Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಯಶ್ ಅವರು ಈ ಕಾರಣಕ್ಕೆ ಮತ್ತಷ್ಟು ಗ್ರೇಟ್ ಅನಿಸುವುದು
ರಾಕಿಂಗ್ ಸ್ಟಾರ್ ಯಶ್ ಅವರಿಗೆ ದೇಶದ ಎಲ್ಲಾ ಕಡೆ ದೊಡ್ಡ ಅಭಿಮಾನಿಗಳ ಬಳಗವೇ ಇದೆ, ಪ್ಯಾನ್ ಇಂಡಿಯಾ ಸ್ಟಾರ್ ಕಂಡರೆ ಕನ್ನಡಿಗರಿಗೆ ತುಂಬಾನೇ ಪ್ರೀತಿ. ಒಂದು ಕಾಲದಲ್ಲಿ ಬಾಲಿವುಡ್ ಎಂದರೆ ಶ್ರೇಷ್ಠ ಎಂಬ ಭಾವನೆ ಇತ್ತು. ಆದರೆ ನಮ್ಮ ಕನ್ನಡ ಸಿನಿಮಾ ಕೆಜಿಎಫ್ ಬಾಲಿವುಡ್ನ ಚಿತ್ರಗಳನ್ನು ಮೀರಿ ಸದ್ದು ಮಾಡಿತು, ಯಶ್ ಅವರು ತಮ್ಮ ಅಭಿನಯ ಕೌಶಲ್ಯ ಮೂಲಕ ಇಡೀ ದೇಶವನ್ನೇ ಮೋಡಿ ಮಾಡಿದರು.

ಜನವರಿ 8ಕ್ಕೆ ಯಶ್ ಅವರ ಹುಟ್ಟುಹಬ್ಬ, ಅವರು ಅಭಿಮಾನಿಗಳು ಈ ದಿನ ತುಂಬಾ ಸಂಭ್ರಮದಿಂದ ಆಚರಿಸುವ ಪ್ಲ್ಯಾನ್ ಮಾಡುತ್ತಾರೆ, ಆದರೆ ಈ ವರ್ಷ ಅವರ ಬರ್ತ್ಡೇ ದಿನ ಅಭಿಮಾನಿಗಳಿಗೆ ಆದ ಅವಘಡದಿಂದಾಗಿ 3 ಜನ ಯಶ್ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ನೋಡಿ ಯಶ್ ಅವರಿಗೂ ಸೇರಿ ಇಡೀ ಕರ್ನಾಟ ಬೇಸರ ವ್ಯಕ್ತಿಪಡಿಸಿದೆ.
ಮಕ್ಕಳನ್ನು ಕಳೆದುಗೊಂಡ ಹೆತ್ತವರ ಸಂಕಟ ಹೇಳತೀರದು
ಯಶ್ ಅವರ ಬ್ಯಾನರ್ ಕಟ್ಟುವಾಗ ವಿದ್ಯುತ್ ತಗುಲಿ ಮೂರು ಜನ ಸಾವನ್ನಪ್ಪಿದರು, ಇದನ್ನು ಕೇಳಿ ಯಶ್ ಕೂಡ ಗದಗ್ಗೆ ಧಾವಿಸಿ ಕುಟುಂಬಸ್ಥರಿಗೆ ಸಾಂತ್ವಾನ ನುಡಿದ್ದಾರೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಮೃತರನ್ನು ಹನಮಂತ ಹರಿಜನ (21), ಮುರಳಿ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ ಹಾಗೂ ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಭಿಮಾನಿಗಳ ಅಭಿಮಾನಕ್ಕೆ ತಲೆಬಾಗಿದ ಯಶ್
ಅಭಿಮಾನಿಗಳು ಸಾವನ್ನಪ್ಪಿರುವುದು ಕೇಳಿ ಯಶ್ ಅವರಿಗೂ ದುಃಖವಾಯಿತು. ಅವರು ಗೋವಾದಲ್ಲಿದ್ದರು, ಆದರೆ ತನ್ನ ಅಭಿಮಾನಿಗಳ ಸಾವಿನ ಸುದ್ದಿ ಕೇಳಿ ಗದಗ್ಗೆ ಬಂದು ಮಕ್ಕಳನ್ನು ಕಳೆದುಕೊಂಡು ಗೋಳಾಡುತ್ತಿದ್ದ ಪೋಷಕರಿಗೆ ಸಾಂತ್ವಾನ ನುಡಿದಿದ್ದಾರೆ, ನಮಗೆ ಮಗವಿಲ್ಲ ಎಂದು ಅಳುತ್ತಿದ್ದ ಪೋಷಕರನ್ನು ನೋಡಿ ನಾನು ಕೂಡ ನಿಮ್ಮ ಮಗ ಎಂದು ಹೇಳಿರುವುದು ನಿಜವಾಗಲೂ ಯಶ್ ಅವರ ದೊಡ್ಡತನ. ಅಷ್ಟೊಂದು ದೊಡ್ಡ ಬೇಕಿದ್ದರೆ ಇದ್ದಲ್ಲಿಯೇ ಪ್ರೆಸ್ಮೀಟ್ ಮಾಡಿ, ಕುಟುಂಬಕ್ಕೆ ಪರಿಹಾರ ನೀಡುತ್ತೇನೆ ಎಂದು ಹೇಳಬಹುದಿತ್ತು, ಆದರೆ ಯಶ್ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿ ಆ ಕುಟುಂಬದ ನೋವಿಗೆ ಸ್ಪಂದಿಸಿದ್ದಾರೆ.



Click it and Unblock the Notifications