Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
ಮುನಿರತ್ನ ನಾಯ್ಡು, ಪ್ರಜ್ವಲ್ ರೇವಣ್ಣ & ಬಿಟ್ ಕಾಯಿನ್ ತನಿಖೆಗೆ ಇಷ್ಟು ಕೋಟಿ ಖರ್ಚು!
ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜಕಾರಣಿಗಳ ಮೇಲಿನ ಗಂಭೀರ ಪ್ರಕರಣಗಳ ತನಿಖೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ. ಕರ್ನಾಟಕದಲ್ಲಿ ವಿವಿಧ ಗಂಭೀರ ಪ್ರರಣಗಳು ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಗಳಿಗೆ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಎಷ್ಟು ಹಣ ಖರ್ಚು ಮಾಡಿದೆ ಎನ್ನುವ ವಿಷಯವು ಇದೀಗ ಬಹಿರಂಗವಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ (ವಿಶೇಷ ತನಿಖಾ ದಳ) ರಚನೆ ಮಾಡಿದೆ. ಕರ್ನಾಟಕದ ಕಾನೂನು ವ್ಯವಸ್ಥೆಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕ ಗೃಹ ಇಲಾಖೆಯೇ ನೀಡಿರುವ ಮಾಹಿತಿಯಂತೆ ವಿವಿಧ ತನಿಖೆಗೆ ಲಕ್ಷ ಲಕ್ಷ ರೂಪಾಯಿ ಹಣವನ್ನು ಕರ್ನಾಟಕ ಸರ್ಕಾರ ಖರ್ಚು ಮಾಡಿದೆ. ಒಟ್ಟಾರೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 4.54 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಮುಖ್ಯವಾಗಿ ರಾಜಕಾರಣಿಗಳಾದ ಪ್ರಜ್ವಲ್ ರೇವಣ್ಣ ಹಾಗೂ ಮುನಿರತ್ನ ನಾಯ್ಡು ಅವರ ಕೇಸ್ಗಳಿಗೆ ಹೆಚ್ಚು ಖರ್ಚು ಮಾಡಲಾಗಿದೆ.

ಸೋಷಿಯಲ್ ಮೀಡಿಯಾ ನಮ್ಮ ನಾಡು ನಮ್ಮ ಆಳ್ವಿಕೆ ಖಾತೆಯಿಂದ ಕರ್ನಾಟಕದ ಕಾನೂನು ವ್ಯವಸ್ಥೆಗೆ ಹಿಡಿದ ಕೈಗನ್ನಡಿಗಳು ಈ ಪ್ರಕರಣಗಳು. ಶಾಸಕ ಮುನಿರತ್ನ ನಾಯ್ಡು ವಿರುದ್ಧ ಇರುವ ಆರು ಪ್ರಕರಣಗಳ ತನಿಖೆಗೆ ಇಲ್ಲಿಯವರೆಗೂ 44.6 ಲಕ್ಷ ಖರ್ಚಾಗಿದೆ. ಆದರೆ ಅದರಲ್ಲಿ ಮೂರು ಪ್ರಕರಣಗಳಲ್ಲಿ ಸಾಕ್ಷಿ ಇಲ್ಲ ಅಂತ ಪೊಲೀಸರೇ "B Report" ಹಾಕಿದ್ದಾರೆ. ಎರಡು ಪ್ರಕರಣಗಳಲ್ಲಿ ಮಾತ್ರ ಆರೋಪ ಪಟ್ಟಿ ಹಾಕಿ ಇನ್ನು ಒಂದು ಕೇಸ್ ತನಿಖೆ ಮುಗಿಸಿಲ್ಲ! ಇನ್ನು ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಮಾಜಿ ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್ ಒಬ್ಬರಿಗೇ 2.4 ಕೋಟಿ ರೂಪಾಯಿ ಫೀಸ್ ನೀಡಲಾಗಿದೆ. ಕಾಂಗ್ರೆಸ್ ಸದಸ್ಯರೂ ಆಗಿದ್ದ ಕಪಿಲ್ ಸಿಬಲ್ ಒಂದೇ ಒಂದು ಹಾಜರಿಗೆ 15.5 ಲಕ್ಷ! ಇದ್ಯಾರಿಗೆ #ತನಿಖೆ_ಭಾಗ್ಯ ಎಂದು ಟೀಕೆ ಮಾಡಿದ್ದಾರೆ.
ಯಾವ ಪ್ರಕರಣಗಳಿಗೆ ಎಷ್ಟು ವೆಚ್ಚ ?
ಎಸ್ಐಟಿ ವೆಚ್ಚ
ಬಿಟ್ಕಾಯಿನ್ 69,73,068
ಪ್ರಜ್ವಲ್ ರೇವಣ್ಣ 3,31,49,355
ಎಸ್ಟಿ ಕ್ರಾಪ್ 8,83,818
ಮುನಿರತ್ನ ನಾಯ್ಡು 44,60,864
ಒಟ್ಟು 4,54,67,105
ದರ್ಶನ್ ಪ್ರಕರಣಕ್ಕೂ ಹೆಚ್ಚು ಖರ್ಚು: ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪ್ರಕರಣಕ್ಕೂ ಹೆಚ್ಚು ವೆಚ್ಚ ಮಾಡಿರುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ರಾಜ್ಯ ಗೃಹ ಇಲಾಖೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದ್ದು, ಹೈಕೋರ್ಟ್ ನೀಡಿದ್ದ ತೀರ್ಪನ್ನು ರಾಜ್ಯ ಸರ್ಕಾರವೇ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಹೀಗಾಗಿ, ಈ ಪ್ರಕರಣದಲ್ಲೂ ಹೆಚ್ಚು ವೆಚ್ಚ ಮಾಡಿರುವ ಸಾಧ್ಯತೆ ಇದೆ. ಆದರೆ ಸದ್ಯ ಎಸ್ಐಟಿ ತನಿಖೆ ಹಾಗೂ ಕೆಲವು ಪ್ರಮುಖ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮಾತ್ರ ಹಂಚಿಕೊಳ್ಳಲಾಗಿದೆ. ರಾಜ್ಯ ಸರ್ಕಾರವು ತನಿಖೆಗಾಗಿಯೇ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
Credit: Oneindia



Click it and Unblock the Notifications