Latest Updates
-
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು -
ಉದ್ದಿನ ಬೇಳೆ ಇದ್ರೆ ಸಾಕು! ಈ 4 ಹೊಸ ಬಗೆಯ ತಿಂಡಿ ಮಾಡಿ ನೋಡಿ.. ಎಲ್ಲರೂ ಇಷ್ಟಪಟ್ಟು ತಿಂತಾರೆ -
ಹಳೇ ಅನ್ನ ಎಸೆಯಬೇಡಿ! 10 ನಿಮಿಷದಲ್ಲಿ ಮಾಡಿ ಈ ಸ್ವಾದಿಷ್ಟ ದೋಸೆ.. ಉಳಿದ ಅನ್ನದ ಮ್ಯಾಜಿಕ್ ರೆಸಿಪಿ -
March 20 Horoscope: ಸ್ನೇಹ ಸಂಬಂಧಗಳಲ್ಲಿ ಶುಭಫಲ! -
ಅವಿವಾಹಿತರಿಗೆ ಇಂದು ಬಹಳ ಶುಭ ದಿನ! ಲವ್ಗೆ ಕುಟುಂಬದ ಬೆಂಬಲ -
ಜೀವನದಲ್ಲಿ ನೆಮ್ಮದಿ ಬೇಕಾ..? ಈ 5 ಕೆಲಸಗಳನ್ನು ಮಾಡುವಾಗ ಅತಿ ಹೆಚ್ಚು ತಾಳ್ಮೆ ಇರಲಿ! ಸಕ್ಸಸ್ ಮಂತ್ರ ಇಲ್ಲಿದೆ -
ಹೊರಗಿನ ಜ್ಯೂಸ್ ಬಿಡಿ..!! ಬಿಸಿಲಿಗೆ ಕಿಕ್ ಕೊಡೋ ಸ್ಪೆಷಲ್ ಶರಬತ್ತುಗಳಿವು! ಮನೆಯಲ್ಲಿ ಸಿಂಪಲ್ ಆಗಿ ಮಾಡಿ
ಕನ್ನಡದ ಖ್ಯಾತ ಹಾಸ್ಯನಟ ಎಂ.ಎಸ್ ಉಮೇಶ್ ವಿಧಿವಶ
ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಇದೇ ಅಕ್ಟೋಬರ್ 10ರಂದು ಜಾರಿಬಿದ್ದು ಉಮೇಶ್ ಪೆಟ್ಟು ಮಾಡಿಕೊಂಡಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಬಹುತೇಕ ಹಾಸ್ಯ ಪಾತ್ರಗಳಲ್ಲೇ ಮಿಂಚಿದ್ದರು. ತನ್ನ ಕಾಮಿಡಿ ಟೈಮಿಂಗ್ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು.

ಎಂ. ಎಸ್ ಉಮೇಶ್ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ತಮ್ಮ ಪರಿಶುದ್ಧ ಹಾಸ್ಯದ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಸಂಪಾದಿಸಿದ್ದಾರೆ. ಅವರ ಅಂತ್ಯಕ್ರಿಯೆಗೆ ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದಾರೆ. 1960ರಲ್ಲಿ ಬಿ.ಆರ್ ಪಂಥುಲು ನಿರ್ದೇಶನದ 'ಮಕ್ಕಳ ರಾಜ್ಯ' ಸಿನಿಮಾ ಮೂಲಕ ಬಾಲನಟನಾಗಿ ಉಮೇಶ್ ಚಿತ್ರರಂಗ ಪ್ರವೇಶಿಸಿದ್ದರು.
ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಕಥಾ ಸಂಗಮ' ಸಿನಿಮಾದಲ್ಲಿ ಪ್ರಮುಖ ಪಾತ್ರ ಸಿಕ್ಕಿತ್ತು. ಅಲ್ಲಿಂದ ಮುಂದೆ ಸಾಲು ಸಾಲು ಅವಕಾಶಗಳು ಅರಸಿ ಬಂದಿತ್ತು. 'ಗುರು ಶಿಷ್ಯರು', 'ಕಾಮನಬಿಲ್ಲು', 'ಗೋಲ್ಮಾಲ್ ರಾಧಾಕೃಷ್ಣ', 'ಶ್ರಾವಣ ಬಂತು', 'ಮಲಯ ಮಾರುತ', 'ಅಪೂರ್ವ ಸಂಗಮ', 'ಶೃತಿ ಸೇರಿದಾಗ', 'ನಾಗರಹೊಳೆ', 'ಅಪೂರ್ವ ಸಂಗಮ', 'ಹಸಿದ ಹೆಬ್ಬುಲಿ', 'ಹಗಲುವೇಷ', 'ಹಿಮಪಾತ' ಉಮೇಶ್ ನಟನೆಯ ಪ್ರಮುಖ ಚಿತ್ರಗಳು.
ಮೈಸೂರಿನಲ್ಲಿ ಉಮೇಶ್ 1945 ರ ಏಪ್ರಿಲ್ 24 ರಂದು ಎ.ಎಲ್. ಶ್ರೀಕಂಠಯ್ಯ ಮತ್ತು ನಂಜಮ್ಮ ದಂಪತಿ ಮಗನಾಗಿ ಹುಟ್ಟಿ ಬೆಳೆದ ಉಮೇಶ್ ರಂಗಭೂಮಿ ಸೆಳೆತಕ್ಕೆ ಒಳಗಾಗಿದ್ದರು. 4 ನೇ ವಯಸ್ಸಿನಲ್ಲಿ ಕೆ. ಹಿರಣ್ಣಯ್ಯ ನಡೆಸುತ್ತಿದ್ದ ಜನಪ್ರಿಯ ರಂಗಭೂಮಿ ತಂಡ ಸೇರಿ ಬಾಲ ಕಲಾವಿದರ ಪಾತ್ರಗಳಲ್ಲಿ ನಟಿಸಿದ್ದರು. ಬಳಿಕ ಗುಬ್ಬಿ ವೀರಣ್ಣ ಅವರ ಕಂಪನಿ ಸೇರಿದ ಮೇಲೆ ಸಿನಿಮಾ ಅವಕಾಶಗಳು ಬರಲು ಆರಂಭವಾಗಿತ್ತು. ಅದೇ ಸಮಯದಲ್ಲಿ ಬಿ. ಆರ್ ಪಂತುಲು ಅವರ 'ಮಕ್ಕಳರಾಜ್ಯ' ಚಿತ್ರದ ಅವಕಾಶ ಸಿಕ್ಕಿತ್ತು.
ಪುಟ್ಟಣ್ಣ ಸಲಹೆ ಮೇರೆಗೆ 'ಮಕ್ಕಳರಾಜ್ಯ' ಚಿತ್ರದಲ್ಲಿ ಉಮೇಶ್ ನಟಿಸುವಂತಾಗಿತ್ತು. ಮತ್ತೆ ಪುಟ್ಟಣ್ಣ ಕರೆದು ತಮ್ಮ 'ಕಥಾಸಂಗಮ' ಚಿತ್ರದಲ್ಲಿ ಅವಕಾಶ ಕೊಟ್ಟಿದ್ದರು. 'ಗೋಲ್ಮಾಲ್ ರಾಧಾಕೃಷ್ಣ' ಚಿತ್ರದ ಸೀತಾಪತಿ ಪಾತ್ರದಲ್ಲಿ ಉಮೇಶ್ ಅವರನ್ನು ಮರೆಯೋಕೆ ಸಾಧ್ಯವಿಲ್ಲ. ಇನ್ನು ರಮೇಶ್ ಅರವಿಂದ್ ನಿರ್ದೇಶನದ 'ವೆಂಕಟ ಇನ್ ಸಂಕಟ' ಚಿತ್ರದಲ್ಲಿ ಅಜ್ಜಿ ವೇಷದಲ್ಲಿ ಉಮೇಶ್ ಮೋಡಿ ಮಾಡಿದ್ದರು.
Credit: Filmibeat



Click it and Unblock the Notifications












