Rain Alert: ಕರ್ನಾಟಕಕ್ಕೂ ತಟ್ಟಿದ ಚಂಡಮಾರುತ ಎಫೆಕ್ಟ್‌! ಇಲ್ಲೆಲ್ಲಾ ಭಾರೀ ಮಳೆ

By Prajwal B

ರಾಜ್ಯದಲ್ಲಿ ದಿನೇ ದಿನೇ ವಿಪರೀತ ಚಳಿಯಾಗುತ್ತಿದೆ. ಅಲ್ಲದೇ ಈ ಮಧ್ಯೆ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಚಂಡಮಾರುತ (Cyclone) ಸೃಷ್ಟಿಯಾಗಿದೆ. ದಿತ್ವಾ ಚಂಡಮಾರುತದ ಪರಿಣಾಮ ಇದೀಗ ಗಾಳಿಯ ವೇಗ ಕೂಡಾ ಹೆಚ್ಚಾಗಿದ್ದು, ಈ ಪರಿಣಾಮ ಕರ್ನಾಟಕಕ್ಕೂ (Karnataka) ತಟ್ಟುವ ನಿರೀಕ್ಷೆಯಿದೆ. ಈ ಹಿನ್ನೆಲೆ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯದಲ್ಲೂ ಭಾರೀ ಮಳೆಯಾಗಬಹುದು (Heavy Rain) ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Heavy Rain

ಹವಾಮಾನ ಇಲಾಖೆಯ ಸೂಚನೆ ಪ್ರಕಾರ, ನವೆಂಬರ್‌ 29 ರಿಂದ ಡಿಸೆಂಬರ್‌ 2 ರವರೆಗೂ ಚಳಿ, ಮಳೆ ವಾತಾವರಣ ಇರಲಿದೆ ಎಂದು ಸೂಚನೆ ನೀಡಲಾಗಿದೆ.

ಹೌದು, ರಾಜ್ಯದಲ್ಲಿ ಈಗಾಗಲೇ ಚಳಿ ಜೋರಾಗಿದೆ. ಈ ಮಧ್ಯೆ ಇಂದಿನಿಂದ ಮಳೆಯಾಗಬಹುದು ಎಂದು ಸೂಚನೆ ನೀಡಲಾಗಿದೆ. ಮಧ್ಯ ಕರ್ನಾಟಕ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಎಲ್ಲೆಲ್ಲಿ ಮಳೆ?
ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಹಾವೇರಿ, ಬಳ್ಳಾರಿ, ತುಮಕೂರು, ಕಲಬುರಗಿ, ಕೊಪ್ಪಳ, ಗದಗ ಜಿಲ್ಲೆಯಲ್ಲಿ ಇಂದು (ನ.29) ಗುಡುಗು ಸಹಿತ ಭಾರೀ ಮಳೆಯಾಗಬಹುದು ಎಂದು ಹೇಳಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚಳಿ ವಾತಾವರಣ ಹೆಚ್ಚಾಗಿದ್ದು, ಮೋಡಕವಿದ ವಾತಾವರಣದ ಜೊತೆಗೆ ಅಲ್ಲಲ್ಲಿ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಎಲ್ಲೆಲ್ಲಿ ಒಣ ಹವೆ?
ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ಶಿವಮೊಗ್ಗ, ಬಾಗಲಕೋಟೆ, ಬೀದರ್‌, ವಿಜಯಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ವಿಜಯನಗರ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಹವಾಮಾನ:
ಇನ್ನು ಬೆಂಗಳೂರಿನಲ್ಲಿ ಚಳಿ ಜೊತೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ವರದಿಯಾಗಿದೆ. ಅಲ್ಲದೇ ತಾಪಮಾನ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಲಾಗಿದೆ.

ತಮಿಳುನಾಡಿನಲ್ಲೂ ಭಾರೀ ಮಳೆ!
ಇನ್ನು ಬಂಗಾಳಕೊಲ್ಲಿಯಲ್ಲಿ 'ದಿತ್ವಾ' ಚಂಡಮಾರುತವು ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಭಾಗದತ್ತ ಚಲಿಸುತ್ತಿರುವುದರಿಂದ ತಮಿಳುನಾಡಿನ ವಿವಿಧ ಜಿಲ್ಲೆಗಳಿಗೆ ನವೆಂಬರ್ 29, 2025 ರ ಶನಿವಾರದಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ (RMC) ರೆಡ್‌ ಅಲರ್ಟ್‌ ನೀಡಿದೆ.

ಚಂಡಮಾರುತವು ಶನಿವಾರ 7 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದು, ಪುದುಚೇರಿಯಿಂದ 380 ಕಿ.ಮೀ ದಕ್ಷಿಣ-ಆಗ್ನೇಯಕ್ಕೆ ಹಾಗೂ ಚೆನ್ನೈನಿಂದ 490 ಕಿ.ಮೀ ದಕ್ಷಿಣಕ್ಕೆ ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಬಂಗಾಳಕೊಲ್ಲಿಯಲ್ಲಿತ್ತು. ಇದೀಗ ಈ ಚಂಡಮಾರುತ ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಬಂಗಾಳಕೊಲ್ಲಿಯ ಮೂಲಕ ಸಾಗಿ, ಭಾನುವಾರ ಬೆಳಿಗ್ಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆಯ ಸೂಚನೆ ಪ್ರಕಾರ, ತಮಿಳುನಾಡಿನಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕಡಲೂರು, ಮೈಲಾಡುತುರೈ, ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಜೊತೆಗೆ ಪುದುಚೇರಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಅಲ್ಲದೇ ಚೆನ್ನೈ, ಸೇಲಂ, ತಂಜಾವೂರು ಮತ್ತು ರಾಣಿಪೇಟ್ ಸೇರಿದಂತೆ 14 ಡೆಲ್ಟಾ ಮತ್ತು ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಬಹುದು ಎನ್ನಲಾಗಿದೆ. ವೆಲ್ಲೂರು ಸೇರಿದಂತೆ ಆರು ಇತರ ಜಿಲ್ಲೆಗಳಲ್ಲಿ ಶನಿವಾರದಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Credit: Goodreturns

Story first published: Saturday, November 29, 2025, 8:43 [IST]
X
Desktop Bottom Promotion