Latest Updates
-
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್!
BPL: ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್
BPL: ರಾಜ್ಯದಲ್ಲಿ ಸದ್ಯ ಆಹಾರ ಇಲಾಖೆ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸುತ್ತಿದೆ. ಈ ನಡುವೆಯೇ ಇಂತಹವರೆಲ್ಲರನ್ನು ಬಿಗ್ ಶಾಕ್ವೊಂದು ಕಾದಿದ್ದು, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಯಿಂದ ಹೊರಗಿಡಲಾಗಿದೆ. ಹಾಗಾದ್ರೆ, ಯಾರನ್ನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ, ಅನರ್ಹರು ಸಹ ಪಡೆದುಕೊಂಡಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಿದೆ. ಈ ನಡುವೆಯೇ ಕೆಳಗೆ ನೀಡಲಾಗಿರುವ ಇಂತಹವರನ್ನು ಬಿಪಿಎಲ್/ಅಂತ್ಯೋದಯ ಕಾರ್ಡ್ನಿಂದ ಹೊರಗಿಡಲಾಗಿದೆ.

* ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಹೆಕ್ಟೇರ್ಗೂ ಅಧಿಕ ಜಮೀನು ಇದ್ದಲ್ಲಿ ಅಂತಹವರು ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು ಎಂದು ತಿಳಿಸಲಾಗಿದೆ.
* ಪಡಿತರ ಚೀಟಿಯ ಯಾವುದೇ ಸದಸ್ಯ 4 ಚಕ್ರ ವಾಹನ ಹೊಂದಿದ್ದಲ್ಲಿ ಅಂತಹವರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು(ತಂದೆ/ ತಾಯಿ/ಪತ್ನಿ/ಅವಿವಾಹಿತ ಮಕ್ಕಳು) ಬಿಪಿಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಜಿಎಸ್ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ಹೆಂಡತಿ/ಅವಿವಾಹಿತ ಮಕ್ಕಳು) ಬಿಪಿಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಸರ್ಕಾರಿ ನೌಕರಿ ಮಾಡುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ತಾಯಿ/ಹೆಂಡತಿ/ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಸಹಕಾರಿ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬ್ಬಂಧಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ವೃತ್ತಿಪರ ನೌಕರರು (ವೈದ್ಯರು, ಎಂಜಿನಿಯರ್, ವಕೀಲರು, ಇತರರು) ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ನೋಂದಾಯಿತ ಗುತ್ತಿಗೆದಾರರು, ಎಪಿಎಂಸಿ ಟ್ರೇಡರ್ಗಳು, ಕಮಿಷನ್ ಏಜಂಟರು, ಬೀಜ ಮತ ಗೊಬ್ಬರ ಡೀಲರ್ಗಳು ಇತ್ಯಾದಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರ (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀ ಹೊಂದಲು ಅನರ್ಹರು.
* ಅನುದಾನಿತ ಶಾಲಾ ಕಾಲೇಜುಗಳ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಸರ್ಕಾರಿ ಸ್ವಾಮ್ಯದ ಉದ್ಯಮಗಳು/ ಮಂಡಳಿಗಳು /ನಿಗಮಗಳ ಖಾಯಂ ನೌಕರರು, ಸ್ವಾಯ ಸಂಸ್ಥೆ/ ಮಂಡಳಿಯ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಹೀಗೆ ಇಂತಹವರೆಲ್ಲರನ್ನು ಬಿ.ಪಿ.ಎಲ್/ಅಂತ್ಯೋದಯದಿಂದ ಹೊರಗಿಡಲಾಗುತ್ತದೆ ಎಂದು ತಿಳಿಸಲಾಗಿದೆ.
Credit: Oneindia



Click it and Unblock the Notifications
