Latest Updates
-
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ
Karnataka Weather: ಡಿ.31ರಂದು ಈ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ
ರಾಜ್ಯದ ಉತ್ತರ ಒಳನಾಡಿನಲ್ಲಿ ಸದ್ಯ ಶೀತಲ ಅಲೆಯ ಪರಿಸ್ಥಿತಿ ಮುಂದುವರಿದಿದ್ದು, ಚಳಿ ತೀವ್ರಗೊಂಡಿದೆ. ಮುಂದಿನ ಐದು ದಿನಗಳವರೆಗೆ ಇದೇ ಪರಿಸ್ಥಿತಿ ಬಹುತೇಕ ಜಿಲ್ಲೆಗಳಲ್ಲಿ ಇರಲಿದೆ. ಡಿಸೆಂಬರ್ 31ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ವರ್ಷದ ಕೊನೆಯ ಕೊನೆಯ ದಿನದಂದು ರಾಜ್ಯದ ಜನ ಮಳೆ ಕಾಣಲಿದ್ದಾರೆ. ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯ ಸಂಭವ ಇದೆ ಎಂಬ ವಿವರ ಇಲ್ಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಡಿ.31ರಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಕೊಡಗು ಮತ್ತು ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ವಾತಾವರಣದೊಂದಿಗೆ ಲಘು ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕೇರಳ ಕರಾವಳಿಗೆ ಹೊಂದಿಕೊಂಡಿರುವ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟಕ್ಕಿಂತ 1.5 ಕಿ.ಮೀ. ವರೆಗೆ ವಿಸ್ತರಿಸಿರುವ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಕೆಳ ಉಷ್ಣವಲಯದ ಮಟ್ಟದಲ್ಲಿ ರಾಜ್ಯದಾದ್ಯಂತ ಪೂರ್ವ ದಿಕ್ಕಿನ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹೇಳಿದೆ.
ಬೀದರ್ ಭಾಗದಲ್ಲಿ ಶೀತ ಗಾಳಿ
ಉತ್ತರ ಒಳನಾಡಿನಲ್ಲಿ ಶೀತಲ ಅಲೆಯ ಪರಿಸ್ಥಿತಿ ಕಂಡುಬಂದಿದೆ. ಬೀದರ್ನಲ್ಲಿ ಇದರ ಪರಿಣಾಮ ತೀವ್ರಗೊಂಡಿದೆ. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಂಜು ಕವಿಯುವ ವಾತಾವರಣ ಮುಂದುವರಿದಿದೆ. ರಾಜ್ಯದ ಬಯಲು ಪ್ರದೇಶದ ಪೈಕಿ ಬೀದರ್ನಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರ್ನಾಟಕದ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5-7 ಡಿಗ್ರಿ ಸೆಲ್ಸಿಯಸ್ವರೆಗೆ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಬೀದರ್ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದಾದ್ಯಂತ 5 ದಿನಗಳವರೆಗೆ ಕನಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿಯುವ ಸಾಧ್ಯತೆ ಹೆಚ್ಚು. ಈ ವೇಳೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 15 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಎಲ್ಲೆಲ್ಲಿ ಕನಿಷ್ಠ ತಾಪಮಾನ?
ಬೆಳಗಾವಿ ವಿಮಾನ ನಿಲ್ದಾಣ, ಬೀದರ್, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ರಾಯಚೂರು ಮತ್ತು ಉತ್ತರ ಒಳನಾಡಿನ ಕರ್ನಾಟಕದ ದಾವಣಗೆರೆ, ಹಾಸನ, ಮೈಸೂರು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಚಿಂತಾಮಣಿಗಳಲ್ಲಿ ಕನಿಷ್ಠ ತಾಪಮಾನವು 8- 12 ಡಿಗ್ರಿ ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಕರ್ನಾಟಕದ ಕಲಬುರಗಿ ಮತ್ತು ಕೊಪ್ಪಳದಲ್ಲಿ ಮತ್ತು ಕೆಂಪೇಗೌಡ ಏರ್ಪೋರ್ಟ್, ಬೆಂಗಳೂರು ನಗರ, ಚಿತ್ರದುರ್ಗ ಮತ್ತು ಮಂಡ್ಯದಲ್ಲಿ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು.
ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ಭಾಗಗಳಲ್ಲಿ 18 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೀದರ್ನಲ್ಲಿ ಮತ್ತು ದಕ್ಷಿಣ ಒಳನಾಡಿನ ಹಾಸನದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು. ಉತ್ತರ ಒಳನಾಡಿನ ರಾಯಚೂರು, ಗದಗ ಮತ್ತು ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಚಿಂತಾಮಣಿ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿತ್ತು. ಕರಾವಳಿ ಕರ್ನಾಟಕದ ಹೊನ್ನಾವರ, ಬೆಳಗಾವಿ ವಿಮಾನ ನಿಲ್ದಾಣ, ಉತ್ತರ ಒಳನಾಡಿನ ಧಾರವಾಡ ಮತ್ತು ಹಾವೇರಿ, ದಕ್ಷಿಣ ಒಳನಾಡಿನ ದಾವಣಗೆರೆ ಮತ್ತು ಮಂಡ್ಯದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿತ್ತು. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯವಾಗಿತ್ತು. ಕಳೆದ 24 ಗಂಟೆಗಳಲ್ಲಿ, ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ.
Credit: Oneindia



Click it and Unblock the Notifications
