Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಹಿಳೆರನ್ನು ವಿವಸ್ತ್ರಗೊಳಿಸಿದ ಕಿಡಗೇಡಿಗಳು! ಶೂನ್ಯ FIR ದಾಖಲು!
ಎಫ್ಐಆರ್ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುತ್ತೆ. ಆದರೆ ಜೀರೋ ಎಫ್ಐಆರ್ ಅಥವಾ ಶೂನ್ಯ ಎಫ್ಐಆರ್ ಬಗ್ಗೆ ಹೆಚ್ಚಿನವರಿಗೆ ಗೊತ್ತಿರೋದಿಲ್ಲ. ಮಣಿಪುರ ಅತ್ಯಾಚಾರ ಪ್ರಕರಣದ ನಂತರ ಈ ಶೂನ್ಯ ಎಫ್ಐಆರ್ ದೇಶದಾದ್ಯಂತ ಸಂಚಲನ ಮೂಡಿಸುತ್ತಿದೆ. ಅಷ್ಟಕ್ಕು ಶೂನ್ಯ ಎಫ್ಐಆರ್ ಎಂದರೇನು? ಇದು ಯಾವ ರೀತಿ ಕೆಲಸ ಮಾಡುತ್ತೆ ಅನ್ನೋದನ್ನು ತಿಳಿಯೋಣ.
ಮಣಿಪುರದಲ್ಲಿ ಮೇ 4 ರಂದು ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಅವರ ಮೇಲೆ ಹಲ್ಲೆ ನಡೆಸಿ, ಮೆರವಣಿಗೆ ಮಾಡಿದ ಆರೋಪದ ಮೇಲೆ ನಾಲ್ಕು ಜನ ಆರೋಪಿಗಳನ್ನು ಮಣಿಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣ ನಡೆದು ತಿಂಗಳಾದರೂ ಕೂಡ ಬೆಳಕಿಗೆ ಬಂದಿರ್ಲಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗ್ತಿದ್ದಂತೆ ಎಚ್ಚೆತ್ತ ಪೊಲೀಸರು ಶೂನ್ಯ ಎಫ್ಐಆರ್ ದಾಖಲಿಸಿ ಕಾರ್ಯಪ್ರವೃತ್ತರಾಗಿದ್ದಾರೆ.

ಶೂನ್ಯ ಎಫ್ಐಆರ್ ಎಂದರೇನು?
ಶೂನ್ಯ ಎಫ್ಐಆರ್ ಎಂದರೆ ಅಪರಾಧ ಎಸಗಿರುವ ಪ್ರದೇಶವನ್ನು ಲೆಕ್ಕಿಸದೆ ನೋಂದಾಯಿಸಲಾದ ಎಫ್ಐಆರ್. ಈ ಸಂದರ್ಭದಲ್ಲಿ ಪೊಲೀಸರು ತಮ್ಮ ಅಧಿಕಾರ ವ್ಯಾಪ್ತಿಗೆ ಈ ಪ್ರದೇಶ ಬರುವುದಿಲ್ಲವೆಂದು ಹೇಳಿಕೊಳ್ಳುವಂತಿಲ್ಲ. ಬದಲಾಗಿ ತಕ್ಷಣವೇ ಪ್ರಕರಣ ದಾಖಲು ಮಾಡಿಕೊಳ್ಳಬೇಕು. ಇದಾದ ಬಳಿಕ ಎಫ್ಐಆರ್ ಅನ್ನು ನಿಜವಾದ ನ್ಯಾಯವ್ಯಾಪ್ತಿಯನ್ನು ಹೊಂದಿರುವ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತದೆ.
ಆ ಮೂಲಕ ಶೂನ್ಯ ಎಫ್ಐಆರ್ ಅನ್ನು ಸಾಮಾನ್ಯ ಎಫ್ಐಆರ್ ಆಗಿ ಪರಿವರ್ತಿಸಲಾಗುತ್ತದೆ. ಶೂನ್ಯ ಎಫ್ಐಆರ್ ನಲ್ಲಿ ಎಫ್ಐಆರ್ಗಿಂತ ಭಿನ್ನವಾಗಿ ಅವುಗಳಿಗೆ ಸರಣಿ ಸಂಖ್ಯೆಗಳನ್ನು ನಿಗದಿಪಡಿಸಲಾಗಿದೆ. ಶೂನ್ಯ ಎಫ್ಐಆರ್ಗಳಿಗೆ '0' ಸಂಖ್ಯೆಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಈ ಹೆಸರು ಬಂದಿರುತ್ತದೆ. ಇನ್ನೂ ಪ್ರಕರಣವನ್ನು ವರ್ಗಾಯಿಸಿದ ನಂತರ ಸೂಕ್ತ ಅಧಿಕಾರ ವ್ಯಾಪ್ತಿಯ ಪೊಲೀಸ್ ಠಾಣೆಯು ಕ್ರಮ ಕೈಗೊಳ್ಳುತ್ತದೆ.
ಶೂನ್ಯ ಎಫ್ಐಆರ್ ಜಾರಿಗೆ ಬಂದಿದ್ದು ಯಾವಾಗ?
2012ರಲ್ಲಿ ದೆಹಲಿಯ ಭೀಕರ ಗ್ಯಾಂಗ್ ರೇಪ್ ಪ್ರಕರಣದ ಬಳಿಕ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವು ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಜೆಎಸ್ ವರ್ಮಾ ಅವರ ನೇತೃತ್ವದಲ್ಲಿ ಮೂರು ಸದಸ್ಯರ ಸಮಿತಿಯನ್ನು ರಚಿಸಿತು. ಈ ಸಮಿತಿಯು ಶೂನ್ಯ ಎಫ್ಐಆರ್ ಪರಿಕಲ್ಪನೆಯನ್ನು ಶಿಫಾರಸು ಮಾಡಿದೆ. ಇದರ ಪ್ರಕಾರ ಒಂದು ಪ್ರಕರಣ ಪೊಲೀಸರ ನ್ಯಾಯ ವ್ಯಾಪ್ತಿಗೆ ಬಾರದಿದ್ದರೂ ಪ್ರಕರಣವನ್ನು ದಾಖಲಿಸಿ, ತನಿಖೆ ಪ್ರಾರಂಭಿಸಬೇಕು ಎಂದು ಹೇಳುತ್ತದೆ. ನಂತರದ ದಿನಗಳಲ್ಲಿ ಸಂಬಂಧ ಪಟ್ಟ ಠಾಣೆಗೆ ಪ್ರಕರಣವನ್ನು ವರ್ಗಾಯಿತಕ್ಕದ್ದು ಎಂದು ಹೇಳುತ್ತದೆ.
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 5,960ಕ್ಕೂ ಹೆಚ್ಚು ಬೆಂಕಿ ಮತ್ತು ಹಿಂಸಾಚಾರದಂತಹ ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸರಾಸರಿ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಅಂತಹ ಒಟ್ಟು ಪ್ರಕರಣಗಳಲ್ಲಿ 1,771 ಪ್ರಕರಣಗಳು ಅಂದರೆ ಸುಮಾರು 30 ಪ್ರತಿಶತ ಎಫ್ಐಆರ್ಗಳು ಶೂನ್ಯ ಎಫ್ಐಆರ್ಗಳಾಗಿವೆ. ನ್ಯಾಯವ್ಯಾಪ್ತಿಯನ್ನು ಲೆಕ್ಕಿಸದೆ ಪೊಲೀಸರು ಇಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳುತ್ತಿದ್ದಾರೆ.
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಪ್ರಕರಣ ಆದಷ್ಟು ಬೇಗ ಸುಖಾಂತ್ಯವನ್ನು ಕಾಣಲಿ ಎನ್ನುವುದೇ ಎಲ್ಲರ ಆಶಯ.



Click it and Unblock the Notifications