಿಕ ಮೃತಪಟ್ಟಿದ್ದರು. ಈ 25 ಮಂದಿ ಪುರುಷರು ಅವರ ಪತ್ನಿ, ಮಕ್ಕಳು, ಪೋಷಕರ ಮುಂದೆಯೇ ಪ್ರಾಣ ಕಳೆದುಕೊಂಡರು. ಅದರಲ್ಲೂ ಪತ್ನಿಯರನ್ನು ಬಿಟ್ಟು ಪತಿಯ ಮೇಲೆ ದಾಳಿ ಮಾಡಲಾಗಿತ್ತು. ಇದರಿಂದ ಪ್ರತಿಕಾರದ ರೂಪವಾಗಿ ಆಪರೇಷನ್ ಸಿಂಧೂರ್ ಎಂಬ ಹೆಸರು ನೀಡಲಾಗಿದೆ.
25 ಸ್ತ್ರೀಯರ ಜೀವನ ಕಸಿದುಕೊಂಡಿದ್ದರಿಂದ ಅವರಿಗೆ ನ್ಯಾಯ ಒದಗಿಸಿ ಕೊಡುವ ಉದ್ದೇಶದಿಂದ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ್ ಎಂಬ ನಾಮಕರಣ ಮಾಡಲಾಗಿದೆ ಎಂದು ವಿಶ್ಲೇಷಿಸಲಾಗಿದೆ. ಪ್ರವಾಸಿಗರ ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಅವರ ಹೆಸರು ಕೇಳಿದ ಬಳಿಕ ಗುಂಡು ಹಾರಿಸಲಾಗಿತ್ತು ಎಂದು ವರದಿಗಳಾಗಿವೆ. ಅದರಲ್ಲಿ ನವ ವಿವಾಹಿತರಿದ್ದರು. ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮೃತದೇಹದ ಪಕ್ಕದಲ್ಲಿ ನವವಿವಾಹಿತ ಹಿಮಾಂಶಿ ನರ್ವಾಲ್ ಕಣ್ಣೀರಿಡುತ್ತಿದ್ದ ದೃಶ್ಯಗಳು ವೈರಲ್ ಆಗಿದ್ದವು. ಇವರ ವಿವಾಹವಾಗಿ ಕೆಲವೇ ದಿನಗಳು ಕಳೆದಿದ್ದವು.
ಭಾರತೀಯ ಸಂಸ್ಕೃತಿಯಲ್ಲಿ ಸಿಂಧೂರಕ್ಕೆ ಇದೆ ಮಹತ್ವ
ಮಹಿಳೆ ಸಿಂಧೂರ ಇಡುವು ಆಕೆ ಮುತೈದೆ ಎಂಬುದನ್ನು ಪ್ರತಿನಿಧಿಸುತ್ತದೆ. 5 ಮುತ್ತುಗಳಿಂದ ತುಂಬಿರುವ ಹೆಸರನ್ನು ಇದು ಒಳಗೊಂಡಿದೆ. ಅದರಲ್ಲಿ ಈ ಹಣೆಯಲ್ಲಿ ಇಡುವ ಸಿಂಧೂರವೂ ಒಂದು. ಆಕೆ ಮದುವೆಯ ಬಳಿಕ ತಪ್ಪದೆ ಸಿಂಧೂರ ಇಡುವ ಸಂಪ್ರದಾಯ ರೂಢಿಯಲ್ಲಿದೆ. ಹಿಂದೂ ಪುರಾಣಗಳಲ್ಲಿ ಸಿಂಧೂರವು ಅಪಾರ ಮಹತ್ವವನ್ನು ಹೊಂದಿದೆ.
ಶಿವನ ಪತ್ನಿ ಪಾರ್ವತಿ ತನ್ನ ಪತಿಯ ಮೇಲಿನ ಭಕ್ತಿ ಸಂಕೇತವಾಗಿ ಹಣೆಯ ಮೇಲೆ ಸಿಂಧೂರವನ್ನು ಧರಿಸುತ್ತಿದ್ದಳು. ಆಕೆ ಶಿವನಿಂದ ಆಶೀರ್ವಾದ ಪಡೆಯುವ ಮುನ್ನ ಹಣೆಯಲ್ಲಿ ಸಿಂಧೂರ ಇಟ್ಟಿದ್ದಳು, ಹೀಗಾಗಿ ಸಿಂಧೂರವು ದೀರ್ಘ ಮತ್ತು ಆನಂದದಾಯಕ ದಾಂಪತ್ಯ ನೀಡಲಿದೆ ಎಂದು ಹೇಳಲಾಗಿದೆ. ಅಲ್ಲಿಂದ ಪಾರ್ವತಿ ಒಂದೂ ದಿನವೂ ಸಿಂಧೂರ ಇಡುವುದನ್ನು ತಪ್ಪಿಸಿರಲಿಲ್ಲವಂತೆ.
ಸಿಂಧೂರವು ದೈವಿಕ ಸೌಂದರ್ಯವನ್ನು ನೀಡುತ್ತದೆ. ಕೆಂಪು ಬಣ್ಣವನ್ನು ಪ್ರೀತಿ ಮತ್ತು ಉತ್ಸಾಹದ ಬಣ್ಣ ಎಂದೂ ಕರೆಯಲಾಗುತ್ತದೆ. ಸಿಂಧೂರವನ್ನು ಶಕ್ತಿ ದೇವತೆಗೂ ಹೋಲಿಸಲಾಗುತ್ತದೆ. ಆಪತ್ತಿನ ಕಾಲದಲ್ಲಿ ಸಿಂಧೂರವು ಮಹಿಳೆಯ ಕಾಪಾಡುತ್ತದೆ ಎಂಬ ನಂಬಿಕೆ ಇದೆ. ಹಾಗೆ ಪತಿಯ ಮರಣದ ನಂತರ ಆಕೆ ಸಿಂಧೂರ ಇಡುವುದನ್ನು ನಿಷೇಧಿಸಲಾಗಿದೆ. ಆಕೆ ತನ್ನ ಜೀವನದ ಒಂದು ಭಾಗ ಕಳೆದುಕೊಂಡಂತೆ ಎಂಬ ಸೂಚಕ ಇದಾಗಿರಲಿದೆ.



Click it and Unblock the Notifications