Latest Updates
-
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು!
Karnataka-Ration Card: ಲಕ್ಷ ಲಕ್ಷ ಬಿಪಿಎಲ್ ಕಾರ್ಡ್ ರದ್ದು! ಸರ್ಕಾರದ ಬೊಕ್ಕಸಕ್ಕೆ ಕೋಟಿ ಆದಾಯ
ಕರ್ನಾಟಕದಲ್ಲಿ ರೇಷನ್ ಕಾರ್ಡ್ (Ration Card-Karnataka) ಮೂಲಕ ಸರ್ಕಾರಿ ಸಬ್ಸಿಡಿ ಆಹಾರ ಧಾನ್ಯಗಳು, ಅಕ್ಕಿ, ಎಣ್ಣೆ, ಹೀಗೆ ಅಗತ್ಯ ಸಾಮಾನುಗಳನ್ನು ಕಡಿಮೆ ಬೆಲೆಗೆ ಪಡೆಯುವಂತೆ ಅನುಕೂಲವಾಗುವ ಅಗತ್ಯ ದಾಖಲೆಯಾಗಿಬಿಟ್ಟಿದೆ. ಇನ್ನು ಈ ದಾಖಲೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ವಹಿಸುತ್ತದೆ. ಇನ್ನು ರೇಷನ್ ಕಾರ್ಡ್ ಸದ್ಯ ಅಗತ್ಯ ದಾಖಲೆಯಾಗಿಯೂ ಗುರುತಿಸಿಕೊಂಡಿದೆ. ಇನ್ನು ಈ ದಾಖೆಲ ಅನೇಕ ಸರ್ಕಾರಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಅನ್ನಭಾಗ್ಯ) ಮಾನ್ಯ ದಾಖಲೆಯಾಗಿದೆ. ಸಾಮಾನ್ಯವಾಗಿ ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ (BPL Card) ನೀಡಲಾಗುತ್ತದೆ. ಆದ್ರೆ ಇತ್ತೀಚೆಗೆ ಈ ಬಿಪಿಎಲ್ ಕಾರ್ಡ್ಗಳು ದುರುಪಯೋಗವಾಗುತ್ತಿದೆ ಎಂಬ ಆರೋಪ ಕೇಳುತ್ತಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ರಾಜ್ಯ ಸರಕಾರ ಕೂಡಾ ತನ್ನ ಆಪರೇಷನ್ ಶುರು ಮಾಡಿದೆ.

ಕರ್ನಾಟಕ ಸರ್ಕಾರವು ಬಿಪಿಎಲ್ ರೇಷನ್ ಕಾರ್ಡ್ ವಿಚಾರದಲ್ಲಿ ಸದ್ಯ ಮಹತ್ವದ ಕ್ರಮ ಕೈಗೊಳ್ಳುತ್ತಿದೆ. ಈ ನಿರ್ಧಾರದಿಂದ ರಾಜ್ಯ ಸರ್ಕಾರ ಕೂಡಾ ಕೋಟ್ಯಾಂತರ ಹಣ ಉಳಿತಾಯ ಮಾಡುತ್ತಿದೆ. ಬಿಪಿಎಲ್ ಕಾರ್ಡ್ ಸಂಬಂಧಿಸಿ ಹಲವಾರು ನಿಯಮಗಳಿವೆ. ಆದರೆ ಈ ನಿಯಮಗಳನ್ನು ಉಲ್ಲಂಘಿಸುವರ ವಿರುದ್ಧ ಈಗಾಗಲೇ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಈ ಪರಿಶೀಲನೆಯಿಂದಾಗಿ ರಾಜ್ಯದಲ್ಲಿ ಇದುವರೆಗೆ ಲಕ್ಷಗಟ್ಟಲೆ ಬಿಪಿಎಲ್ ಕಾರ್ಡ್ಗಳು ರದ್ದಾಗಿದೆ ಎಂದು ವರದಿಯಾಗಿದೆ.
ಲಕ್ಷ ಲಕ್ಷ ಬಿಪಿಎಲ್ ಕಾರ್ಡ್ ರದ್ದು!
ಹೌದು, ಪ್ರಸ್ತುತ ಕರ್ನಾಟಕದಲ್ಲಿ 4.50 ಲಕ್ಷಕ್ಕೂ ಅಧಿಕ ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಆದ್ರೆ ಇದು ಸಂಪೂರ್ಣ ರದ್ದು ಪಡಿಸುವ ಪ್ರಕ್ರಿಯೆ ಅಲ್ಲ. ಬದಲಿಗೆ ಅನರ್ಹ ಕಾರ್ಡ್ಗಳನ್ನು ಗುರುತಿಸಿ ಎಪಿಎಲ್ ಕಾರ್ಡ್ಗೆ ವರ್ಗಾಯಿಸುವುದಾಗಿದೆ. ಇನ್ನು ಕೇವಲ ಬೆಂಗಳೂರಿನಲ್ಲೇ 1 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ಗಳನ್ನು ಬಿಪಿಎಲ್ಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.
ಸರ್ಕಾರದ ಬೊಕ್ಕಸಕ್ಕೆ ಲಾಭ!
ಈಗಾಗಲೇ ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ಸರ್ಕಾರ ನಷ್ಟದ ಹಾದಿ ಹಿಡಿದಿದೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದೆ. ಆದ್ದರಿಂದ ಸರ್ಕಾರದ ಖಜಾನೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಸರ್ಕಸ್ ನಡೆಸುತ್ತಲೇ ಇದೆ. ಅದರಲ್ಲೊಂದಿ ರೇಷನ್ ಕಾರ್ಡ್ ಪರಿಷ್ಕರಣೆ. ಇದೀಗ ಲಕ್ಷಗಟ್ಟಲೆ ಬಿಪಿಎಲ್ ಕಾರ್ಡ್ ರದ್ದಾಗಿರುವುದರಿಂದ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ, ಹೀಗೆ ಹಲವು ಯೋಜನೆಗಳಿಂದ ಕೋಟ್ಯಾಂತರ ಹಣ ಉಳಿತಾಯಬಾಗಿದೆ.
ಅಂದರೆ ಸರ್ಕಾರ ತೆಗೆದುಕೊಂಡ ಈ ಒಂದು ಕ್ರಮದಿಂದ ಪ್ರತೀ ತಿಂಗಳು 110 ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣ ಸರ್ಕಾರದ ಬೊಕ್ಕಸದಲ್ಲಿ ಉಳಿತಾಯವಾಗಲಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ ಸದ್ಯ 4.50 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಈ ಪರಿಣಾಮ ಇಷ್ಟೂ ಮಂದಿಗೂ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ಸಿಗುವುದಿಲ್ಲ. ಆದ್ದರಿಂದ ಸರ್ಕಾರಕ್ಕೂ ಭಾರೀ ಉಳಿತಾಯವಾಗಲಿದೆ.
ಯಾವ ಕಾರ್ಡ್ಗಳು ರದ್ದು?
- ಆದಾಯ ತೆರಿಗೆ ಪಾವತಿಸುವವರು
- ಸರ್ಕಾರಿ ನೌಕರರು
- ವಾರ್ಷಿಕ ಆದಾಯ 1.2 ಲಕ್ಷಕ್ಕಿಂತ ಹೆಚ್ಚು ಇರುವ ಕುಟುಂಬ
- ನಾಲ್ಕು ಚಕ್ರದ ವಾಹನ ಹೊಂದಿರುವವರು
Credit: Goodreturns



Click it and Unblock the Notifications