Latest Updates
-
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ!
Karnataka: ರೇಷನ್ ಕಾರ್ಡ್ ಬಳಕೆದಾರರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಮಹತ್ವದ ನಿರ್ಧಾರ
ಭಾರತ ಸರ್ಕಾರದ ಮಹತ್ತರ ಯೋಜನೆಗಳಲ್ಲಿ ಉಚಿತ ಅಕ್ಕಿ, ಅಗತ್ಯ ವಸ್ತುಗಳನ್ನು ನೀಡುವ ಯೋಜನೆ ಕೂಡಾ ಒಂದು. ಇದು ಸಾರ್ವಜನಿಕ ವಿತರಣಾ ವ್ಯವಸ್ಥೆ (Public Distribution System) ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದನ್ನು ರೇಷನ್ ಅಂಗಡಿ ಅಥವಾ ನ್ಯಾಯಬೆಲೆ ಅಂಗಡಿ ಅಂತಾನೂ ಕರೆಯಲಾಗುತ್ತದೆ. ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ನ್ಯಾಯಬೆಲೆ ಅಂಗಡಿ (Fair Price Shops) ಮೂಲಕ ಉಚಿತ ಅಕ್ಕಿ, ಗೋಧಿ, ಸಕ್ಕರೆ ಪಡೆಯಬಹುದು. ಸದ್ಯ ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕಾ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ ಎಲ್ಲಾ ರೇಷನ್ ಕಾರ್ಡ್ (Ration Card) ಬಳಕೆದಾರರಿಗೆ, ನ್ಯಾಯಬೆಲೆ ಅಂಗಡಿಯವರಿಗೆ ಅನುಕೂಲವಾಗುವಂತೆ ಸರ್ಕಾರ ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಲು ಮುಂದಾಗಿದೆ.

ಹೌದು, ಕರ್ನಾಟಕದಲ್ಲಿ ಶೀಘ್ರದಲ್ಲೇ ರೇಷನ್ ಕಾರ್ಡ್ಗೆ ಸಂಬಂಧಿಸಿ ಹೊಸ ಅಪ್ಡೇಟ್ ಬಿಡುಗಡೆಯಾಗಲಿದೆ. ಆ ಪ್ರಕಾರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮೊಬೈಲ್ ಅಪ್ಲಿಕೇಶನ್ ಒಂದನ್ನು ಪರಿಚಯಿಸಲು ಸಿದ್ದವಾಗಿದೆ. ಈ ಮೂಲಕ ಇನ್ಮೇಲೆ ಮೊಬೈಲ್ ಅಪ್ಲಿಕೇಶನ್ ಮೂಲಕವೂ ನ್ಯಾಯಬೆಲೆ ಅಂಗಡಿ ಜೊತೆ ವ್ಯವಹಾರ ನಡೆಸಬಹುದು.
ಹೊಸ ಆಪ್ ಬಿಡುಗಡೆಗೆ ಪ್ಲಾನ್:
ಒಂದು ವೇಳೆ ಈ ಆಪ್ ಆಧಾರಿತ ಸೇವೆ ಜಾರಿಗೆ ಬಂದರೆ, ಈ ಮೊಬೈಲ್ ಅಪ್ಲಿಕೇಶನ್ ಮತ್ತು ಸರ್ಕಾರಿ ಡೇಟಾಬೇಸ್ನೊಂದಿಗೆ ಸಂಯೋಜನೆಗೊಂಡಿರುವ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(EPOS) ಯಂತ್ರವು ಯೋಜನೆಯ ಫಲಾನುಭವಿಗಳ ಆಧಾರ್ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತದೆ. ನಂತರ ಈ ಆಪ್ ವಿತರಿಸಿದ ಆಹಾರ ಧಾನ್ಯದ ತೂಕ, ಅಕ್ಕಿಯ ತೂಕವನ್ನು ದಾಖಲಿಸಿಕೊಂಡು ಕೇಂದ್ರದ ಸರ್ವರ್ ಜೊತೆ ಅಪ್ಡೇಟ್ ಮಾಡುತ್ತದೆ. ಈ ಮೂಲಕ ಸದ್ಯ ನ್ಯಾಯಬೆಲೆ ಅಂಗಡಿಗಳಲ್ಲಾಗುತ್ತಿರುವ ಅಕ್ರಮ, ವಂಚನೆಗೆ ಬ್ರೇಕ್ ಹಾಕಿ, ಪಾರದರ್ಶಕತೆಯನ್ನು ಹೆಚ್ಚಿಸಲು ದಾರಿಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇ-ಪಾಯಿಂಟ್ ಆಫ್ ಸೇಲ್ (e-PoS) ವ್ಯವಸ್ಥೆಯ ವಿಸ್ತರಣೆ ಇದಾಗಿದ್ದು, ಮೊಬೈಲ್ ಆಪ್ ಮೂಲಕ ಕಾರ್ಯನಿರ್ವಹಿಸಲಿದೆ. ಈ ಆಪ್ ಮೂಲಕ ಆಧಾರ್ ಸಂಬಂಧಿಸಿದ ಬಯೋ ಮೆಟ್ರಿಕ್, ಸ್ಕ್ಯಾನಿಂಗ್, ಬಾರ್ಕೋಡ್ ಸ್ಕ್ಯಾನರ್ ಮತ್ತಯ ಜಿಪಿಎಸ್ನಂತಹ ಟ್ರ್ಯಾಕಿಂಗ್ ಸೌಲಭ್ಯಗಳಿವೆ. ಆದ್ದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡಲಾಗುವ ಪ್ರತೀ ವಸ್ತುವನ್ನು ಆಪ್ ಮೂಲಕ ರಿಪೋರ್ಟ್ ಮಾಡಲಾಗುತ್ತದೆ.
ಈ ಆಪ್ ಹಿಂದಿನ ಉದ್ದೇಶವೇನು?
- ಫೇರ್ಪ್ರೈಸ್ ಶಾಪ್ಗಳಲ್ಲಿ ನೀಡಲಾಗುವ ಆಹಾರಧಾನ್ಯಗಳ ಮಾರಾಟವನ್ನು ಸಂಪೂರ್ಣವಾಗಿ ಟ್ರ್ಯಾಕ್ ಮಾಡುತ್ತದೆ.
- ಅಕ್ರಮ, ಸ್ಟಾಕ್ ಕೊರತೆ ಅಥವಾ ಅತಿಯಾದ ಮಾರಾಟಕ್ಕೆ ಬ್ರೇಕ್ ಬೀಳಲಿದೆ.
- ಗ್ರಾಹಕರಿಗೆ ತಮ್ಮ ಅರ್ಹತೆ ಮತ್ತು ಉಳಿದ ಸ್ಟಾಕ್ ಬಗ್ಗೆ ನಿರಂತರ ಅಪ್ಡೇಟ್ ಸಿಗಲಿದೆ.
- ಇಲಾಖಾ ಅಧಿಕಾರಿಗಳು ಡ್ಯಾಶ್ಬೋರ್ಡ್ ಮೂಲಕ ರಾಜ್ಯಾದ್ಯಂತ ಡೇಟಾವನ್ನು ಸಂಗ್ರಹಿಸಿಟ್ಟುಕೊಳ್ಳಬಹುದು.
ಕರ್ನಾಟಕದಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ನ್ಯಾಯಬೆಲೆ ಅಂಗಡಿಗಳಿವೆ. ಆದರೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ e-PoS ಯಂತ್ರಗಳು ಕಾರ್ಯನಿರ್ವಹಿಸುತ್ತಿದೆ. ಆದ್ರೆ ಶೀಘ್ರದಲ್ಲೇ ಎಲ್ಲಾ ಶಾಪ್ಗಳಲ್ಲೂ ಈ ಆಪ್ ಆಧಾರಿತ ಸಿಸ್ಟಮ್ ಕಾರ್ಯನಿರ್ವಹಿಸಲಿದೆ. ಇದೇ ವರ್ಷಾಂತ್ಯದಲ್ಲಿ ಆಪ್ ಬಿಡುಗಡೆ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ವರದಿಯಾಗಿದೆ.
Credit: Goodreturns



Click it and Unblock the Notifications