Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
B Khata: ಬಿ - ಖಾತಾದಿಂದ ಎ - ಖಾತಾ: ಸರ್ಕಾರದಿಂದ ಮತ್ತೊಂದು ಗುಡ್ನ್ಯೂಸ್ ನಿರೀಕ್ಷೆ
ಬೆಂಗಳೂರು: ಬೆಂಗಳೂರಿನಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಬಿ - ಖಾತಾದಿಂದ ಎ - ಖಾತಾ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಬಿ - ಖಾತಾದಿಂದ ಎ ಖಾತಾ ಮಾಡುವ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ವರ್ಷಗಳಿಂದ ಬಿ - ಖಾತಾದಿಂದ ಎ - ಖಾತಾ ಮಾಡಿಸಿಕೊಳ್ಳಬೇಕು ಎಂದು ಆಸ್ತಿದಾರರು ಕಾಯುತ್ತಿದ್ದರು. ಈ ವರ್ಷ ಸರ್ಕಾರವೇ ಅಧಿಕೃತವಾಗಿ ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಅವಕಾಶ ನೀಡಿದೆಯಾದರೂ, ಆಸ್ತಿದಾರರು ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ.
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಆದರೆ ಲಕ್ಷಾಂತರ ಅರ್ಜಿ ಸಲ್ಲಿಕೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಆ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ.

ಬಿ ಖಾತಾ ಪರಿವರ್ತನೆ ಮಾಡುವುದಕ್ಕೆ ವಿಧಿಸಲಾಗಿರುವ ದುಬಾರಿ ಶುಲ್ಕವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಅಲ್ಲದೇ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ದುಬಾರಿ ಹಣ ನೀಡಿ ಬಿ ಖಾತಾ ಪಡೆದುಕೊಳ್ಳುವ ಅವಶ್ಯಕತೆ ಇಲ್ಲ. ಮುಂದಿನ ದಿನಗಳಲ್ಲಿ ಉಚಿತವಾಗಿ ಬಿ ಖಾತಾ ಸೇವೆ ಇರಲಿದೆ.
ನಾವು ಅಧಿಕಾರಕ್ಕೆ ಬಂದರೆ ಲಕ್ಷ ಲಕ್ಷ ರೂಪಾಯಿ ಪಡೆದುಕೊಳ್ಳದೆ ಉಚಿತವಾಗಿ ಬಿ ಖಾತಾ ಮಾಡಿಕೊಡಲಿದ್ದೇವೆ ಎಂದು ಭರವಸೆ ನೀಡಿದ್ದರು. ಈ ಅಂಶವೂ ಸಹ ಬಿ ಖಾತಾ ದಿಂದ ಎ ಖಾತಾ ಪರಿವರ್ತನೆಯಲ್ಲಿ ಭಾರೀ ಹಿನ್ನಡೆ ಉಂಟಾಗಿದೆ ಎಂದು ಹೇಳಲಾಗಿದೆ. ಎ ಖಾತಾ ವಿತರಣೆ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.
ಎ ಖಾತಾ ಪರಿವರ್ತನೆಗೆ ಅರ್ಜಿ ಸಲ್ಲಿಸುವುದಕ್ಕೆ ಗ್ರೇಟರ್ ಬೆಂಗಳುರು ಪ್ರಾಧಿಕಾರದಿಂದ 100 ದಿನಗಳ ಕಾಲಾವಕಾಶ ಇರಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಇದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. 1, 2025 ರಿಂದ 100 ದಿನಗಳ ಅಭಿಯಾನ ಪ್ರಾರಂಭಿಸಲಾಗಿದೆ. ಆದರೆ ಒಂದು ತಿಂಗಳು ಪೂರ್ಣಗೊಳ್ಳುವ ಸಮಯ ಬಂದರೂ, ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಬೆಂಗಳೂರಿನಲ್ಲಿ ಕೇವಲ 3 ಸಾವಿರ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಗಳಲ್ಲಿ 35 ಅರ್ಜಿಗಳನ್ನು ಪರಿಶೀಲನೆ ಮಾಡಿ ವಿತರಣೆ ಮಾಡಲಾಗಿದೆ.
7.5 ಲಕ್ಷ ಬಿ ಖಾತಾ ಆಸ್ತಿ
ಬೆಂಗಳೂರಿನಲ್ಲಿ ಅಂದಾಜು 25 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಅದರಲ್ಲಿ ಅಂದಾಜು ಏಳೂವರೆ ಲಕ್ಷ ಬಿ ಖಾತಾಗಳಿವೆ. ಅದರಲ್ಲಿ ಇಲ್ಲಿಯ ವರೆಗೆ ಕೇವಲ 3 ಸಾವಿರ ಬಿ ಖಾತಾದಾರರು ಮಾತ್ರ ಎ ಖಾತಾಗೆ ಅರ್ಜಿ ಸಲ್ಲಿಸಿದ್ದಾರೆ. ಬಿ ಖಾತಾದಾರರು ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಮುಂದೆ ಬರುತ್ತಿಲ್ಲ. ಹೀಗಾಗಿ, ಬಿ ಖಾತಾಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಬೇಗ ವಿಲೇವಾರಿ ಮಾಡಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗೈಡ್ ಲೈನ್ಸ್ ವ್ಯಾಲ್ಯೂ ಕಾರಣ
ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ರಾಜ್ಯ ಸರ್ಕಾರವು ಗೈಡ್ ಲೈನ್ಸ್ ವ್ಯಾಲ್ಯೂ 5% ನಿಗದಿ ಮಾಡಿರುವುದು ಭಾರೀ ಹಿನ್ನಡೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ. ಇದೀಗ ಗೈಡ್ ಲೈನ್ಸ್ ವ್ಯಾಲ್ಯೂ 5% ಹಿಂಪಡೆಯುವುದಕ್ಕೆ ರಾಜ್ಯ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಇದು ಆದರೆ ನಿಜಕ್ಕೂ ಬಿ ಖಾತಾ ಆಸ್ತಿದಾರರಿಗೆ ಗುಡ್ನ್ಯೂಸ್ ಸಿಕ್ಕಂತೆ ಆಗಲಿದೆ.
Credit: Oneindia



Click it and Unblock the Notifications