Latest Updates
-
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು!
ಕಾಣೆಯಾಗಿದ್ದ ಮಹಿಳೆ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆ, ಆಕೆಯ ದೇಹವನ್ನು ಹೊರ ತೆಗೆದಿದ್ದು ಹೇಗೆ?
ತುಂಬಾನೇ ವಿಚಿತ್ರವಾದ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ, ಮೂರು ದಿನಗಲಿಂದ ನಾಪತ್ತೆಯಾಗಿದ್ದ ಮಹಿಳೆ ಕೊನೆಗೆ ಕಂಡು ಬಂದಿದ್ದು ಹೆಬ್ಬಾವಿನ ಹೊಟ್ಟೆಯಲ್ಲಿ.
45 ವರ್ಷದ ಮಹಿಳೆ ದೊಡ್ಡ ಹೆಬ್ಬಾವಿನ ಹೊಟ್ಟೆಯಲ್ಲಿ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ, ಹೆಬ್ಬಾವಿನ ಹೊಟ್ಟೆಯಲ್ಲಿ ಮಹಿಳೆಯನ್ನು ನೋಡಿ ಆಕೆಯ ಗಂಡ ಹಾಗೂ ಸೌತ್ ಸುಲವೆಸಿ ಪ್ರಾವಿನೆನ್ಸ್ ಗ್ರಾಮಸ್ಥರಿಗೆ ಅಚ್ಚರಿಯಾಗಿದೆ. ಆ ಹೆಬ್ಬಾವು 16 ಅಡಿ ಉದ್ದವಿತ್ತು.

ಆಕೆ ಗುರುವಾರ ರಾತ್ರಿಯಿಂದ ಕಾಣೆಯಾಗಿದ್ದಳು, ಆಕೆ ಕಾಣೆಯಾದ ವಿಷಯ ತಿಳಿಯುತ್ತಿದ್ದಂತೆ ಇಡೀ ಗ್ರಾಮದವರು ಆಕೆ ಹುಡುಕಾಟ ಪ್ರಾರಂಭಿಸಿದ್ದಾರೆ. ಹೀಗೆ ಹುಡುಕುವಾಗ ಆಕೆಯ ವಸ್ತುಗಳು ಪತ್ತೆಯಾಗಿದೆಮಜೊತೆಗೆ ದೊಡ್ಡ ಹೆಬ್ಬಾವು ಕಂಡು ಬಂದಿದೆ, ಅದರ ಹೊಟ್ಟೆ ತುಂಬಾನೇ ದಪ್ಪವಾಗಿತ್ತು.
ಅವರಿಗೆ ಆ ಹೆಬ್ಬಾವು ಆಕೆಯನ್ನು ತಿಂದಿರಬಹುದೆಂದು ಅವರಿಗೆ ಸಂಶಯವಾಗುತ್ತೆ, ಏಕೆಂದರೆ ಭರ್ಜರಿ ಊಟದ ಬಳಿಕ ಆ ಹಾವು ತುಂಬಾನೇ ಶಾಂತವಾಗಿತ್ತು, ಅದರ ಹೊಟ್ಟೆ ತುಂಬಿತ್ತು, ಇದನ್ನು ನೋಡಿದ ಮೇಲೆ ಹೆಬ್ಬಾವಿನ ಹೊಟ್ಟೆಯನ್ನು ಕತ್ತರಿಸುವ ಬಗ್ಗೆ ಯೋಚಿಸುತ್ತಾರೆ. ಅದರಂತೆ ಹಾವಿನ ಹೊಟ್ಟೆ ಕತ್ತರಿಸುತ್ತಿದ್ದಂತೆ ಆಕೆಯ ಬಟ್ಟೆ ಕಾಣ ಸಿಗುತ್ತದೆ. ನೋಡಿದರೆ ಫರಿದಾ ಹೆಬ್ಬಾವಿನ ಹೊಟ್ಟೆಯಲ್ಲಿ ಸತ್ತು ಹೋಗಿರುತ್ತಾಳೆ.
ಈ ಬಗೆಯ ಘಟನೆ ಅಪರೂಪವಾದರೂ ಇದುವರೆಗೆ ನಡೆದೇ ಇಲ್ಲ ಎಂದು ಹೇಳುವಂತಿಲ್ಲ, ಕಳೆದ ವರ್ಷ ಇಂಡೋನೇಷ್ಯಾದಲ್ಲಿಯೇ ಒಬ್ಬ ರೈತನನ್ನು 8 ಅಡಿ ಉದ್ದ ಹೆಬ್ಬಾವು ನುಂಗಿತ್ತು. 2018ರಲ್ಲಿ 54 ವರ್ಷದ ಮಹಿಳೆಯನ್ನು ಹೆಬ್ಬಾವು ತಿಂದಿತ್ತು, ಹೀಗಾಗಿ ದೈತ್ಯ ಹೆಬ್ಬಾವು ಮನುಷ್ಯನನ್ನು ತಿಂದಂಥ ಘಟನೆಗಳು ನಡೆದಿದೆ.
ಈ ಘಟನೆಯ ಬಳಿಕ ಆಕೆಯ ಸಾವಿಗೆ ಗ್ರಾಮಸ್ಥರು ಕಂಬನಿ ಹಾಕಿದ್ದಾರೆ, ಆಕೆಯ ಗಂಡ ಆಕೆಯನ್ನು ಒಬ್ಬಳೇ ಬಿಟ್ಟು ತಪ್ಪು ಮಾಡಿದೆ ಎಂದು ಅಳುತ್ತಿದ್ದಾನೆ. ಹೆಬ್ಬಾವು ಆಕೆಯ ಕಾಲಿಗೆ ಕಚ್ಚಿ ಸುತ್ತಿಕೊಂಡು ಆಕೆಯನ್ನು ಉಸಿರುಕಟ್ಟಿಸಿದ ಬಳಿಕ ನುಂಗಿದೆ ಎಂದು ಹೇಳಲಾಗಿದೆ.
ಸರ್ಜರಿ ಮೂಲಕ ಆಕೆಯ ದೇಹವನ್ನು ಹೊರ ತೆಗೆಯಲಾಯ್ತು?
ಆಕೆಯ ದೇಹವನ್ನು ತಜ್ಞರು ಸೇರಿ ಆಪರೇಷನ್ ಮಾಡಿ ಹೊರತರಲಾಯ್ತು, ಹಾವಿಗೆ ಶಸ್ತ್ರ ಚಿಕಿತ್ಸೆ ಮಾಡಿ, ಅದರ ಆರೈಕೆ ಮಾಡಲಾಗಿದೆ, ಇದರಿಂದಾಗಿ ಹಾವಿಗೆ ಯಾವುದೇ ತೊಂದರೆ ಆಗಿಲ್ಲ.
ಈ ಘಟನೆಯ ಬಳಿಕ ಆ ಊರನವರು ತುಂಬಾನೇ ಎಚ್ಚೆತ್ತುಕೊಂಡಿದ್ದಾರೆ, ಗಾಡಿಗೆ ಸಮೀಪದ ಆ ಹಳ್ಳಿಯ ಜನರು ಒಬ್ಬೊಬ್ಬರೇ ಓಡಾಡಲು ಹೆದರುತ್ತಿದ್ದಾರೆ.



Click it and Unblock the Notifications