Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಯಶೋದಾ ಜಯಂತಿ 2025: ಕೃಷ್ಣನ ಸಾಕುತಾಯಿಯ ಜಯಂತಿ ಆಚರಿಸೋದ್ಯಾಕೆ? ಇದರ ಕಥೆ ಗೊತ್ತಾ?
ಶ್ರೀಕೃಷ್ಣನ ತಾಯಿ ಯಶೋದೆಯ ಜಯಂತಿಯನ್ನು ದೇಶದಲ್ಲಿ ಆಚರಿಸುವುದು ನಿಮಗೆ ಗೊತ್ತಾ? ಇಂದು ಕೃಷ್ಣನ ತಾಯಿಯಾಗಿರುವ ಯಶೋದೆಯ ಜಯಂತಿಯಾಗಿದೆ. ಯಶೋದೆಯ ಜನನವು ಫಾಲ್ಗುಣಿ ಮಾಸದ ಕೃಷ್ಣ ಪಕ್ಷದ ಆರನೇ ದಿನದಂದು ಆಗಿದೆ ಎಂದು ನಂಬಲಾಗಿದೆ. ದೇವಕಿ ಕೃಷ್ಣನ ತಾಯಿಯಾಗಿದ್ದರೂ ಯಶೋದೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಯಶೋದೆ ಕೃಷ್ಣನ ಸಾಕು ತಾಯಿ.
ಈ ದಿನ ಉಪವಾಸ, ಪೂಜೆ ನೆರವೇರಿಸಲಾಗುತ್ತದೆ. ಹಾಗೆ ಕೃಷ್ಣನಂತಹ ಮಕ್ಕಳು ಜನಿಸಲಿ ಎಂಬ ಕಾರಣಕ್ಕೆ ವಿವಾಹವಾಗಿರುವ ಮಹಿಳೆ ವ್ರತ ಮಾಡುವುದು ಕೂಡ ನೋಡಬಹುದು. ಕಂಸನಿಂದ ಶ್ರೀಕೃಷ್ಣನನ್ನು ಕಾಪಾಡುವ ಉದ್ದೇಶದಿಂದ ಬಾಲಕನಾಗಿದ್ದ ಕೃಷ್ಣನನ್ನು ಆಶ್ರಮದಲ್ಲಿ ಯಶೋದೆ ಬಳಿ ಬಿಟ್ಟು ಹೋಗಲಾಗಿತ್ತು. ಯಶೋದೆ ಸಾಕು ತಾಯಿಯಾಗಿ ಕೃಷ್ಣನ ಬೆಳೆಸಿದಳು ಎಂದು ನಂಬಲಾಗಿದೆ.

ಯಶೋದಾ ಜಯಂತಿಯ ಉಪವಾಸ ಮಾಡುವುದರಿಂದ ಕೃಷ್ಣನಂತೆ ಗುಣವುಳ್ಳ ಮಕ್ಕಳು ಜನಿಸುತ್ತಾರೆ ಎಂದು ನಂಬಲಾಗಿದೆ. ಹಾಗೆ ಮಕ್ಕಳಿರುವ ತಾಯಂದಿರು ಈ ಉಪವಾಸ ಮಾಡುವುದು ಮಕ್ಕಳ ಆಯಸ್ಸು ಹೆಚ್ಚಾಗುತ್ತದೆ ಎಂದು ಸಹ ಹೇಳಲಾಗಿದೆ. ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಷಷ್ಠಿ ತಿಥಿಯಂದು ಯಶೋದಾ ಜಯಂತಿ ಆಚರಿಸಲಾಗುತ್ತದೆ. ಹೀಗಾಗಿ ಪ್ರತಿ ವರ್ಷವೂ ಈ ದಿನಾಂಕ ಬದಲಾಗುತ್ತದೆ. ಈ ವರ್ಷ ಫೆ.18ರಂದು ಆಚರಿಸಲಾಗುತ್ತಿದೆ.
ಈ ದಿನದಂದು ಬೆಳಗ್ಗೆ ಬ್ರಹ್ಮ ಮುಹೂರ್ತದಲ್ಲಿ ಎದ್ದು ತಲೆ ಸ್ನಾನ ಮಾಡಿ ನಂತರ ಶುಚಿ ಬಟ್ಟೆ ಧರಿಸಿ, ಆ ಕ್ಷಣದಿಂದ ಉಪವಾಸ ಮಾಡಬೇಕು. ಹಾಗೆ ಕೃಷ್ಣ ಮತ್ತು ಯಶೋದೆಯ ಫೋಟೋಗೆ ಪೂಜೆ ಮಾಡುವುದು ಈ ದಿನದ ವಿಶೇಷ. ಅದರಲ್ಲೂ ಬೆಣ್ಣೆ, ಶ್ರೀಗಂಧ, ಅಕ್ಷತೆ, ತುಪ್ಪದ ದೀಪ ಹಚ್ಚುವುದು ಪೂಜೆಯ ಸಾಮಾನ್ಯ ನಿಯಮವಾಗಿದೆ.
ಯಶೋದಾ ಜಯಂತಿಯಂದು ಪಠಿಸಬೇಕಾದ ಮಂತ್ರ
"ಓಂ ಕ್ಲೀಂ ಕೃಷ್ಣಾಯ ನಮಃ", "ಓಂ ನಮೋ ಭಗವತೇ ವಾಸುದೇವಾಯ" ಮತ್ತು "ಓಂ ಶ್ರೀ ಯಶೋದಾದೇವ್ಯೈ ನಮಃ" ಮುಂತಾದ ಮಂತ್ರಗಳನ್ನು ದೈವಿಕ ಆಶೀರ್ವಾದವನ್ನು ಪಡೆಯಲು ಹೇಳಲಾಗುತ್ತದೆ.
ಯಶೋದೆ ಕುರಿತ ಅಚ್ಚರಿಯ ವಿಚಾರಗಳು
ಯಶೋದೆ ಶ್ರೀಕೃಷ್ಣನ ಸಾಕು ತಾಯಿ. ಕೃಷ್ಣನು ದೇವಕಿ ಮತ್ತು ವಾಸುದೇವರಿಗೆ ಜನಿಸಿದ ಮಗು. ಆದರೆ ಗೋಕುಲದಲ್ಲಿ ಯಶೋದೆ ಬಳಿ ನಂದ ಮಹರಾಜರ ಬಳಿ ಬೆಳೆದಿದ್ದ. ಯಶೋದೆ ತನ್ನ ಸಾಕು ತಾಯಿ ಎಂದು ಕೃಷ್ಣನಿಗೂ ತಿಳಿದಿತ್ತು ಆದರೆ ಆತ ತಾಯಿಯಂತೆಯೇ ನೋಡಿದ್ದನು. ಶ್ರೀಕೃಷ್ಣ ಮೊದಲ ಬಾರಿಗೆ ತನ್ನ ವಿಶ್ವರೂಪ ತೋರಿದ್ದು ಈ ಯಶೋದೆಯ ಮುಂದೆ. ಆತ ತನ್ನ ಚೇಷ್ಠೆಯ ನಡುವೆ ಬಾಯಿಯಲ್ಲಿ ಗೋಲಿಯ ಹಾಕಿಕೊಂಡು ಹೊರೆತೆಗೆಯಲು ನಿರಾಕರಿಸಿದಾಗ ಯಶೋದೆ ಬಂದು ಗದರಿಸಿದಳು. ಆತ ಆತ ಬಾಯಿ ತೆರೆದಾಗ ವಿಶ್ವವೇ ಕಂಡಿತು ಎಂದು ಹೇಳಲಾಗಿದೆ. ಶ್ರೀಕೃಷ್ಣನಿಗೆ ಜೀವನ ಪಾಠ ಮಾಡಿದ್ದು ಕೂಡ ಯಶೋದೆಯೇ.
ಹಾಗೆ ಈ ದಿನದಂದು ಮಥುರಾ, ವೃಂದಾವನ, ನಂದಗಾಂವ್, ಗೋಕುಲ ಮತ್ತು ದ್ವಾರಕದಂತಹ ಇತಿಹಾಡಸ ಪ್ರಸಿದ್ಧ ಸ್ಥಳಗಳಿಗೆ ಭಕ್ತರು ಭೇಟಿ ನೀಡುತ್ತಾರೆ, ಇಲ್ಲಿ ಕೃಷ್ಣ ಹಾಗೂ ಯಶೋದೆಯ ಹಲವು ನೆನಪುಗಳನ್ನು ನೋಡಬಹುದು.



Click it and Unblock the Notifications