Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
Karnataka-Ration Card: ರೇಷನ್ ಕಾರ್ಡ್ ಬಳಕೆದಾರರಿಗೆ ಬಂಪರ್! ಇನ್ಮೇಲೆ ಮನೆ ಬಾಗಿಲಿಗೆ ಬರಲಿದೆ ಅಕ್ಕಿ
ಬಡವರ ಪಾಲಿಗೆ ಸರ್ಕಾರ ತಂದ ಯೋಜನೆಗಳಲ್ಲಿ ಅನ್ನಭಾಗ್ಯ (Anna B ಕೂಡಾ ಒಂದು. ಕಡಿಮೆ ದರದಲ್ಲಿ ಅಕ್ಕಿ, ಇನ್ನಿತರ ಸೌಲಭ್ಯಗಳನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದ್ದು, ಅದಕ್ಕಾಗಿ ಬಿಪಿಎಲ್ ಕಾರ್ಡ್ (BPL Card) ಅನ್ನೂ ಜಾರಿಗೆ ತಂದಿದೆ. ಇದೀಗ ಸರ್ಕಾರ ಬಡವರ ಪಾಲಿಗೆ ಅದೃಷ್ಟದಂತೆ, ಹಿರಿಯರ ಪಾಲಿಗೆ ದೇವರಂತೆ ಬಂದು ಮತ್ತೊಂದು ಯೋಜನೆಯನ್ನು ಜಾರಿಗೆ ತಂದಿದೆ. ಅದೇ "ಅನ್ನ ಸುವಿಧಾ ಯೋಜನೆ" (Anna Suvidha Scheme). ರೇಷನ್ ಅಂಗಡಿಯಲ್ಲಿ ಪ್ರಸ್ತುತ ದೊಡ್ಡ ಸಮಸ್ಯೆಯೆಂದರೆ, ಸರತಿ ಸಾಲು, ಮತ್ತೊಂದು ಸರ್ವರ್ ಸಮಸ್ಯೆ. ಇದರಿಂದ ಹೆಚ್ಚು ಸಮಸ್ಯೆಗೀಡಾಗೋದೆ ಹಿರಿಯ ನಾಗರಿಕರು. ಆದ್ರೆ ಇದೀಗ ಹಿರಿಯ ನಾಗರಿಕರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ನೋಡಿ.

ಹೌದು, 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಅನುಕೂಲಕ್ಕೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಆ ಪ್ರಕಾರ ಇನ್ಮೇಲೆ ಉಚಿತವಾಗಿ ಮನೆ ಮನೆಗೆ ಪಡಿತರ ಆಹಾರ ಪದಾರ್ಥಗಳನ್ನು ಪೂರೈಕೆಯಾಗಲಿದೆ. ಈ ಯೋಜನೆಯನ್ನು "ಅನ್ನ ಸುವಿಧಾ" ಯೋಜನೆ ಎಂದು ಹೆಸರಿಸಲಾಗಿದೆ.
ಏನಿದು ಅನ್ನ ಸುವಿಧಾ ಯೋಜನೆ?
ಹಿರಿಯ ನಾಗರಿಕರ ಅನುಕೂಲಕ್ಕಾಗಿ ಸರ್ಕಾರ ಅನ್ನಭಾಗ್ಯ ಯೋಜನೆಯ ಉಪಕ್ರಮವಾಗಿ ಅನ್ನ ಸುವಿಧಾ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಪ್ರಸ್ತುತ ಅದೆಷ್ಟೋ ಹಿರಿಯ ನಾಗರಿಕರು ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿರುತ್ತಾರೆ. ಆದರೆ ಕೆಲವರಿಗೆ ಆರೋಗ್ಯದ ಸಮಸ್ಯೆಯಿಂದಲೂ, ಇನ್ನಿತರ ಸಮಸ್ಯೆಗಳಿಂದಲೋ ಅನ್ನಭಾಗ್ಯ ಯೋಜನೆಯಡಿ ಸಬ್ಸಿಡಿ ದರದಲ್ಲಿ ಅಕ್ಕಿ, ಇನ್ನಿತರ ಆಹಾರ ಪದಾರ್ಥಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಅದೇ ಕಾರಣದಿಂದ ಇದೀಗ ಅನ್ನ ಸುವಿಧಾ ಯೋಜನೆಯಡಿ ಸರ್ಕಾರ, ಅಶಕ್ತರಾದ ಫಲಾನುಭವಿಗಳ ಮನೆ ಬಾಗಿಲಿಗೆ ಈ ಅನ್ನಭಾಗ್ಯ ಸೌಲಭ್ಯವನ್ನು ಒದಗಿಸಲು ಮುಂದಾಗಿದೆ.
75 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಕುಟುಂಬಗಳಿಗೆ ಸ್ಥಳೀಯ ನ್ಯಾಯಬೆಲೆ ಅಂಗಡಿಯಬರು ಪಡಿತರ ಸೌಲಭ್ಯವನ್ನು ಮನೆ ಬಾಗಿಲಿಗೆ ತಂದು ಕೊಡುತ್ತಾರೆ. ಇದರಿಂದ ಹಿರಿಯ ನಾಗರಿಕರು ಹೋಗಿ ನ್ಯಾಯಬೆಲೆ ಅಂಗಡಿ ಮುಂದೆ ಗಂಟೆಗಟ್ಟಲೆ ನಿಲ್ಲುವುದು ತಪ್ಪಲಿದೆ.
2025ರ ಮೇ ತಿಂಗಳಲ್ಲಿ ಜಾರಿಗೆ ಬಂದ ಈ ಸೇವೆ ಸದ್ಯ ಜಿಲ್ಲೆ ಜಿಲ್ಲೆಗಳಲ್ಲಿ ಅನುಷ್ಠಾನಕ್ಕೆ ಮುಂದಾಗಿದೆ. ಅಲ್ಲದೇ ಮನೆ ಬಾಗಿಲಿಗೆ ಸೇವೆ ನೀಡುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ, ಪ್ರತೀ ಕುಟುಂಬಕ್ಕೆ ಸರ್ಕಾರವು 50 ರೂ. ಪಾವತಿ ಮಾಡುತ್ತದೆ. ಅಲ್ಲದೇ ಈ ಯೋಜನೆಯ ಫಲಾನುಭವಿಗಳು ಆಗಬೇಕೆಂದರೆ, ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಮಂಡ್ಯ ಜಿಲ್ಲೆಯಲ್ಲಿ ಆರಂಭ
ಇದೀಗ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರದ ಅನ್ನ ಸುವಿಧಾ ಯೋಜನೆಯಡಿ 75 ವರ್ಷಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿ ಹೊಂದಿರುವ ಒಂಟಿ ಸದಸ್ಯರ ಕುಟುಂಬಗಳಿಗೆ ಶೀಘ್ರದಲ್ಲೇ ಮನೆ ಬಾಗಿಲಿಗೆ ಪಡಿತರ ಆಹಾರ ಪದಾರ್ಥಗಳನ್ನು ನೀಡಲು ಮುಂದಾಗಲಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ತಿಳಿಸಿದ್ದಾರೆ.
Credit: Goodreturns



Click it and Unblock the Notifications
