Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಿಷ್ಣು ಅವತಾರ ಆಮೆ ಉಂಗುರ ಏಕೆ ಧರಿಸುತ್ತಾರೆ? ಇದರಿಂದಾಗುವ ಲಾಭವೇನು ಗೊತ್ತಾ?
ಹಿಂದೂ ಪುರಾಣಗಳ ಪ್ರಕಾರ ವಿಷ್ಣುವಿನ ಹತ್ತು ಅವತಾರಗಳಲ್ಲಿ ಕೂರ್ಮಾವತಾರ ಅಂದ್ರೆ ಆಮೆಯ ಅವತಾರ ಕೂಡ ಒಂದಾಗಿದೆ. ಲಕ್ಷ್ಮೀ ದೇವಿಯು ಕೂಡ ನೀರಿನಿಂದ ಹುಟ್ಟುಕೊಂಡಿದ್ದು, ಹೀಗಾಗಿ ಯಾರು ಭಕ್ತಿಯಿಂದ ಲಕ್ಷ್ಮೀಯನ್ನು ಪೂಜೆ ಮಾಡುತ್ತಾರೆಯೋ ಅವರಿಗೆ ಅಷ್ಟೈಶ್ವರ್ಯ ವೃದ್ಧಿಯಾಗುತ್ತೆ ಎನ್ನುವ ನಂಬಿಕೆಯಿದೆ.
ಆಮೆಯನ್ನು ಶುಭಕರ ಎಂದು ಪರಿಗಣಿಸಲಾಗಿದೆ. ಹೀಗಾಗಿ ಮನೆಯಲ್ಲಿ ಆಮೆಯನ್ನು ಇಡುತ್ತಾರೆ ಇದರ ಜೊತೆಗೆ ಆಮೆ ಉಂಗುರವನ್ನೂ ಧರಿಸುತ್ತಾರೆ. ಹಾಗಾದರೆ ಆಮೆ ಉಂಗುರು ಧರಿಸುವುದರ ಹಿಂದಿನ ಕಥೆ ಏನು? ಆಮೆ ಉಂಗುರ ಧರಿಸುವುದರಿಂದ ಏನೆಲ್ಲಾ ಲಾಭವಿದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ಜ್ಯೋತಿಷ್ಯಶಾಸ್ತ್ರದಲ್ಲಿ ಆಮೆಯನ್ನು ಅದೃಷ್ಟಶಾಲಿ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಇದು ಸಂಪತ್ತನ್ನು ತರುವ ಲಕ್ಷ್ಮಿ ದೇವಿಗೆ ನೇರವಾಗಿ ಸಂಬಂಧಿಸಿದೆ. ವಾಸ್ತವವಾಗಿ, ಹಿಂದೂ ಧರ್ಮದಲ್ಲಿ, ಭಗವಾನ್ ವಿಷ್ಣುವನ್ನು ಪೂಜಿಸುವಾಗ ಆಮೆಗೂ ಒಂದು ಪೂಜೆ ವಿಶೇಷವಾಗಿ ಮಾಡಲಾಗುತ್ತದೆ.

ಆಮೆಯು ನೀರಿನಲ್ಲಿ ವಾಸಿಸುವ ಪ್ರಾಣಿಯಾಗಿದೆ. ಇನ್ನೊಂದೆಡೆ ಲಕ್ಷ್ಮಿ ದೇವಿಯು ನೀರಿನಿಂದ ಹುಟ್ಟಿಕೊಂಡಿದ್ದಾಳೆ ಎಂಬ ನಂಬಿಕೆ ಇದೆ. ಆಮೆ ಉಂಗುರವನ್ನು ಧರಿಸುವಾಗ ನೀವು ನಿಯಮಗಳನ್ನು ತಿಳಿದಿದ್ದರೆ, ಅದು ಸಂಪತ್ತಿನ ಹೊಸ ಮಾರ್ಗಗಳನ್ನು ತೆರೆಯುತ್ತದೆ. ಜೀವನದಲ್ಲಿ ಸೌಕರ್ಯಗಳ ಕೊರತೆ, ಹಣದ ಕೊರತೆ ನೀಗಿಸುತ್ತದೆ. ಶಾಂತಿ ಮತ್ತು ಸಂತೋಷ, ನೆಮ್ಮದಿ ಇರದಿದ್ದರೆ 'ಆಮೆಯ ಉಂಗುರ' ಧರಿಸುವುದರಿಂದ ಜೀವನದಲ್ಲಿ ಆಹ್ಲಾದಕರ ಬದಲಾವಣೆಗಳನ್ನು ತರುತ್ತದೆ ಎಂದು ಹೇಳಲಾಗಿದೆ.
ಅಮೆ ಉಂಗುರ ಧರಿಸುವಾವ ಯಾವ ನಿಯಮ ನೆನೆಪಿನಲ್ಲಿಡಬೇಕು?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸಿಂಹ ಹಾಗೂ ಕನ್ಯಾ ರಾಶಿಯವರು ತಮ್ಮ ಜಾತಕದ ಅನುಸಾರವಾಗಿ ಈ ಆಮೆ ಉಂಗುರವನ್ನು ಧರಿಸಬೇಕು ಎನ್ನಲಾಗಿದೆ. ಆಮೆಯ ಉಂಗುರ ಧರಿಸುವಾಗ, ಮೊದಲನೆಯದಾಗಿ, ಆಮೆಯ ಮುಖವು ನಿಮ್ಮ ಕಡೆಗೆ ಇರಬೇಕೆಂದು ಗಮನಿಸಿ. ಈ ಹಣವು ನಿಮ್ಮ ಕಡೆಗೆ ಆಕರ್ಷಿತವಾಗುತ್ತದೆ ಮತ್ತು ಕುಟುಂಬದಲ್ಲಿ ಸಂಪತ್ತು ಮತ್ತು ಸಂತೋಷವು ಬರುತ್ತದೆ.
ಆಮೆಯ ಮುಖವು ನಿಮ್ಮ ಮುಖದ ವಿರುದ್ಧ ದಿಕ್ಕಿನಲ್ಲಿದ್ದರೆ, ನೀವು ಆರ್ಥಿಕ ನಷ್ಟವನ್ನು ಅನುಭವಿಸಬಹುದು, ಬಲಗೈಯ ಮಧ್ಯದ ಬೆರಳಿಗೆ ಮಾತ್ರ ಆಮೆಯ ಉಂಗುರವನ್ನು ಧರಿಸಬೇಕು ಎಂದು ಹೇಳಲಾಗಿದೆ.
ಇದನ್ನು ಶುಕ್ರವಾರದಂದು ಮಾತ್ರ ಧರಿಸಬೇಕು (ಶುಕ್ರವಾರ ಲಕ್ಷ್ಮಿ ದೇವಿಯ ದಿನ). ಆಮೆ ಉಂಗುರವನ್ನು ಬೆಳ್ಳಿಯಲ್ಲಿ ಮಾತ್ರ ಮಾಡಬೇಕು. 'ಟರ್ಟಲ್ ರಿಂಗ್' ಅನ್ನು ತಯಾರಿಸುವಾಗ, ಆಮೆಯ ಹಿಂಭಾಗದಲ್ಲಿ 'ಶ್ರೀ' ಹಚ್ಚೆ ಹಾಕಲಾಗಿದೆ ಎಂಬುದನ್ನು ನೆನಪಿನಲ್ಲಿಡಿ.
ಆಮೆಯ ಉಂಗುರ ತೆಗೆದು ಎಲ್ಲೆಂದರಲ್ಲಿ ಇಡಬಾರದು ಅದನ್ನು ಪೂಜಾ ಕೋಣೆಯಲ್ಲಿ ಅಥವಾ ದೇವರ ಫೋಟೋ ಮುಂದೆ ಇಡಬೇಕು. ನೀರಿನಲ್ಲಿ ಹಾಕಿ ಇಟ್ಟರೆ ಉತ್ತಮ.
ಒಮ್ಮೆ ತೆಗೆದಿಟ್ಟು ಮತ್ತೊಮ್ಮೆ ಧರಿಸಬೇಕೆಂಬ ನಿಯಮವೂ ಇದೆ. ಹಾಲು ತುಂಬಿದ ಬಟ್ಟಲಿನಲ್ಲಿ ಹಾಕಿ ನಂತರ ಅದನ್ನು ಲಕ್ಷ್ಮಿ ದೇವಿಯ ಪಾದಗಳಿಗೆ ಸ್ಪರ್ಶಿಸಿ ಧರಿಸಿ.
ವಾಸ್ತು ಶಾಸ್ತ್ರ ಮತ್ತು ಫೆಂಗ್ ಶೂಯಿ ಚೀನಿ ಶಾಸ್ತ್ರದ ಪ್ರಕಾರ ನಿಮ್ಮ ಜೀವನದಲ್ಲಿ ಸಮತೋಲನ, ಸಕಾರಾತ್ಮಕತೆ ಮತ್ತು ಪ್ರಶಾಂತತೆಯನ್ನು ತರಲು ಆಮೆಯ ಉಂಗುರವನ್ನು ಧರಿಸಲು ಶಿಫಾರಸು ಮಾಡಲಾಗುತ್ತದೆ. ಇದು ನಿಮ್ಮ ವೈಯಕ್ತಿಕ ಸಂಬಂಧಗಳ ಮೇಲೆ ಧನಾತ್ಮಕ ಪರಿಣಾಮ ಬೀರುವುದಲ್ಲದೇ ಪ್ರೀತಿ ಮತ್ತು ಬಾಂಧವ್ಯವನ್ನು ಕೂಡ ಹೆಚ್ಚು ಮಾಡುತ್ತದೆ.
ಭಗವಾನ್ ವಿಷ್ಣು ಮತ್ತು ಲಕ್ಷ್ಮಿ ದೇವಿಯ ಜೊತೆ ನಿಕಟ ಸಂಪರ್ಕ ಹೊಂದಿರುವುದರಿಂದ ಆಮೆಯ ಉಂಗುರವನ್ನು ಧರಿಸುವುದರಿಂದ ನಿಮ್ಮ ಮೇಲೆ ಲಕ್ಷ್ಮೀ ಹಾಗೂ ವಿಷ್ಣುವಿನ ಆಶೀರ್ವಾದ ಯಾವಾಗಲೂ ಇರುತ್ತಂತೆ. ಹಾಗೂ ನೀವು ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಜೊತೆಗೆ ನಿಮ್ಮ ಜೀವನದಲ್ಲಿ ಯಶಸ್ಸು ಪಡೆದುಕೊಳ್ಳಲು ಸಾಧ್ಯವಾಗುತ್ತಂತೆ.



Click it and Unblock the Notifications