Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಹನುಮಂತನ ಈ ಬಗೆಯ ಫೋಟೋಗಳನ್ನು ಮನೆಯಲ್ಲಿಡಬಾರದು, ಇಡುವುದಾದರೆ ಯಾವ ಫೋಟೋ ಬಳಸಬಹುದು?
ಬದುಕಿನಲ್ಲಿ ಏನಾದರು ಕಷ್ಟ ಬಂದಾಗ ಹನುಮಂತನ ಭಕ್ತಿಯಿಂದ ಪ್ರಾರ್ಥಿಸಿದರೆ ಸಾಕು ಆ ಕಷ್ಟಗಳು ದೂರಾಗುವುದು, ಶನಿ ನೀಡುವ ಕಾಟ ಕೂಡ ಹನುಮಂತನ ಕೃಪೆಯಿಂದ ತಡೆಗಟ್ಟಬಹುದು ಎಂಬ ಬಲವಾದ ನಂಬಿಕೆ ಹನುಮಂತನ ಆರಾಧಿಸುವ ಭಕ್ತರಲ್ಲಿದೆ.
ಪ್ರತಿ ಮಂಗಳವಾರ ಹನುಮಂತನ ಪೂಜೆ ಮಾಡಿದರೆ ಶ್ರೇಷ್ಠ ಎಂದು ನಂಬಲಾಗುವುದು. ನೀವು ಹನುಮಂತನ ಭಕ್ತರಾಗಿದ್ದರೂ ಮನೆಯಲ್ಲಿ ಹನುಮಂತನ ಫೋಟೋ ಅಥವಾ ಮೂರ್ತಿ ಇಟ್ಟು ಪೂಜಿಸಬಾರದು ಎಂದು ಹೇಳಲಾಗುವುದು, ಅದರಲ್ಲಿಯೂ ಹನುಮಂತನ ಈ ಬಗೆಯ ಮೂರ್ತಿಗಳನ್ನು ಇಡಲೇಬಾರದು ಎಂದು ಎಂದು ಹೇಳಲಾಗುವುದು.

ಹನುಮಂತ ಎದೆಯನ್ನು ಸೀಳಿಕೊಂಡಿರುವ ಫೋಟೋ
ಪೌರಾಣಿಕ ಕತೆ ಪ್ರಕಾರ ಹನುಮಂತ ಶ್ರೀರಾಮನ ಮಹಾನ್ ಭಕ್ತ. ತಾನು ಶ್ರೀರಾಮನ ಎಷ್ಟುಆರಾಧಿಸುತ್ತೇನೆ ಎಂಬುವುದರ ಸಾಕ್ಷಿಯಾಗಿ ತನ್ನ ಎದೆಯನ್ನು ಸೀಳುತ್ತಾನೆ, ಅಲ್ಲಿ ಶ್ರೀರಾಮ-ಸೀತೆಯೇ ಕಾಣಿಸುತ್ತಾರೆ ಎಂಬ ಕತೆಯಿದೆ. ಆದರೆ ಈ ಬಗೆಯ ಫೋಟೋ ಮನೆಯಲ್ಲಿ ಇಒ
ಸಂಜೀವಿನಿ ಬೆಟ್ಟ ಎತ್ತಿಕೊಂಡು ಹಾರುತ್ತಿರುವ ಹನುಮಂತ
ಈ ಫೋಟೋವನ್ನು ಕೂಡ ಮನೆಯಲ್ಲಿ ಇಡಬಾರದು, ಈ ಫೋಟೋ ಅಸ್ಥಿರತೆ ಉಂಟು ಮಾಡುತ್ತದೆ, ಹಾಗಾಗಿ ಈ ಬಗೆಯ ಫೋಟೋವನ್ನು ಇಡಲೇಬಾರದು ಎಂದು ಹೇಳಲಾಗುವುದು.
ಲಂಕಾ ಸುಡುತ್ತಿರುವ ಹನುಮಂತ
ಸೀತೆಯ ರಕ್ಷಣೆಗೆ ಹೋಗುವ ಹನುಮಂತ ಲಂಕೆಯನ್ನು ಸುಟ್ಟು ಹಾಕುತ್ತಾನೆ, ಆದರೆ ಈ ಫೋಟೋ ಮನೆಯಲ್ಲಿಡಬಾರದು, ಇದು ನಕರಾತ್ಮಕತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುವುದು
ಶ್ರೀರಾಮ ಮತ್ತು ಲಕ್ಷ್ಮಣರನ್ನು ಭುಜದ ಮೇಲೆ ಎತ್ತಿಕೊಂಡಿರುವ ಫೋಟೋ
ಈ ಫೋಟೋವನ್ನು ಕೂಡ ಮನೆಯಲ್ಲಿ ಇಡಬಾರದು, ಹನುಮಂತ ತನ್ನ ಶ್ರೀರಾಮ ಮತ್ತು ಲಕ್ಷ್ಮಣರನ್ನು ಭುಜದ ಮೇಲೆ ಹೊತ್ತುಕೊಂಡಾಗ ಬೇರೆ ಯಾವುದರ ಬಗ್ಗೆಯೂ ಯೋಚಿಸುವುದಿಲ್ಲ, ಹಾಗಾಗಿ ಹನುಮಂತನ ಪ್ರಭಾವ ನಿಮ್ಮ ಮನೆ ಮೇಲೆ ಇರುವುದಿಲ್ಲ, ಹಾಗಾಗಿ ಈ ಬಗೆಯ ಫೋಟೊ ಮನೆಯಲ್ಲಿರಬಾರದು.
ಬೆಡ್ ರೂಂನಲ್ಲಿ ಹನುಮಂತನ ಫೋಟೋಇಡಬಾರದು
ಹನುಮಂತ ಬ್ರಹ್ಮಚಾರಿ, ಹಾಗಾಗಿ ವಿವಾಹಿತರು ತಮ್ಮ ಬೆಡ್ ರೂಂನಲ್ಲಿ ಹನುಮಂತನ ಫೋಟೋ ಇಡಬಾರದು.
ಇದರ ಬದಲಿಗೆ ಮನೆಯಲ್ಲಿ ಹನುಮಂತನ ಯಾವ ಫೋಟೋ ಇಡಬಹುದು
ರಾಮ್ ದರ್ಬಾರ್ ಫೋಟೋ ಇಟ್ಟು ಪೂಜಿಸಬಹುದು. ಇದರಲ್ಲಿ ಶ್ರೀರಾಮ-ಸೀತೆ, ಲಕ್ಷ್ಮಣ ಇವರ ಜೊತೆಗೆ ಹನುಮಂತಕೂಡ ಇರುತ್ತಾನೆ, ಇಂಥ ಫೋಟೋ ಇಟ್ಟು ಪೂಜಿಸಿದರೆ ಮನೆಗೆ ಶ್ರೇಯಸ್ಸು ಉಂಟಾಗುವುದು.
ಹನುಮಂತನ ದೇವಾಲಯಕ್ಕೆ ಹೋಗಿ ಪೂಜಿಸುವುದು
ಹನುಮಂತನ ಆರಾಧಿಸಬೇಕೆಂದರೆ ಕೆಲವೊಂದು ಕಠಿಣ ನಿಯಮಗಳೀವೆ, ಅದರಂತೆ ಪೂಜೆಯನ್ನು ಮಾಡಬೇಕು, ಇಲ್ಲದಿದ್ದರೆ ದೋಷ ಉಂಟಾಗುವುದು, ಹಾಗಾಗಿ ಹನುಮಂತ ಮೂರ್ತಿಯನ್ನು ಮನೆಯಲ್ಲಿ ಪೂಜಿಸುವುದು ಒಳ್ಳೆಯದಲ್ಲ. ಹನುಮಂತನ ಭಕ್ತರು ಮಂಗಳವಾರ ಹಾಗೂ ಶನಿವಾರ ಹನುಮಂತನ ದೇವಾಲಯಕ್ಕೆ ಹೋಗಿ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿ ಬರಬಹುದು.
ಹನುಮಾನ್ ಚಾಲೀಸ ಪಠಿಸಿ
ಹನುಮಾನ್ ಕೃಪೆ ಪಡೆಯಲು ಮನೆಯಲ್ಲಿ ಹನುಮಂತನ ಫೋಟೋ ಇಡಬೇಡಿ ಬದಲಿಗೆ ನೀವು ಪ್ರತಿದಿನ ಹನುಮಾನ್ ಚಾಲೀಸ ಪಠಿಸಿ.



Click it and Unblock the Notifications