Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ವಿಶ್ವ ನೀರಿನ ದಿನ 2024: ನೀರಿಗಾಗಿ ಹಾಹಾಕಾರ, ಹೋಳಿಯಂದು ಈ ರೀತಿ ಮಾಡುವಂತಿಲ್ಲ!
ಮಾರ್ಚ್ 22ಕ್ಕೆ ವಿಶ್ವ ನೀರಿನ ದಿನ. ಈ ವರ್ಷ ಬರಗಾಲ ಉಂಟಾಗಿದೆ ಎಲ್ಲಾ ಕಡೆ ನೀರಿಲ್ಲ ... ನೀರಿಲ್ಲ ಎಂದು ಜನರು ಪರದಾಡುತ್ತಿದ್ದರು. ಬೆಂಗಳೂರು ಅಂತೂ ಈ ಬಾರಿ ನಕರ ಕಂಡಿದೆ ಎಂದರೆ ತಪ್ಪಾಗುವುದು, ಎಲ್ಲರು ನೀರಿಗಾಗಿ ಪರದಾಡುತ್ತಿದ್ದಾರೆ.
ದುಡ್ಡಿದ್ದರೆ ಟ್ಯಾಂಕರ್ ನೀರು ಬರುತ್ತೆ, ದುಡ್ಡಿಲ್ಲ ಅಂದ್ರೆ ನೀರು ತರುವ ಸಂಕಷ್ಟ ಅಷ್ಟಿಟ್ಟಲ್ಲ. ನಾವು ನೀರನ್ನು ವ್ಯರ್ಥ ಮಾಡಬಾರದು, ಅದರಲ್ಲೂ ಈ ದಿನಗಳಲ್ಲಿ ನೀರನ್ನು ದುಡ್ಡಿನಂತೆ ನೋಡಿಕೊಂಡು ಖರ್ಚು ಮಾಡಬೇಕು, ಇಲ್ಲದಿದ್ದರೆ ಬದುಕು ಕಷ್ಟ... ಕಷ್ಟ.
ಬರಗಾಲದ ಈ ಸಮಯದಲ್ಲಿ ನೀರನ್ನು ವ್ಯರ್ಥ ಮಾಡದಿರಲು ಏನು ಮಾಡಬೇಕು ಎಂದು ನೋಡೋಣ ಬನ್ನಿ:

ಹೋಳಿ ಹಬ್ಬದಲ್ಲಿ ನೀರನ್ನು ವ್ಯರ್ಥ ಮಾಡಬೇಡಿ
ಹೌದು ಹೋಳಿಯಾಟದಲ್ಲಿ ನೀರು ತುಂಬಾನೇ ಖರ್ಚು ಮಾಡುತ್ತೇವೆ. ಬಣ್ಣ ಕಲಿಸಲು ನೀರು ಬೇಕು, ನಂತರ ಮೈಗೆ ಬಣ್ಣ ಬಿದ್ದ ನೀರು ತೊಳೆಯಲು ತುಂಬಾನೇ ನೀರು ಬೇಕು. ಈ ಬಾರಿ ಬೆಂಗಳೂರಿನಲ್ಲಿ ಪೂಲ್ ಪಾರ್ಟೀಸ್ ಹಾಗೂ ಮಳೆ ಡ್ಯಾನ್ಸ್ ಮಾಡುವಂತಿಲ್ಲ ಸರ್ಕಾರ ಆದೇಶ ನೀಡಿದೆ.
ಬೆಂಗಳೂರಿನಲ್ಲಿ 14,000 ಬೋರ್ವೆಲ್ಗಳಿವೆ, ಅವುಗಳಲ್ಲಿ 6, 000 ಬೋರ್ವೆಲ್ಗಳಲ್ಲಿ ತೊಟ್ಟು ನೀರಿಲ್ಲ, ಸಂಪೂರ್ಣ ಬತ್ತಿ ಹೋಗಿದೆ. ಇನ್ನು ಬೆಂಗಳೂರಿಗರ ಜೀವನದಿ ಕಾವೇರಿ ಕೂಡ ಸರಿಯಾಗಿ ಮಳೆಯಿಲ್ಲದೆ ಒಣಗಿದೆ, ಹೀಗಾಗಿ ನೀರಿಗೆ ಅಭಾವ ಉಂಟಾಗಿದೆ. ಹೀಗಾಗಿ ನೀರಿಗೆ ಹಾಹಾಕಾರ ಉಂಟಾಗಿದೆ.
ಸ್ನಾನ ಮಾಡುವಾಗ ಶವರ್ ಬಳಸಬೇಡಿ
ಇನ್ನು ಸ್ನಾನ ಮಾಡುವಾಗ ಶವರ್ ಬಳಸಬೇಡಿ, ಶವರ್ ಬಳಸುವಾಗ ಎಷ್ಟು ನೀರು ಬಳಸುತ್ತಿದ್ದೇವೆ ಎಂಬುವುದು ಗೊತ್ತಾಗುವುದಿಲ್ಲ, ಆದ್ದರಿಂದ ಬಕೆಟ್ನಲ್ಲಿ ನೀರು ತುಂಬಿ ಬಳಸಿದಾಗ ನಾವು ಎಷ್ಟು ನೀರು ಬಳಸುತ್ತಿದ್ದೇವೆ ಎಂಬುವುದು ನಮಗೆ ಗೊತ್ತಾಗುವುದು, ಹೀಗೆ ನಾವು ನೀರನ್ನು ಮಿತವಾಗಿ ಬಳಸಬಹುದು. ಆದ್ದರಿಂದ ಈ ಬೇಸಿಗೆಯಲ್ಲಿ ಶವರ್ ಬಂದ್ ಮಾಡಿ ಸ್ನಾನಕ್ಕೆ ನೀರು ಮಿತವಾಗಿ ಬಳಸಿ.
ಗಾಡಿಗಳನ್ನು ತೊಳೆಯಬೇಡಿ
ಗಾಡಿಗಳನ್ನು ತೊಳೆಯಬೇಡಿ, ಗಾಡಿಗಳನ್ನು ಸ್ಚಚ್ಚಗೊಳಿಸಲು ಸ್ಪ್ರೇ ಸಿಗುವುದು ಅದನ್ನು ಬಳಸಿ, ಬದಲಿಗೆ ನೀವು ನೀರಿ ಬಳಸಿ ಗಾಡಿ ತೊಳೆದರೆ ದಂಡ ಕಟ್ಟಬೇಕಾಗುವುದು. ಆದ್ದರಿಂದ ಈ ಬರಗಾಲದಲ್ಲಿ ಗಾಡಿಗಳನ್ನು ತೊಳೆಯಲು ನೀರು ಬಲಸಬೇಡಿ, ಅದರಲ್ಲೂ ಬೆಂಗಳೂರಿನಲ್ಲಿ ವಾಸಿಸುವವರು ನೀರನ್ನು ಎಷ್ಟು ಮಿತವಾಗಿ ಖರ್ಚು ಮಾಡುತ್ತೀರೋ ಅಷ್ಟು ಒಳ್ಳೆಯದು.
ಪಕ್ಷಿಗಳಿಗೆ, ಪ್ರಾಣಿಗಳಿಗೆ ನೀರಿಡಿ
ಎಲ್ಲಿಯೂ ನೀರು ಸಿಗುತ್ತಿಲ್ಲ, ಮೂಕ ಜೀವಿಗಳಿಗೆ ನೀರು ಇಡುವುದು ಮಾನವೀಯತೆ ದೃಷ್ಟಿಯಿಂದ ತುಂಬಾ ಮುಖ್ಯವಾಗಿದೆ. ಹಾಗಾಗಿ ಮನೆಯ ಪಕ್ಕ, ಟೆರೇಸ್ನಲ್ಲಿ ಸ್ವಲ್ಪ ನೀರಿಡಿ. ಮನುಷ್ಯರೇ ನೀರಿಗಾಗಿ ಪರದಾಡುವಾಗ ಆ ಮೂಕ ಜೀವಿಗಳಿಗೆ ಎಷ್ಟು ಕಷ್ಟವಾಗಬೇಡ, ಹಾಗಾಗಿ ಅವುಗಳಿಗೆ ಸ್ವಲ್ಪ ನೀರು ಇಡಿ.
ನೀರನ್ನು ಮರುಬಳಕೆ ಮಾಡಿ
ಪಾತ್ರೆ ತೊಳೆದ ನೀರು ಅಥವಾ ಮನೆ ಬಳಕೆಗೆ ಬಳಸಿದ ನೀರನ್ನು ಗಿಡಗಳಿಗೆ ಬಳಸುವುದು ಒಳ್ಳೆಯದು. ಸಿಂಕ್ನಲ್ಲಿ ಪಾತ್ರೆ ತೊಳೆಯುವಾಗ ನೀರು ವ್ಯರ್ಥವಾಗುವುದು, ಆದ್ದರಿಂದ ಎರಡು ಬಕೆಟ್ ನೀರು ಹಾಕಿ, ಅದರಲ್ಲಿ ಪಾತ್ರೆ ತೊಳೆದರೆ ಆ ನೀರನ್ನು ಗಿಡಗಳಿಗೆ ಹಾಕಬಹುದು. ಈ ಬೇಸಿಗೆಯಲ್ಲಿ ಈ ರೀತಿ ನೀರನ್ನು ಮರುಬಳಕೆ ಮಾಡಬೇಕು.
ಮಳೆಗಾಲದಲ್ಲಿ ನೀರು ಭೂಮಿಯಲ್ಲಿ ಇಂಗುವಂತೆ ಮಾಡಿ
ಮಳೆಗಾಲದಲ್ಲಿ ನೀರನ್ನು ಸಂಗ್ರಹಿಸುವ ತಂತ್ರಜ್ಞಾನವಿದೆ, ನೀರನ್ನು ಇಂಗುವಂತೆ ಮಾಡುವ ವ್ಯವಸ್ಥೆಯಿದೆ, ಇದರತ್ತ ಗಮನ ನೀಡಿ. ಹೀಗೆ ಮಾಡುವುದರಿಂದ ಅಂತರ್ಜಲ ಬತ್ತುವುದಿಲ್ಲ.
ಮಿತಿ ಮೀರಿ ಬೋರ್ವೆಲ್ ಕೊರೆಯುತ್ತಿರುವುದು, ಕೆರೆಗಳನ್ನು ಮುಚ್ಚಿ ಅಲ್ಲಿ ಕಟ್ಟಡ ನಿರ್ಮಾಣ ಹೀಗೆ ಅನೇಕ ಕಾರಣಗಳಿಂದ ಈಗ ಅಂತರ್ಜಲ ಬತ್ತಿದೆ. ಇನ್ಯಾದರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಜನರು ತೀವ್ರ ಬರಗಾಲ ಎದುರಿಸಬೇಕು. ಕಾಡುಗಳನ್ನು ಬೆಳೆಸುವುದರ ಕಡೆಗೆ ಹಾಗೂ ಮಳೆ ನೀರು ಸಂಗ್ರಹಣೆ ಕಡೆಗೆ ಹೆಚ್ಚಿನ ಗಮನಹರಿಸಬೇಕು.



Click it and Unblock the Notifications