Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
Karnataka Rains: ಒಂದು ದಿನ ರಾಜ್ಯಾದ್ಯಂತ ಭಾರೀ ಮಳೆ?, ಯೆಲ್ಲೋ ಅಲರ್ಟ್: ಗರಿಷ್ಠ ತಾಪಮಾನ 33.7 °c.
Karnataka Weather Forecast: ಸಮುದ್ರ ಮೇಲ್ಮೈ ಹಾಗೂ ಭೂ ಮೇಲ್ಮೈನಲ್ಲಿ ಉಂಟಾಗಿರುವ ವೈಪರೀತ್ಯಗಳ ಪ್ರಭಾವದಿಂದಾಗಿ ವಿವಿಧೆಡೆ ಮಳೆ ಆಗಲಿದೆ. ಆದರೆ ಕರ್ನಾಟಕದ ಮಟ್ಟಿಗೆ ಅದರ ಪ್ರಭಾವ ಆಗದು. ಕೆಲವೆಡೆ ಮಳೆ, ಹಲವೆಡೆ ಭರ್ಜರಿ ಬಿಸಿಲಿನ ಮುನ್ಸೂಚನೆ ಸಿಕ್ಕಿದೆ. ನಿರಂತರ ಮಳೆಗೆ ಕಂಗಾಲಾದ ರಾಜ್ಯದ ಜನರಿಗೆ ಬಿಸಿಲಿನ ಕಾವು ನೆನ್ನೆ ಶನಿವಾರದಿಂದಲೇ ತಟ್ಟಲು ಶುರುವಾಗಿದೆ.
ಹೌದು, ಶನಿವಾರ ನವೆಂಬರ್ 1ರಂದು ಅತೀವ ಬಿಸಿಲು ಕಾಣಿಸಿಕೊಂಡಿತು. ಸ್ವಚ್ಛ ನೀಲಿ ಆಕಾಶದಲ್ಲಿ ಹಿಂಗಾರು ಮಳೆ ಸುರಿಸುವ ಮಾರುತಗಳು ಅದೃಶ್ಯವಾಗಿದ್ದವು. ಎಲ್ಲೆಲ್ಲೂ ಬಿಸಿಲಿನ ಹವೆ ಹೆಚ್ಚಾಯಿತು. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗಿದೆ. ಮುಂದಿನ ಐದು ದಿನಗಳಲ್ಲಿ ಈ ಉಷ್ಣಾಂಶ ಪ್ರಮಾಣ ಹೀಗೆ ಮುಂದುವರಿಯಲಿದೆ. ಒಂದಷ್ಟು ಕಡೆಗಳಲ್ಲಿ ಮಳೆ ಸಹ ಆಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ
ನವೆಂಬರ್ 04 ರಿಂದ ವಿವಿಧ ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಒಳನಾಡು, ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಇಂದಿನ ಮುನ್ಸೂಚನೆ ಪ್ರಕಾರ, ನವೆಂಬರ್ 05ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಮತ್ತೆ ವರುಣಾರ್ಭಟ ಕಂಡು ಬರಲಿದೆ. ಅಂದು ಸಾಧಾರಣದಿಂದ ಭಾರೀ ಮಳೆ ಆಗಲಿದ್ದು, ಎಲ್ಲ ಜಿಲ್ಲೆಗಳಿಗೂ 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಆವತ್ತು ಕನಿಷ್ಠ 65ರಿಂದ 115 ಮಿಲಿ ಮೀಟರ್ವರೆಗೆ ಮಳೆ ಆಗುವ ಲಕ್ಷಣ ಇದೆ ಎಂದು ಐಎಂಡಿ ಮುನ್ಸೂಚನಾ ವರದಿ ತಿಳಿಸಿದೆ.
ಕರಾವಳಿ ಕರ್ನಾಟಕ ಭಾಗದಲ್ಲೂ ಈಗಾಗಲೇ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ. ವಿವಿಧ ಭಾಗಗಳಲ್ಲಿ 30 ಡಿಗ್ರಿ ಸೆಲ್ಸಿಯಸ್ ದಾಟಿದೆ. ಒಣಹವೆಯ ವಾತಾವರಣ ಸೃಷ್ಟಿಯಾಗಿದೆ. ಒಂದೇ ದಿನದಲ್ಲಿ ಮಬ್ಬು ವಾತಾವರಣ ಹೋಗಿ, ಅಧಿಕ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆ ಹೆಚ್ಚು ಚಳಿ, ತಂಪು ವಾತಾವರಣ ನಿರ್ಮಾಣವಾಗುತ್ತಿದೆ. ಈ ಮಧ್ಯೆ ಒಂದು ದಿನ ಭರ್ಜರಿ ಮಳೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಗರಿಷ್ಠ ತಾಪಮಾನ 33.7 ಡಿ.ಸೆ.
ಶನಿವಾರ ರಾಜ್ಯದ ಗರಿಷ್ಠ ತಾಪಮಾನ ನೋಡುವುದಾರೆ, ಕಾರವಾರದಲ್ಲಿ 33.7 ಡಿಗ್ರಿ ಸೆಲ್ಸಿಯಸ್, ಹೊನ್ನವಾರದಲ್ಲಿ 32 ಡಿಗ್ರಿ ಸೆಲ್ಸಿಯಸ್, ಮಂಗಳೂರು ವಿಮಾನ ನಿಲ್ದಾಣ & ಶಕ್ತಿ ನಗರದಲ್ಲಿ 32 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ 32 ಡಿಗ್ರಿ ಸೆಲ್ಸಿಯಸ್, ವಿಜಯಪುರ 31 ಡಿಗ್ರಿ ಸೆಲ್ಸಿಯಸ್, ರಾಯಚೂರು 31 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ 30 ಡಿಗ್ರಿ ಸೆಲ್ಸಿಯಸ್, ಹಾವೇರಿ 30 ಡಿಗ್ರಿ ಸೆಲ್ಸಿಯಸ್ 29 ಡಿಗ್ರಿ ಸೆಲ್ಸಿಯಸ್, ಬೀದರ್ 29 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 29 ಡಿಗ್ರಿ ಸೆಲ್ಸಿಯಸ್, ಧಾರವಾಡ 29 ಡಿಗ್ರಿ ಸೆಲ್ಸಿಯಸ್, ಗದಗ, 29 ಡಿಗ್ರಿ ಸೆಲ್ಸಿಯಸ್ ಚಿತ್ರದುರ್ಗ 29 ಡಿಗ್ರಿ ಸೆಲ್ಸಿಯಸ್, ದಾವಣಗೆರೆ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಈ ತಾಪಮಾನದ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
Credit: Oneindia



Click it and Unblock the Notifications











