Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
CSK ಮಾಜಿ ಪ್ಲೇಯರ್ ಜೊತೆ ಸದ್ದಿಲ್ಲದೇ ಮದುವೆಯಾದ ಬಿಗ್ ಬಾಸ್ ಸ್ಫರ್ಧಿ, ಇಬ್ಬರಿಗೂ ಇದು ಎರಡನೇ ಮದುವೆ
ಮದುವೆ ಬದುಕಿನ ಮಹತ್ವದ ಹಂತ. ಇಲ್ಲಿ ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗಿ ಇರಬೇಕಾದಂತಹ ಒಂದು ಬಂಧನ. ಅದಕ್ಕೆ ಮದುವೆ ಎನ್ನುವುದು ಒಂದೆರಡು ದಿನದ ಆಟ ಅಲ್ಲ, ಜೀವನ ಪೂರ್ತಿ ಸಂಗಾತಿಯ ಜೊತೆ ಬಾಳುತ್ತೇವೆ ಎನ್ನುವುದನ್ನು ಅಧಿಕೃತವಾಗಿ ಘೋಷಿಸುವಂತಹ ಸುಸಂದರ್ಭ. ಆದರೆ ಕೆಲವೊಮ್ಮೆ ಸಂದರ್ಭ ಮತ್ತು ಪರಿಸ್ಥಿತಿ...
ಕೈಮೀರಿ ಹೋಗಿರುತ್ತವೆ. ಆಗ ವಿಚ್ಛೇದನ ಪಡೆಯದೇ ಬೇರೆ ದಾರಿಯೇ ಇಲ್ಲ ಎಂಬ ಭಾವನೆ ಬರುತ್ತೆ. ನಿರೀಕ್ಷೆಯಂತೆ ಸಂಬಂಧ ಕೂಡ ಮುರಿದು ಬೀಳುತ್ತೆ. ಹೀಗೆ ದಾಂಪತ್ಯ ಅಂತ್ಯವಾದಾಗ ಸಾಮಾನ್ಯವಾಗಿ ಅನೇಕರು ಮತ್ತೊಂದು ಮದುವೆಯಾಗುವ ಮನಸು ಮಾಡುವುದಿಲ್ಲ. ಅಯ್ಯೋ ಒಮ್ಮೆ ಅನುಭವಿಸಿದ್ದೇ ಸಾಕು ಎನ್ನುವ ತೀರ್ಮಾನಕ್ಕೆ ಬರುತ್ತಾರೆ. ಇನ್ನು ಕೆಲವರು ಅಳೆದು ತೂಗಿ ಹೊಸ ಭರವಸೆಯ ಜೊತೆ ಹೊಸ ಬದುಕಿಗೆ ಇನ್ನೊಮ್ಮೆ ಮುನ್ನುಡಿ ಬರೆಯಲು ಅಣಿಯಾಗುತ್ತಾರೆ. ಇದಕ್ಕೆ ಸಂಯುಕ್ತಾ ಷಣ್ಮುಗನಾಥನ್ ಮತ್ತು ಅನಿರುದ್ಧ ಶ್ರೀಕಾಂತ್ ಸದ್ಯದ ಉದಾಹರಣೆ.

ಹೌದು, ಸಂಯುಕ್ತಾ ಷಣ್ಮುಗನಾಥನ್ .. ಕಾಲಿವುಡ್ನ ಕಿನ್ನರಿ. 2007ರಲ್ಲಿ ಮಿಸ್ ಚೆನ್ನೈ ಕಿರೀಟವನ್ನು ಮುಡಿಗೇರಿಸಿಕೊಂಡ ಚೆಲುವೆ. ''ತುಘ್ಲಕ್ ದರ್ಬಾರ್''.. ''ವಾರಿಸು''.. ಸೇರಿ ಹಲವು ತಮಿಳು ಚಿತ್ರಗಳಲ್ಲಿ ಕಾಣಿಸಿಕೊಂಡ ಸಂಯುಕ್ತಾ 2020ರಲ್ಲಿ ತಮಿಳಿನ ''ಬಿಗ್ ಬಾಸ್'' ಸೀಸನ್ ನಾಲ್ಕರಲ್ಲಿ ಸ್ಫರ್ಧಿಯಾಗಿದ್ದರು.
ಇನ್ನೂ ಅನಿರುದ್ಧ ಶ್ರೀಕಾಂತ ವೃತ್ತಿಯಲ್ಲಿ ಈ ಹಿಂದೆ ಕ್ರಿಕೆಟ್ ಪ್ಲೇಯರ್ ಆಗಿದ್ದವರು. 2003 ರಿಂದ 2019ರವರೆಗೆ ರಣಜಿಯಲ್ಲಿ ತಮಿಳುನಾಡಿನ ಪರ ಆಡಿದವರು ಇವರು. 2008ರಿಂದ 2013ರವರೆಗೆ ಐಪಿಎಲ್ನಲ್ಲಿ ''ಚೆನ್ನೈ ಸೂಪರ್ ಕಿಂಗ್ಸ್'' ತಂಡದ ಪರ ಆಡಿದ್ದ ಅನಿರುದ್ಧ ಶ್ರೀಕಾಂತ 2011ರಲ್ಲಿ ''ಕೋಲ್ಕತ್ತಾ ನೈಟ್ ರೈಡರ್ಸ್'' ವಿರುದ್ಧದ ಮಹತ್ವದ ಪಂದ್ಯದಲ್ಲಿ 55 ಬಾಲ್ಗಳಲ್ಲಿ 64 ರನ್ಗಳನ್ನು ಸಿಡಿಸಿದ್ದರು. ಈ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಈ ಅನಿರುದ್ಧ ಶ್ರೀಕಾಂತ ಬೇರೆ ಯಾರು ಅಲ್ಲ ಬದಲಿಗೆ 1983ರ ವಿಶ್ವಕಪ್ ಹೀರೋಗಳಲ್ಲಿ ಒಬ್ಬರಾದ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಮುದ್ದಿನ ಮಗ.
ಇಂಥಾ ಅನಿರುದ್ಧ ಶ್ರೀಕಾಂತ ಮತ್ತು ಸಂಯುಕ್ತಾ ಷಣ್ಮುಗನಾಥನ್, ಸದ್ದಿಲ್ಲದೇ ತಮ್ಮ ಗುರು ಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ. ಹೊಸ ಬದುಕಿಗೆ ಮುನ್ನುಡಿ ಬರೆದಿದ್ದಾರೆ. ಈ ಮೂಲಕ ತಮ್ಮ ತಮ್ಮ ಅಭಿಮಾನಿಗಳಿಗೆ, ಹಿಂಬಾಲಕರಿಗೆ ಸರ್ಫ್ರೈಸ್ ನೀಡಿದ್ದಾರೆ.
ಅಂದ್ಹಾಗೇ ಅನಿರುದ್ಧ ಮತ್ತು ಸಂಯುಕ್ತಾ, ಇಬ್ಬರಿಗೂ ಇದು ಎರಡನೇ ಮದುವೆ. 2012ರಲ್ಲಿ ಅನಿರುದ್ಧ ಮಾಡೆಲ್ ಮತ್ತು ನಟಿಯಾಗಿ ಗುರುತಿಸಿಕೊಂಡಿರುವ ಆರತಿ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದರು. ಆದರೆ ಈ ಮದುವೆ ಕೇವಲ ಎರಡೇ ವರ್ಷಕ್ಕೆ ಮುರಿದು ಬಿತ್ತು. ಇನ್ನು ಸಂಯುಕ್ತಾ ಷಣ್ಮುಗನಾಥನ್ 2020ರ ತಮ್ಮ ಪೋಷಕರ ಒತ್ತಾಸೆಯಂತೆ ದುಬೈ ಮೂಲದ ಉದ್ಯಮಿ ಕಾರ್ತಿಕ್ ಶಂಕರ್ ಅವರ ಜೊತೆ ಮದುವೆಯಾಗಿದ್ದರು.
ಇವರಿಗೆ ರಾಯನ್ ಎಂಬ ಮಗ ಕೂಡ ಇದ್ದಾನೆ. ಗಂಡ-ಮನೆ-ಸಂಸಾರ ಎಂದು ಸಂಯುಕ್ತಾ ಖುಷಿಯಾಗಿಯೇ ಇದ್ದರು. ಆದರೆ, ಸಂಯುಕ್ತಾ ಬೆನ್ನ ಹಿಂದೆ ಮಾಡಬಾರದ್ದನ್ನೆಲ್ಲ ಕಾರ್ತಿಕ್ ಶಂಕರ್ ಮಾಡಲು ಶುರು ಮಾಡಿದ್ದರು. ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದರು. ಖುದ್ದು ಸಂಯುಕ್ತಾ ಈ ಮಾತನ್ನು ಈ ವರ್ಷದ ಆರಂಭದಲ್ಲಿ ಹೇಳಿದ್ದರು. ಹೀಗಾಗಿ ಈ ವರ್ಷದ ಆರಂಭದಲ್ಲಿ ಕಾರ್ತಿಕ್ ಶಂಕರ್ ಅವರಿಗೆ ವಿಚ್ಛೇದನ ನೀಡಿದ ಸಂಯುಕ್ತಾ ಫೋಟೊಶೂಟ್ ಮೂಲಕ ಈ ವಿಚಾರವನ್ನು ಹಂಚಿಕೊಂಡಿದ್ದರು.
ಹೀಗೆ ಮೊದಲ ಮದುವೆಯ ಸಂಬಂಧವನ್ನು ಮುರಿದುಕೊಂಡ ಅನಿರುದ್ಧ ಶ್ರೀಕಾಂತ್ ಮತ್ತು ಸಂಯುಕ್ತಾ ಷಣ್ಮುಗನಾಥನ್ ಈಗ ಹೊಸ ಬದುಕಿಗೆ ಮುನ್ನುಡಿ ಬರೆದಿದ್ದಾರೆ. ನವ ಜೋಡಿಗೆ ಸದ್ಯ ಬೆಳ್ಳಿತೆರೆ, ಕಿರುತೆರೆ ಮತ್ತು ಕ್ರಿಕೆಟ್ ಕ್ಷೇತ್ರದ ಹಲವರು ಶುಭಾಶಯವನ್ನು ಕೋರುತ್ತಿದ್ದಾರೆ.
Credit: Filmibeat



Click it and Unblock the Notifications
