Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
B Khata: ಬಿ - ಖಾತಾದಿಂದ ಎ - ಖಾತಾ: ಸರ್ಕಾರದಿಂದ ಮತ್ತೊಂದು ಗುಡ್ನ್ಯೂಸ್ ನಿರೀಕ್ಷೆ
ಬೆಂಗಳೂರು: ಬೆಂಗಳೂರಿನಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಬಿ - ಖಾತಾದಿಂದ ಎ - ಖಾತಾ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಬಿ - ಖಾತಾದಿಂದ ಎ ಖಾತಾ ಮಾಡುವ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ವರ್ಷಗಳಿಂದ ಬಿ - ಖಾತಾದಿಂದ ಎ - ಖಾತಾ ಮಾಡಿಸಿಕೊಳ್ಳಬೇಕು ಎಂದು ಆಸ್ತಿದಾರರು ಕಾಯುತ್ತಿದ್ದರು. ಈ ವರ್ಷ ಸರ್ಕಾರವೇ ಅಧಿಕೃತವಾಗಿ ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಅವಕಾಶ ನೀಡಿದೆಯಾದರೂ, ಆಸ್ತಿದಾರರು ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ.
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಆದರೆ ಲಕ್ಷಾಂತರ ಅರ್ಜಿ ಸಲ್ಲಿಕೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಆ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ.

ಬಿ ಖಾತಾ ಪರಿವರ್ತನೆ ಮಾಡುವುದಕ್ಕೆ ವಿಧಿಸಲಾಗಿರುವ ದುಬಾರಿ ಶುಲ್ಕವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಅಲ್ಲದೇ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ದುಬಾರಿ ಹಣ ನೀಡಿ ಬಿ ಖಾತಾ ಪಡೆದುಕೊಳ್ಳುವ ಅವಶ್ಯಕತೆ ಇಲ್ಲ. ಮುಂದಿನ ದಿನಗಳಲ್ಲಿ ಉಚಿತವಾಗಿ ಬಿ ಖಾತಾ ಸೇವೆ ಇರಲಿದೆ.
ನಾವು ಅಧಿಕಾರಕ್ಕೆ ಬಂದರೆ ಲಕ್ಷ ಲಕ್ಷ ರೂಪಾಯಿ ಪಡೆದುಕೊಳ್ಳದೆ ಉಚಿತವಾಗಿ ಬಿ ಖಾತಾ ಮಾಡಿಕೊಡಲಿದ್ದೇವೆ ಎಂದು ಭರವಸೆ ನೀಡಿದ್ದರು. ಈ ಅಂಶವೂ ಸಹ ಬಿ ಖಾತಾ ದಿಂದ ಎ ಖಾತಾ ಪರಿವರ್ತನೆಯಲ್ಲಿ ಭಾರೀ ಹಿನ್ನಡೆ ಉಂಟಾಗಿದೆ ಎಂದು ಹೇಳಲಾಗಿದೆ. ಎ ಖಾತಾ ವಿತರಣೆ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.
ಎ ಖಾತಾ ಪರಿವರ್ತನೆಗೆ ಅರ್ಜಿ ಸಲ್ಲಿಸುವುದಕ್ಕೆ ಗ್ರೇಟರ್ ಬೆಂಗಳುರು ಪ್ರಾಧಿಕಾರದಿಂದ 100 ದಿನಗಳ ಕಾಲಾವಕಾಶ ಇರಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಇದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. 1, 2025 ರಿಂದ 100 ದಿನಗಳ ಅಭಿಯಾನ ಪ್ರಾರಂಭಿಸಲಾಗಿದೆ. ಆದರೆ ಒಂದು ತಿಂಗಳು ಪೂರ್ಣಗೊಳ್ಳುವ ಸಮಯ ಬಂದರೂ, ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಬೆಂಗಳೂರಿನಲ್ಲಿ ಕೇವಲ 3 ಸಾವಿರ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಗಳಲ್ಲಿ 35 ಅರ್ಜಿಗಳನ್ನು ಪರಿಶೀಲನೆ ಮಾಡಿ ವಿತರಣೆ ಮಾಡಲಾಗಿದೆ.
7.5 ಲಕ್ಷ ಬಿ ಖಾತಾ ಆಸ್ತಿ
ಬೆಂಗಳೂರಿನಲ್ಲಿ ಅಂದಾಜು 25 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಅದರಲ್ಲಿ ಅಂದಾಜು ಏಳೂವರೆ ಲಕ್ಷ ಬಿ ಖಾತಾಗಳಿವೆ. ಅದರಲ್ಲಿ ಇಲ್ಲಿಯ ವರೆಗೆ ಕೇವಲ 3 ಸಾವಿರ ಬಿ ಖಾತಾದಾರರು ಮಾತ್ರ ಎ ಖಾತಾಗೆ ಅರ್ಜಿ ಸಲ್ಲಿಸಿದ್ದಾರೆ. ಬಿ ಖಾತಾದಾರರು ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಮುಂದೆ ಬರುತ್ತಿಲ್ಲ. ಹೀಗಾಗಿ, ಬಿ ಖಾತಾಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಬೇಗ ವಿಲೇವಾರಿ ಮಾಡಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗೈಡ್ ಲೈನ್ಸ್ ವ್ಯಾಲ್ಯೂ ಕಾರಣ
ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ರಾಜ್ಯ ಸರ್ಕಾರವು ಗೈಡ್ ಲೈನ್ಸ್ ವ್ಯಾಲ್ಯೂ 5% ನಿಗದಿ ಮಾಡಿರುವುದು ಭಾರೀ ಹಿನ್ನಡೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ. ಇದೀಗ ಗೈಡ್ ಲೈನ್ಸ್ ವ್ಯಾಲ್ಯೂ 5% ಹಿಂಪಡೆಯುವುದಕ್ಕೆ ರಾಜ್ಯ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಇದು ಆದರೆ ನಿಜಕ್ಕೂ ಬಿ ಖಾತಾ ಆಸ್ತಿದಾರರಿಗೆ ಗುಡ್ನ್ಯೂಸ್ ಸಿಕ್ಕಂತೆ ಆಗಲಿದೆ.
Credit: Oneindia



Click it and Unblock the Notifications
