Latest Updates
-
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್
ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
ಪ್ರತಿವರ್ಷ ಏಪ್ರಿಲ್ 22ರಂದು ವಿಶ್ವ ಭೂಮಿ ದಿನವನ್ನು ಆಚರಿಸಲಾಗುವುದು. ಭೂಮಿ ರಕ್ಷಣೆಯ ಮಹತ್ವ ತಿಳಿಸಲು ಈ ದಿನವನ್ನು ಆಚರಿಸಲಾಗುವುದು. ಈಗಾಗಲೇ ಭೂಮಿಯಲ್ಲಿ ಹವಾಮಾನ ಬದಲಾವಣೆಯಿಂದಾಗಿ ಪ್ರಕೃತಿ ವಿಕೋಪಗಳ ಸಂಭವಿಸುತ್ತಿದೆ.
ಮರುಭೂಮಿಯಾಗಿದ್ದ ದುಬೈನಲ್ಲಿ ಪ್ರವಾಗ ಉಕ್ಕಿ ಹರಿದಿದೆ, ಭಾರತದ ಹಲವು ಕಡೆ ಬರಗಾಲ ಉಂಟಾಗಿದೆ, ಭಾರತದಲ್ಲಿ ಮಾತ್ರವಲ್ಲ ಹಲವು ದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಈ ಭೂಮಿಯನ್ನು ಮನುಷ್ಯ ಎಷ್ಟು ಸ್ವಾರ್ಥಿಯಾಗಿ ಬಳಸುತ್ತಾನೋ ಪ್ರಕೃತಿ ಅಷ್ಟೇ ಪ್ರಮಾಣದಲ್ಲಿ ನಷ್ಟವನ್ನು ಉಂಟು ಮಾಡುತ್ತದೆ, ಆದ್ದರಿಂದ ಪ್ರಕೃತಿಯನ್ನು ಕಾಪಾಡಿದರೆ ಮಾತ್ರ ಸಂತೋಷ, ಸಮೃದ್ಧಿಯ ಬದುಕು ನಡೆಸಲು ಸಾಧ್ಯ.

ವಿಶ್ವ ಭೂಮಿ ದಿನದ ಇತಿಹಾಸ
ವಿಶ್ವ ಭೂಮಿ ದಿನದ ಇತಿಹಾಸ ನೋಡುವುದಾದರೆ ವಿಶ್ವ ಭೂ ದಿನವನ್ನು ಮೊದಲ ಬಾರಿಗೆ1970 , ಏಪ್ರಿಲ್ 22ರಂದು ಆಚರಿಸಿದರು. 1969 ರಲ್ಲಿ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ನಡೆದ UNSEO ಸಮ್ಮೇಳನದಲ್ಲಿ ಶಾಂತಿ ಕಾರ್ಯಕರ್ತ ಜಾನ್ ಮೆಕ್ ಕಾನ್ನೆಲ್ ಭೂಮಿ ಮತ್ತು ಶಾಂತಿಯ ಪರಿಕಲ್ಪನೆಯ ಬಗ್ಗೆ ಪ್ರಸ್ತಾಪಿಸಿದರು. ವಿಶ್ವ ಭೂ ದಿನವನ್ನು ಮೊದಲು 1970 ಮಾರ್ಚ್ 21ರಂದು ನಡೆಸಲು ಪ್ರಸ್ತಾಪಿಸಲಾಗಿತ್ತು.
ನಂತರ, ಯುನೈಟೆಡ್ ಸ್ಟೇಟ್ಸ್ ಸೆನೆಟರ್ ಗೇಲಾರ್ಡ್ ನೆಲ್ಸನ್ ಏಪ್ರಿಲ್ 22,1970 ರಂದು ರಾಷ್ಟ್ರವ್ಯಾಪಿ ಪರಿಸರ ಕಾಳಜಿ ನಡೆಸಲು ಅಭಿಮಾನ ನಡೆಸಲಾಯ್ತು, ಈ ದಿನವನ್ನು 'ಅರ್ಥ್ ಡೇ' ಅಂದರೆ ಭೂಮಿ ದಿನವಂದು ಕರೆಯಿತು, ಅಲ್ಲಿಂದ ವಿಶ್ ಭೂಮಿ ದಿನವನ್ನು ಆಚರಿಸಲಾಗುವುದು.
ಮನುಷ್ಯ ಭೂಮಿಗೆ ತೊಂದರೆ ನೀಡಬಾರದು
ಮನುಷ ಭೂಮಿಗೆ ತೊಂದರೆ ಕೊಟ್ಟರೆ ಅದರ ಕೆಟ್ಟ ಫಲವನ್ನೂ ಅವನು ಅನುಭವಿಸಬೇಕಾಗುತ್ತದೆ, ಆದ್ದರಿಮದ ಭೂಮಿಗೆ ಹಾನಿಯಾಗುವ ಕಾರ್ಯಗಳನ್ನು ಮಾಡಬಾರದು. ನಾವು ನಮ್ಮ ಮುಂದಿನ ಪೀಳಿಗೆಗೆ ಮಾಡುವ ಅತಿ ದೊಡ್ಡ ಆಸ್ತಿಯೆಂದರೆ ಈ ಭೂಮಿಯ ರಕ್ಷಣೆ. ಆಸ್ತಿ, ಅಂತಸ್ತು ಏನೇ ಮಾಡಿದರೂ ಈ ಭೂಮಿ ಮುನಿಸಿದರೆ ಇರುತ್ತದೆಯೇ? ಭೂಕಂಪನದಿಂದ ಕಟ್ಟಡಗಳ ನೆಲ ಸಮವಾಗಿದೆ, ಪ್ರವಾಹದಿಂದಾಗಿ ಆಸ್ತಿಗಳು ಕೊಚ್ಚಿ ಹೋಗಿದೆ, ಆದ್ದರಿಂದ ಪ್ರಕೃತಿ ಮುನಿಸಿದರೆ ಯಾವ ಆಸ್ತಿಯೂ ಉಳಿಯಲ್ಲ.
ಪ್ರಕೃತಿಯನ್ನ ಹೇಗೆ ರಕ್ಷಣೆ ಮಾಡಬೇಕು
- ಪರಿಸರಕ್ಕೆ ಹತ್ತಿರವಾಗಬೇಕು, ಅಂದರೆ ಪರಿಸರವನ್ನು ಪ್ರೀತಿಸಬೇಕು.
- ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು.
- ಸಾವಯವ ವಸ್ತುಗಳನ್ನು ಬಳಸಬೇಕು.
- ಪ್ಲಾಸ್ಟಿಕ್ ಬಾಟಲಿ, ಪ್ಲಾಸ್ಟಿಕ್ ಬ್ಯಾಗ್ ಬಳಸಬಾರದು
- . ಓಡಾಡಲು ಬೈಕ್, ಕಾರು ಬದಲಿಗೆ ಸೈಕಲ್ ಹೆಚ್ಚು ಬಳಸಿದರೆ ವಾಯು ಮಾಲಿನ್ಯ ಕಡಿಮೆಯಾಗುವುದು.
ಪ್ರತಿಯೊಂದು ಮನುಷ್ಯ ತನ್ನ ಜೀವಿತಾವಧಿಯಲ್ಲಿ ಮರ ಗಿಡಗಳನ್ನು ಬೆಳೆಸಬೇಕು,ಇದು ನಾವು ನಮ್ಮ ಮುಂದಿನ ಪೀಳಿಗೆಗೆ ನೀಡುವ ಅತಿ ಕೊಡ್ಡ ಕೊಡುಗೆ
ಭೂಮಿ ಕುರಿತ ಕೋಟ್ಗಳು
ಈ ಭೂಮಿಯಿದ್ದರೆ ಮಾತ್ರ ನಾವಿರುವುದು, ನಮಗಿರುವುದು ಒಂದೇ ಭೂಮಿ ಜೋಪಾನ ಮಾಡೋಣ
ಭೂಮಿಯಲ್ಲಿ ಗಿಡ ನೆಟ್ಟರೆ ತಂಪು ನೀಡುತ್ತೆ, ಮಳೆ ಬರುತ್ತೆ, ಅದೇ ಬರ ಕಡಿದರೆ ಮರುಭೂಮಿಯಾಗುವುದು ಜೋಕೆ!
ಮನುಷ್ಯ ಪ್ರಕೃತಿಯನ್ನು ಹೇಗೆ ನೋಡಿಕೊಳ್ಖುತ್ತಾನೆ ಅದರಂತೆ ಪ್ರತಿಫಲ ಭೂದೆವಿ ನೀಡುತ್ತಾಳೆ
ಪರಿಸರ ಖುಷಿಯಾಗಿದ್ದರೆ ಮನುಷ್ಯ ಖುಷಿಯಾಗಿರುತ್ತಾನೆ, ನಮ್ಮ ದಃಖವೆಲ್ಲಾ ಮರೆಯುತ್ತಾನೆ
ಪ್ರತಿದಿನವೂ ಭೂಮಿ ದಿನ , ಹವಾಮಾನ ಬದಲಾವಣೆ ತಡೆಗಟ್ಟಲೂ ನಾವು ಪ್ರಯತ್ನಿಸುತ್ತಿದ್ದರೆ ಮುಂದಿನ ಭವಿಷ್ಯ ಭಯಾನಕವಾಗಿರುತ್ತೆ
ಹವಾಮಾನ ಬದಲಾದಾಗ ಏನಾಗುತ್ತದೆ ಎಂಬುವುದನ್ನು ನೋಡುತ್ತಿದ್ದೇವೆ, ಇನ್ನಾದರೂ ಎಚ್ಚೆತ್ತುಕೊಳ್ಳೋಣ
ಭೂಮಿ ಎಲ್ಲಾ ಜೀವಿಗಳಿಗೆ ಆಶ್ರಯ ನೀಡುತ್ತೆ, ಮನುಷ್ಯ ಬಿಟ್ಟರೆ ಬೇರೆ ಯಾವ ಪ್ರಾಣಿಯೂ ಈ ಭೂಮಿಗೆ ಹಾನಿ ಮಾಡುತ್ತಿಲ್ಲ, ನಾವು ಬದುಕಬೇಕು, ಆದರೆ ಭೂಮಿಯಿದ್ದರೆ ಮಾತ್ರ ನಾವು ಬದುಕುವುದು



Click it and Unblock the Notifications



