Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Karnataka: ರೇಷನ್ ಕಾರ್ಡ್ ಬಳಕೆದಾರರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಮಹತ್ವದ ನಿರ್ಧಾರ
ಭಾರತ ಸರ್ಕಾರದ ಮಹತ್ತರ ಯೋಜನೆಗಳಲ್ಲಿ ಉಚಿತ ಅಕ್ಕಿ, ಅಗತ್ಯ ವಸ್ತುಗಳನ್ನು ನೀಡುವ ಯೋಜನೆ ಕೂಡಾ ಒಂದು. ಇದು ಸಾರ್ವಜನಿಕ ವಿತರಣಾ ವ್ಯವಸ್ಥೆ (Public Distribution System) ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದನ್ನು ರೇಷನ್ ಅಂಗಡಿ ಅಥವಾ ನ್ಯಾಯಬೆಲೆ ಅಂಗಡಿ ಅಂತಾನೂ ಕರೆಯಲಾಗುತ್ತದೆ. ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ನ್ಯಾಯಬೆಲೆ ಅಂಗಡಿ (Fair Price Shops) ಮೂಲಕ ಉಚಿತ ಅಕ್ಕಿ, ಗೋಧಿ, ಸಕ್ಕರೆ ಪಡೆಯಬಹುದು. ಸದ್ಯ ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕಾ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ ಎಲ್ಲಾ ರೇಷನ್ ಕಾರ್ಡ್ (Ration Card) ಬಳಕೆದಾರರಿಗೆ, ನ್ಯಾಯಬೆಲೆ ಅಂಗಡಿಯವರಿಗೆ ಅನುಕೂಲವಾಗುವಂತೆ ಸರ್ಕಾರ ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಲು ಮುಂದಾಗಿದೆ.

ಹೌದು, ಕರ್ನಾಟಕದಲ್ಲಿ ಶೀಘ್ರದಲ್ಲೇ ರೇಷನ್ ಕಾರ್ಡ್ಗೆ ಸಂಬಂಧಿಸಿ ಹೊಸ ಅಪ್ಡೇಟ್ ಬಿಡುಗಡೆಯಾಗಲಿದೆ. ಆ ಪ್ರಕಾರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮೊಬೈಲ್ ಅಪ್ಲಿಕೇಶನ್ ಒಂದನ್ನು ಪರಿಚಯಿಸಲು ಸಿದ್ದವಾಗಿದೆ. ಈ ಮೂಲಕ ಇನ್ಮೇಲೆ ಮೊಬೈಲ್ ಅಪ್ಲಿಕೇಶನ್ ಮೂಲಕವೂ ನ್ಯಾಯಬೆಲೆ ಅಂಗಡಿ ಜೊತೆ ವ್ಯವಹಾರ ನಡೆಸಬಹುದು.
ಹೊಸ ಆಪ್ ಬಿಡುಗಡೆಗೆ ಪ್ಲಾನ್:
ಒಂದು ವೇಳೆ ಈ ಆಪ್ ಆಧಾರಿತ ಸೇವೆ ಜಾರಿಗೆ ಬಂದರೆ, ಈ ಮೊಬೈಲ್ ಅಪ್ಲಿಕೇಶನ್ ಮತ್ತು ಸರ್ಕಾರಿ ಡೇಟಾಬೇಸ್ನೊಂದಿಗೆ ಸಂಯೋಜನೆಗೊಂಡಿರುವ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(EPOS) ಯಂತ್ರವು ಯೋಜನೆಯ ಫಲಾನುಭವಿಗಳ ಆಧಾರ್ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತದೆ. ನಂತರ ಈ ಆಪ್ ವಿತರಿಸಿದ ಆಹಾರ ಧಾನ್ಯದ ತೂಕ, ಅಕ್ಕಿಯ ತೂಕವನ್ನು ದಾಖಲಿಸಿಕೊಂಡು ಕೇಂದ್ರದ ಸರ್ವರ್ ಜೊತೆ ಅಪ್ಡೇಟ್ ಮಾಡುತ್ತದೆ. ಈ ಮೂಲಕ ಸದ್ಯ ನ್ಯಾಯಬೆಲೆ ಅಂಗಡಿಗಳಲ್ಲಾಗುತ್ತಿರುವ ಅಕ್ರಮ, ವಂಚನೆಗೆ ಬ್ರೇಕ್ ಹಾಕಿ, ಪಾರದರ್ಶಕತೆಯನ್ನು ಹೆಚ್ಚಿಸಲು ದಾರಿಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇ-ಪಾಯಿಂಟ್ ಆಫ್ ಸೇಲ್ (e-PoS) ವ್ಯವಸ್ಥೆಯ ವಿಸ್ತರಣೆ ಇದಾಗಿದ್ದು, ಮೊಬೈಲ್ ಆಪ್ ಮೂಲಕ ಕಾರ್ಯನಿರ್ವಹಿಸಲಿದೆ. ಈ ಆಪ್ ಮೂಲಕ ಆಧಾರ್ ಸಂಬಂಧಿಸಿದ ಬಯೋ ಮೆಟ್ರಿಕ್, ಸ್ಕ್ಯಾನಿಂಗ್, ಬಾರ್ಕೋಡ್ ಸ್ಕ್ಯಾನರ್ ಮತ್ತಯ ಜಿಪಿಎಸ್ನಂತಹ ಟ್ರ್ಯಾಕಿಂಗ್ ಸೌಲಭ್ಯಗಳಿವೆ. ಆದ್ದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡಲಾಗುವ ಪ್ರತೀ ವಸ್ತುವನ್ನು ಆಪ್ ಮೂಲಕ ರಿಪೋರ್ಟ್ ಮಾಡಲಾಗುತ್ತದೆ.
ಈ ಆಪ್ ಹಿಂದಿನ ಉದ್ದೇಶವೇನು?
- ಫೇರ್ಪ್ರೈಸ್ ಶಾಪ್ಗಳಲ್ಲಿ ನೀಡಲಾಗುವ ಆಹಾರಧಾನ್ಯಗಳ ಮಾರಾಟವನ್ನು ಸಂಪೂರ್ಣವಾಗಿ ಟ್ರ್ಯಾಕ್ ಮಾಡುತ್ತದೆ.
- ಅಕ್ರಮ, ಸ್ಟಾಕ್ ಕೊರತೆ ಅಥವಾ ಅತಿಯಾದ ಮಾರಾಟಕ್ಕೆ ಬ್ರೇಕ್ ಬೀಳಲಿದೆ.
- ಗ್ರಾಹಕರಿಗೆ ತಮ್ಮ ಅರ್ಹತೆ ಮತ್ತು ಉಳಿದ ಸ್ಟಾಕ್ ಬಗ್ಗೆ ನಿರಂತರ ಅಪ್ಡೇಟ್ ಸಿಗಲಿದೆ.
- ಇಲಾಖಾ ಅಧಿಕಾರಿಗಳು ಡ್ಯಾಶ್ಬೋರ್ಡ್ ಮೂಲಕ ರಾಜ್ಯಾದ್ಯಂತ ಡೇಟಾವನ್ನು ಸಂಗ್ರಹಿಸಿಟ್ಟುಕೊಳ್ಳಬಹುದು.
ಕರ್ನಾಟಕದಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ನ್ಯಾಯಬೆಲೆ ಅಂಗಡಿಗಳಿವೆ. ಆದರೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ e-PoS ಯಂತ್ರಗಳು ಕಾರ್ಯನಿರ್ವಹಿಸುತ್ತಿದೆ. ಆದ್ರೆ ಶೀಘ್ರದಲ್ಲೇ ಎಲ್ಲಾ ಶಾಪ್ಗಳಲ್ಲೂ ಈ ಆಪ್ ಆಧಾರಿತ ಸಿಸ್ಟಮ್ ಕಾರ್ಯನಿರ್ವಹಿಸಲಿದೆ. ಇದೇ ವರ್ಷಾಂತ್ಯದಲ್ಲಿ ಆಪ್ ಬಿಡುಗಡೆ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ವರದಿಯಾಗಿದೆ.
Credit: Goodreturns



Click it and Unblock the Notifications











