Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
CSK ಮಾಜಿ ಪ್ಲೇಯರ್ ಜೊತೆ ಸದ್ದಿಲ್ಲದೇ ಮದುವೆಯಾದ ಬಿಗ್ ಬಾಸ್ ಸ್ಫರ್ಧಿ, ಇಬ್ಬರಿಗೂ ಇದು ಎರಡನೇ ಮದುವೆ
ಮದುವೆ ಬದುಕಿನ ಮಹತ್ವದ ಹಂತ. ಇಲ್ಲಿ ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗಿ ಇರಬೇಕಾದಂತಹ ಒಂದು ಬಂಧನ. ಅದಕ್ಕೆ ಮದುವೆ ಎನ್ನುವುದು ಒಂದೆರಡು ದಿನದ ಆಟ ಅಲ್ಲ, ಜೀವನ ಪೂರ್ತಿ ಸಂಗಾತಿಯ ಜೊತೆ ಬಾಳುತ್ತೇವೆ ಎನ್ನುವುದನ್ನು ಅಧಿಕೃತವಾಗಿ ಘೋಷಿಸುವಂತಹ ಸುಸಂದರ್ಭ. ಆದರೆ ಕೆಲವೊಮ್ಮೆ ಸಂದರ್ಭ ಮತ್ತು ಪರಿಸ್ಥಿತಿ...
ಕೈಮೀರಿ ಹೋಗಿರುತ್ತವೆ. ಆಗ ವಿಚ್ಛೇದನ ಪಡೆಯದೇ ಬೇರೆ ದಾರಿಯೇ ಇಲ್ಲ ಎಂಬ ಭಾವನೆ ಬರುತ್ತೆ. ನಿರೀಕ್ಷೆಯಂತೆ ಸಂಬಂಧ ಕೂಡ ಮುರಿದು ಬೀಳುತ್ತೆ. ಹೀಗೆ ದಾಂಪತ್ಯ ಅಂತ್ಯವಾದಾಗ ಸಾಮಾನ್ಯವಾಗಿ ಅನೇಕರು ಮತ್ತೊಂದು ಮದುವೆಯಾಗುವ ಮನಸು ಮಾಡುವುದಿಲ್ಲ. ಅಯ್ಯೋ ಒಮ್ಮೆ ಅನುಭವಿಸಿದ್ದೇ ಸಾಕು ಎನ್ನುವ ತೀರ್ಮಾನಕ್ಕೆ ಬರುತ್ತಾರೆ. ಇನ್ನು ಕೆಲವರು ಅಳೆದು ತೂಗಿ ಹೊಸ ಭರವಸೆಯ ಜೊತೆ ಹೊಸ ಬದುಕಿಗೆ ಇನ್ನೊಮ್ಮೆ ಮುನ್ನುಡಿ ಬರೆಯಲು ಅಣಿಯಾಗುತ್ತಾರೆ. ಇದಕ್ಕೆ ಸಂಯುಕ್ತಾ ಷಣ್ಮುಗನಾಥನ್ ಮತ್ತು ಅನಿರುದ್ಧ ಶ್ರೀಕಾಂತ್ ಸದ್ಯದ ಉದಾಹರಣೆ.

ಹೌದು, ಸಂಯುಕ್ತಾ ಷಣ್ಮುಗನಾಥನ್ .. ಕಾಲಿವುಡ್ನ ಕಿನ್ನರಿ. 2007ರಲ್ಲಿ ಮಿಸ್ ಚೆನ್ನೈ ಕಿರೀಟವನ್ನು ಮುಡಿಗೇರಿಸಿಕೊಂಡ ಚೆಲುವೆ. ''ತುಘ್ಲಕ್ ದರ್ಬಾರ್''.. ''ವಾರಿಸು''.. ಸೇರಿ ಹಲವು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡ ಸಂಯುಕ್ತಾ 2020ರಲ್ಲಿ ತಮಿಳಿನ ''ಬಿಗ್ ಬಾಸ್'' ಸೀಸನ್ ನಾಲ್ಕರಲ್ಲಿ ಸ್ಫರ್ಧಿಯಾಗಿದ್ದರು.
ಇನ್ನೂ ಅನಿರುದ್ಧ ಶ್ರೀಕಾಂತ ವೃತ್ತಿಯಲ್ಲಿ ಈ ಹಿಂದೆ ಕ್ರಿಕೆಟ್ ಪ್ಲೇಯರ್ ಆಗಿದ್ದವರು. 2003 ರಿಂದ 2019ರವರೆಗೆ ರಣಜಿಯಲ್ಲಿ ತಮಿಳುನಾಡಿನ ಪರ ಆಡಿದವರು ಇವರು. 2008ರಿಂದ 2013ರವರೆಗೆ ಐಪಿಎಲ್ನಲ್ಲಿ ''ಚೆನ್ನೈ ಸೂಪರ್ ಕಿಂಗ್ಸ್'' ತಂಡದ ಪರ ಆಡಿದ್ದ ಅನಿರುದ್ಧ ಶ್ರೀಕಾಂತ 2011ರಲ್ಲಿ ''ಕೋಲ್ಕತ್ತಾ ನೈಟ್ ರೈಡರ್ಸ್'' ವಿರುದ್ಧದ ಮಹತ್ವದ ಪಂದ್ಯದಲ್ಲಿ 55 ಬಾಲ್ಗಳಲ್ಲಿ 64 ರನ್ಗಳನ್ನು ಸಿಡಿಸಿದ್ದರು. ಈ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಈ ಅನಿರುದ್ಧ ಶ್ರೀಕಾಂತ ಬೇರೆ ಯಾರು ಅಲ್ಲ ಬದಲಿಗೆ 1983ರ ವಿಶ್ವಕಪ್ ಹೀರೋಗಳಲ್ಲಿ ಒಬ್ಬರಾದ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಮುದ್ದಿನ ಮಗ.
ಇಂಥಾ ಅನಿರುದ್ಧ ಶ್ರೀಕಾಂತ ಮತ್ತು ಸಂಯುಕ್ತಾ ಷಣ್ಮುಗನಾಥನ್, ಸದ್ದಿಲ್ಲದೇ ತಮ್ಮ ಗುರು ಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ. ಹೊಸ ಬದುಕಿಗೆ ಮುನ್ನುಡಿ ಬರೆದಿದ್ದಾರೆ. ಈ ಮೂಲಕ ತಮ್ಮ ತಮ್ಮ ಅಭಿಮಾನಿಗಳಿಗೆ, ಹಿಂಬಾಲಕರಿಗೆ ಸರ್ಫ್ರೈಸ್ ನೀಡಿದ್ದಾರೆ.
ಅಂದ್ಹಾಗೇ ಅನಿರುದ್ಧ ಮತ್ತು ಸಂಯುಕ್ತಾ, ಇಬ್ಬರಿಗೂ ಇದು ಎರಡನೇ ಮದುವೆ. 2012ರಲ್ಲಿ ಅನಿರುದ್ಧ ಮಾಡೆಲ್ ಮತ್ತು ನಟಿಯಾಗಿ ಗುರುತಿಸಿಕೊಂಡಿರುವ ಆರತಿ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದರು. ಆದರೆ ಈ ಮದುವೆ ಕೇವಲ ಎರಡೇ ವರ್ಷಕ್ಕೆ ಮುರಿದು ಬಿತ್ತು. ಇನ್ನು ಸಂಯುಕ್ತಾ ಷಣ್ಮುಗನಾಥನ್ 2020ರ ತಮ್ಮ ಪೋಷಕರ ಒತ್ತಾಸೆಯಂತೆ ದುಬೈ ಮೂಲದ ಉದ್ಯಮಿ ಕಾರ್ತಿಕ್ ಶಂಕರ್ ಅವರ ಜೊತೆ ಮದುವೆಯಾಗಿದ್ದರು.
ಇವರಿಗೆ ರಾಯನ್ ಎಂಬ ಮಗ ಕೂಡ ಇದ್ದಾನೆ. ಗಂಡ-ಮನೆ-ಸಂಸಾರ ಎಂದು ಸಂಯುಕ್ತಾ ಖುಷಿಯಾಗಿಯೇ ಇದ್ದರು. ಆದರೆ, ಸಂಯುಕ್ತಾ ಬೆನ್ನ ಹಿಂದೆ ಮಾಡಬಾರದ್ದನ್ನೆಲ್ಲ ಕಾರ್ತಿಕ್ ಶಂಕರ್ ಮಾಡಲು ಶುರು ಮಾಡಿದ್ದರು. ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದರು. ಖುದ್ದು ಸಂಯುಕ್ತಾ ಈ ಮಾತನ್ನು ಈ ವರ್ಷದ ಆರಂಭದಲ್ಲಿ ಹೇಳಿದ್ದರು. ಹೀಗಾಗಿ ಈ ವರ್ಷದ ಆರಂಭದಲ್ಲಿ ಕಾರ್ತಿಕ್ ಶಂಕರ್ ಅವರಿಗೆ ವಿಚ್ಛೇದನ ನೀಡಿದ ಸಂಯುಕ್ತಾ ಫೋಟೊಶೂಟ್ ಮೂಲಕ ಈ ವಿಚಾರವನ್ನು ಹಂಚಿಕೊಂಡಿದ್ದರು.
ಹೀಗೆ ಮೊದಲ ಮದುವೆಯ ಸಂಬಂಧವನ್ನು ಮುರಿದುಕೊಂಡ ಅನಿರುದ್ಧ ಶ್ರೀಕಾಂತ್ ಮತ್ತು ಸಂಯುಕ್ತಾ ಷಣ್ಮುಗನಾಥನ್ ಈಗ ಹೊಸ ಬದುಕಿಗೆ ಮುನ್ನುಡಿ ಬರೆದಿದ್ದಾರೆ. ನವ ಜೋಡಿಗೆ ಸದ್ಯ ಬೆಳ್ಳಿತೆರೆ, ಕಿರುತೆರೆ ಮತ್ತು ಕ್ರಿಕೆಟ್ ಕ್ಷೇತ್ರದ ಹಲವರು ಶುಭಾಶಯವನ್ನು ಕೋರುತ್ತಿದ್ದಾರೆ.
Credit: Filmibeat



Click it and Unblock the Notifications
