Latest Updates
-
ಆಗಸ್ಟ್ 15 ಧ್ವಜಾರೋಹಣ: ಬೆಂಗಳೂರಿನಲ್ಲಿ ಜೋಡಿಗಳು ಪಾಲಿಸಬೇಕಾದ ಪ್ರಮುಖ ನಿಯಮಗಳಿವು! -
ಆನ್ಲೈನ್ ಸೆಕ್ಸ್ಟಾರ್ಷನ್ ವಂಚನೆ: ಅಪರಿಚಿತ ವಿಡಿಯೋ ಕಾಲ್ ರಿಸೀವ್ ಮಾಡಿದ್ರೆ ಹುಷಾರ್, ಇಲ್ಲಿದೆ ಎಚ್ಚರಿಕೆ! -
ಮಳೆಗಾಲದ ಕಿರಿಕಿರಿ ಬೇಡವೇ? ₹999 ಒಳಗೆ ಸಿಗುವ ಈ ಸ್ಮಾರ್ಟ್ ವಸ್ತುಗಳು ನಿಮ್ಮ ಮನೆಗೆ ಮಸ್ಟ್! -
ಜಂಕ್ ಫುಡ್ ಪ್ಯಾಕೆಟ್ ಮೇಲೆ ಎಚ್ಚರಿಕೆ ಲೇಬಲ್ ಕಡ್ಡಾಯ: ಸುಪ್ರೀಂ ಕೋರ್ಟ್ನಿಂದ ಕಂಪನಿಗಳಿಗೆ ಖಡಕ್ ಎಚ್ಚರಿಕೆ! -
ಆಗಸ್ಟ್ 14 ಮತ್ತು 15ರ ಗೊಂದಲ ಬೇಡ: ಸೋಶಿಯಲ್ ಮೀಡಿಯಾದಲ್ಲಿ ಡಿಪಿ ಮತ್ತು ಪೋಸ್ಟ್ ಹಾಕುವಾಗ ಈ ತಪ್ಪು ಮಾಡ್ಬೇಡಿ! -
ಬಂಬಲ್ ಆಪ್ನಲ್ಲಿ ಮಹತ್ವದ ಬದಲಾವಣೆ: ಡೇಟಿಂಗ್ನಲ್ಲಿ ಸಂಭಾಷಣೆ ಶುರು ಮಾಡುವುದು ಹೇಗೆ? -
ಬೆಂಗಳೂರಿನ ಡೇಟಿಂಗ್ ಆ್ಯಪ್ಗಳಲ್ಲಿ ಹೊಸ ವಂಚನೆ: ಪಬ್ಗಳಲ್ಲಿ ಹಣ ಕಳೆದುಕೊಳ್ಳದಂತೆ ಪಾರಾಗುವುದು ಹೇಗೆ? -
ಬೆಂಗಳೂರಿನಲ್ಲಿ ಮಳೆಗಾಲ: ನಿಮ್ಮ ಅಪಾರ್ಟ್ಮೆಂಟ್ನಲ್ಲಿ ಹಾವುಗಳ ಕಾಟವೇ? ಈ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿ! -
ಇಂದು ರಾತ್ರಿ ಆಕಾಶದಲ್ಲಿ ಅದ್ಭುತ: ಪರ್ಸೀಡ್ಸ್ ಉಲ್ಕಾಪಾತ ವೀಕ್ಷಿಸಲು ಮತ್ತು ಫೋಟೋ ತೆಗೆಯಲು ಸರಳ ಟಿಪ್ಸ್ -
ಮಳೆಗಾಲದಲ್ಲಿ ಹೊರಗಿನ ಊಟ ಅಪಾಯಕಾರಿ: ಆನ್ಲೈನ್ ಫುಡ್ ಆರ್ಡರ್ ಮಾಡುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
5 ರೂಪಾಯಿ ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!
ಮದುವೆ ಅನ್ನೋದು ಏಳೇಳು ಜನ್ಮದ ಬಂಧ ಎನ್ನಲಾಗುತ್ತೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಮದುವೆ, ವಿಚ್ಛೇದನ ಹೆಚ್ಚಾಗುತ್ತಿದೆ. ಸಣ್ಣ ಪುಟ್ಟ ವಿಚಾರಕ್ಕೂ ಈಗ ವಿಚ್ಛೇದನ ಪಡೆಯವುದು ನಡೆಯುತ್ತಲೇ ಇದೆ. ಅದರಲ್ಲೂ ಗಂಡ ಹೆಂಡತಿ ಈಗ ಚಿಕ್ಕದಾಗಿ ಗಲಾಟೆ ನಡೆದರೂ ವಿಚ್ಛೇದನಕ್ಕೆ ಅರ್ಜಿ ಹಾಕುವ ಪ್ರಸಂಗಗಳು ನಡೆಯುತ್ತಿವೆ.
ಅದರೆ ಇತ್ತೀಚಿನ ದಿನಗಳಲ್ಲಿ ನೀವು ಕೇಳಿರಬಹುದು. ಪತ್ನಿ ಹೆಚ್ಚು ಮೊಬೈಲ್ ಬಳಸುತ್ತಾಳೆ ಎಂದು ವಿಚ್ಚೇದನ ಪಡೆಯುವುದು, ಗಂಡ ತಡವಾಗಿ ಮನೆಗೆ ಬರುತ್ತಾನೆ ಎಂದು ವಿಚ್ಛೇದನ ಪಡೆಯುವುದು, ಪತ್ನಿ ಕೋಳಿ ಸಾರು ಮಾಡಲಿಲ್ಲ ಎಂದು ವಿಚ್ಛೇದನ ಪಡೆದ ಚಿತ್ರ ವಿಚಿತ್ರ ಪ್ರಸಂಗಗಳ ಕೇಳಿದ್ದೇವೆ.

ಆದ್ರೆ ಇಲ್ಲೊಂದು ಪ್ರಕರಣದಲ್ಲೂ ವಿಚಿತ್ರ ಕಾರಣಕ್ಕೆ ಪತ್ನಿ ಗಂಡನಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದಾಳೆ. ಆಕೆ ಪತಿ ಕುರ್ಕುರೆ ತೆರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಆಘಾತಕಾರಿ ಮತ್ತು ವಿಚಿತ್ರ ಘಟನೆಯೊಂದು ವರದಿಯಾಗಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ವಿಚಿತ್ರ ಬೆಳವಣಿಗೆ ನಡೆದಿದೆ.
ಕಳೆದ ವರ್ಷ ವಿವಾಹವಾಗಿದ್ದ ಜೋಡಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿ ವಿಚ್ಚೇದನಕ್ಕೂ ಅರ್ಜಿ ಸಲ್ಲಿಸಿದೆ. ಆಕೆ ನಿತ್ಯವೂ ಕುರ್ಕುರೆ ತಿಂಡಿ ಸವಿಯುವ ಅಭ್ಯಾಸ ಇಟ್ಟುಕೊಂಡಿದ್ದಳಂತೆ. ಪತಿ ಸಹ ನಿತ್ಯ 5 ರೂಪಾಯಿ ನೀಡಿ ಕುರ್ಕರೆ ತಂದು ಕೊಡುತ್ತಿದ್ದನಂತೆ. ಆದ್ರೆ ಒಂದೊಂದು ದಿನ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ವರದಿಯಾಗಿದೆ.
ಯಾವ ದಿನ ಪತಿ ಕುರ್ಕುರೆ ತರಲು ಮರೆಯುತ್ತಾನೋ ಅಂದು ಮನೆಯಲ್ಲಿ ಗಲಾಟೆ ಉಂಟಾಗುತ್ತಿತ್ತಂತೆ. ಪತ್ನಿ ತಿಂಡಿ ಬೇಕು ಬೇಕು ಹಠ ಹಿಡಿದು ಮನೆಯಲ್ಲಿ ರಂಪಾಟ ನಡೆಸುತ್ತಿದ್ದಳಂತೆ. ಇದೇ ರೀತಿ ಒಂದು ದಿನ ಗಲಾಟೆ ದೊಡ್ಡದಾಗಿ ಆಕೆ ತವರು ಮನೆ ಸೇರಿದ್ದಳು.
ಇಲ್ಲಿಗೆ ಗಲಾಟೆ ತಣ್ಣಗಾದೆ ಆಕೆ ವಿಚ್ಚೇದನಕ್ಕೆ ಅರ್ಜಿ ಸಹ ಹಾಕಿದ್ದಾಳೆ. ಕಳೆದ ವರ್ಷ ವಿವಾಹವಾದ ದಂಪತಿಯನ್ನು ಆಗ್ರಾದ ಶಹಗಂಜ್ ಪೊಲೀಸರು ಕುಟುಂಬ ಸಮಾಲೋಚನೆಗಾಗಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಪತಿ, ತನ್ನ ಹೇಳಿಕೆಯಲ್ಲಿ, ಕುರ್ಕುರೆಗಾಗಿ ತನ್ನ ಹೆಂಡತಿಯ ಅಸಾಮಾನ್ಯ ಬಯಕೆ ಕುರಿತು ಆತ ಕಳವಳ ವ್ಯಕ್ತಪಡಿಸಿದ್ದನು.
ಮತ್ತೊಂದೆಡೆ, ಪತಿ ತನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾನೆ ಹೀಗಾಗಿ ನಾನು ತವರು ಮನೆ ಸೇರಿದೆ ಎಂದು ಆಕೆ ಪೊಲೀಸರ ಬಳಿ ಹಾಗೂ ವಕೀಲರ ಬಳಿ ವಿವರಿಸಿದ್ದಾಳೆ. ಆದರೆ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಜನರು ಅಕ್ಷರಶಃ ಶಾಕ್ ಆಗಿದ್ದಾರೆ.
ಈ ರೀತಿ ಕುರ್ಕುರೆಗಾಗಿ ವಿಚ್ಚೇದನ ಪಡೆಯಲು ಮುಂದಾದರೆ ಮುಂದೊಂದು ದಿನ ಸಮಾಜದಲ್ಲಿ ವಿವಾಹಿತರಿಗಿಂತಲೂ ವಿಚ್ಛೇದನ ಪಡೆದ ಜನರೇ ಹೆಚ್ಚಾಗಿರುತ್ತಾರೆ ಎಂಬುದು ನೆಟ್ಟಿಗರ ಅಭಿಪ್ರಾಯವಾಗಿದೆ. ಜೊತೆಗೆ ಈ ರೀತಿ ಸಣ್ಣಪುಟ್ಟ ವಿಚಾರಕ್ಕೆ ವಿಚ್ಚೇದನ ಪಡೆಯುವ ಬದಲು ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳುವುದು 100 ಪಟ್ಟು ಮೇಲು ಎಂದು ಮತ್ತೆ ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ.
ಇದಕ್ಕೂ ಮೊದಲು ವಾರದ ಹಿಂದಷ್ಟೇ ಇದಕ್ಕಿಂತ ವಿಚಿತ್ರವಾದ ಕಾರಣಕ್ಕೆ ಪತಿಯೊಬ್ಬ ಪತ್ನಿಯಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದ. ಹೈದರಾಬಾದ್ನ ನಿಖಂದರಾಬಾದ್ ನಲ್ಲಿ ಪತಿಯೊಬ್ಬ ಪತ್ನಿ ವಿರುದ್ಧ ಅಸಮಾಧಾನಗೊಂಡು ವಿಚ್ಛೇದನ ಪಡೆಯಲು ಮುಂದಾಗಿದ್ದ. ಆಕೆ ರಾಜಕೀಯದಲ್ಲಿ ತನ್ನನ್ನು ಗುರುತಿಸಿಕೊಳ್ಳಲು ಈ ಚುನಾವಣೆಯ ಸಮಯದಲ್ಲಿ ಹೆಚ್ಚು ಸಮಯ ರಾಜಕೀಯ ಪಕ್ಷ ಹಾಗೂ ನಾಯಕರ ಜೊತೆ ಓಡಾಡುತ್ತಾಳೆ ಎಂಬ ಕಾರಣಕ್ಕೆ ಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಪ್ರಸಂಗ ಸಹ ನಡೆದಿದೆ.



Click it and Unblock the Notifications