ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಬಗ್ಗೆ ಬಿಗ್ ಅಪ್ಡೇಟ್ಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ!

By Hitesh Y

GruhaLakshmi Yojana: ಕರ್ನಾಟಕ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ಸ್‌ ಕೊಟ್ಟಿದ್ದಾರೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ಸಕಾಲದಲ್ಲಿ ಕೊಡುತ್ತಿಲ್ಲ ಅಥವಾ ಅವರ ಖಾತೆಗೆ ಸಕಾಲದಲ್ಲಿ ಜಮೆ ಆಗುತ್ತಿಲ್ಲ ಎನ್ನುವ ಆರೋಪಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಮ್ಮ ಸರ್ಕಾರವು ಒಂದೇ ಗುರಿಯೊಂದಿಗೆ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ. ಅದು ಪ್ರತಿಯೊಬ್ಬ ಮಹಿಳೆಯನ್ನು ಆರ್ಥಿಕವಾಗಿ ಸ್ವತಂತ್ರ ಮತ್ತು ಆತ್ಮವಿಶ್ವಾಸದಿಂದ ಕೂಡಿರುವಂತೆ ಮಾಡುವುದು. ಇಂದು (ನವೆಂಬರ್ 06) 99% ಫಲಾನುಭವಿಗಳು ಪ್ರತಿ ತಿಂಗಳು ಪಡೆಯುವ ₹2,000 ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದ್ದಾರೆ. ಇದು ಅವರ ಮನೆಯ ಆದಾಯದ ಸುಮಾರು 13% ರಷ್ಟಿದೆ.


CM Siddaramaiah gives big updates about GruhaLakshmi Yojana beneficiaries

ಈ ಬೆಂಬಲವು ಮಹಿಳೆಯರು ಆಹಾರ, ಆರೋಗ್ಯ ಮತ್ತು ಮಕ್ಕಳ ಶಿಕ್ಷಣದಂತಹ ದೈನಂದಿನ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತಿದೆ. ಜೊತೆಗೆ ಅವರು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರದಲ್ಲೂ ಅವರಿಗೆ ಘನತೆ ಮತ್ತು ವಿಶ್ವಾಸವನ್ನು ನೀಡುತ್ತದೆ. ಇದು ಸಬಲೀಕರಣದ ನಿಜವಾದ ಚೈತನ್ಯ - ಮಹಿಳೆಯ ಕೈಯಲ್ಲಿರುವ ಪ್ರತಿ ರೂಪಾಯಿ ಇಡೀ ಮನೆಯ ಅಭಿವೃದ್ಧಿಗೆ ನೆರವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

5 ತಿಂಗಳಿನಿಂದಲೂ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ: ಇನ್ನು ಇದಕ್ಕೆ ಹಲವರು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂದೇ ರಿಯಾಕ್ಟ್‌ ಮಾಡಿದ್ದಾರೆ. ಇನ್ನೂ ಕೆಲವರು ಗೃಹಲಕ್ಷ್ಮಿ ಯೋಜನೆ ಹಣ ಪಡೆದರೂ ಕೆಲವರು ಕೊಂಕು ನುಡಿಯುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ. ಹಲವರು ಕಳೆದ ಐದು ತಿಂಗಳಾದರೂ ನಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದು ದೂರಿದ್ದಾರೆ.

ಈ ಪೋಸ್ಟ್ ಗೆ ಸರ್ಕಾರದಿಂದ ಫಲಾನುಭವಿ ಮಹಿಳೆಯರು ರಿಪ್ಲೈ ಮಾಡಿದರೆ ಕನಿಷ್ಠ ಸುಮಾರು ಎರಡು ಕೋಟಿ ಆದರೂ ಲೈಕ್ ಆರ್ ಕಾಮೆಂಟ್ ಬರಬೇಕು ಆದರೆ ಕೇವಲ ಕೃತಜ್ಞತೆ ಇರೋರು ಮಾತ್ರ ರಿಪ್ಲೈ ಮಾಡ್ತಾರೆ, ಮಿಕ್ಕವರು ಅಷ್ಟೇ ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

Credit: Oneindia

X
Desktop Bottom Promotion