Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
Bengaluru-Mantralaya Tour: ಬೆಂಗಳೂರಿನಿಂದ ಮಂತ್ರಾಲಯ ಹೋಗೋರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಟೂರ್ ಪ್ಯಾಕೇಜ್
ದೇಶದ ಮೂಲೆ ಮೂಲೆಗಳಿಂದ ಅದೆಷ್ಟೋ ಭಕ್ತರು ಮಂತ್ರಾಲಯ, ತಿರುಪತಿ (Mantralaya-Tirupati) ಹೀಗೆ ತೀರ್ಥಕ್ಷೇತ್ರಗಳಿಗೆ ಪ್ರಯಾಣ ಬೆಳೆಸುತ್ತಾರೆ. ಅದರಲ್ಲೂ ಮಂತ್ರಾಲಯ ಕಡೆಗೆ ಬಹಳಷ್ಟು ಮಂದಿ ತಿಂಗಳಿಗೊಮ್ಮೆಯಾದ್ರೂ ಮಂತ್ರಾಲಕ್ಕೆ ಹೋಗುತ್ತಾರೆ. ಇದೀಗ ಮಂತ್ರಾಲಯಕ್ಕೆ ಹೋಗೋರಿಗೆ ಗುಡ್ ನ್ಯೂಸ್ ಒಂದಿದೆ. ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗೋರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಬಿಡುಗಡೆ ಮಾಡಿದೆ. ರಾಘವೇಂದ್ರ ಸ್ವಾಮಿ ಕರ್ನಾಟಕದ ಜನರ ಆರಾಧ್ಯ ದೇವರು. ಈ ದೇವಾಲಯ ಆಂಧ್ರಪ್ರದೇಶದ ಗಡಿಭಾಗದಲ್ಲಿದೆ.

ಅದರಲ್ಲೂ ಕರ್ನಾಟಕದಿಂದ ಅತೀ ಹೆಚ್ಚು ಭಕ್ತರು ರಾಘವೇಂದ್ರಸ್ವಾಮಿ ದರ್ಶನ ಪಡೆಯಲು ಮಂತ್ರಾಲಯ ಹೋಗುತ್ತಾರೆ. ಕರ್ನಾಟಕ ಮಾತ್ರವಲ್ಲದೇ ರಾಯರ ದರ್ಶನಕ್ಕೆ ಲಕ್ಷಾಂತರ ಮಂದಿ ಬರುತ್ತಾರೆ. ಅದೇ ಕಾರಣದಿಂದ ಇದೀಗ ಕೆಎಸ್ಟಿಡಿಸಿ ವಿಶೇಷ ಪ್ಯಾಕೇಜ್ ಘೋಷಿಸಿದೆ.
ಪ್ಯಾಕೇಜ್ ವಿವರಗಳು:
- ಪ್ಯಾಕೇಜ್ ಹೆಸರು: ಮಂತ್ರಾಲಯ ಟೂರ್ ಪ್ಯಾಕೇಜ್
- ಪ್ರಯಾಣದ ಅವಧಿ: 2 ದಿನಗಳು (1 ರಾತ್ರಿ ಪ್ರಯಾಣ ಸೇರಿದಂತೆ)
- ಪ್ರಾರಂಭ ಸ್ಥಳ: ಕೆಎಸ್ಟಿಡಿಸಿ ಬುಕಿಂಗ್ ಕೌಂಟರ್, ಬಿಎಂಟಿಸಿ ಬಸ್ ಸ್ಟ್ಯಾಂಡ್, ಯಶವಂತಪುರ, ಬೆಂಗಳೂರು
- ಪ್ರಯಾಣ ಸಮಯ: ರಾತ್ರಿ 8 ಗಂಟೆಗೆ ಆರಂಭ (ಮರುದಿನ ಬೆಳಿಗ್ಗೆ ಮಂತ್ರಾಲಯ ತಲುಪಿದೆ)
- ಪ್ರತೀ ಬುಧವಾರ ಮತ್ತು ಶುಕ್ರವಾರ ಈ ಪ್ಯಾಕೇಜ್ ಇರುತ್ತದೆ.
ಪ್ರಯಾಣದ ವಿವರ:
ರಾಘವೇಂದ್ರ ಸ್ವಾಮಿ ದರ್ಶನ ಪಡೆಯೋರಿಗೆ, ಅದರಲ್ಲೂ ಬೆಂಗಳೂರಿನಿಂದ ಮಂತ್ರಾಲಯ ಹೋಗುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಸ್ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ ಮಂತ್ರಾಲಯಕ್ಕೆ ತಲುಪಲಿದೆ. ಮಂತ್ರಾಲಯ ಜೊತೆಗೆ ಪಂಚಮುಖಿ ಆಂಜನೇಯ ದೇವಸ್ಥಾನ ಕೂಡಾ ದರ್ಶನ ಮಾಡುವ ಅವಕಾಶವಿದೆ. ಸಾಮಾನ್ಯ ಜನರಿಗೂ ಅನುಕೂಲವಾಗುವಂತೆ ಈ ದರ್ಶನ ಪ್ಯಾಕೇಜ್ ಅನ್ನು ಘೋಷಣೆ ಮಾಡಲಿದೆ.
ಪ್ಯಾಕೇಜ್ ದರ ಹೇಗಿದೆ?
ಈ ಪ್ಯಾಕೇಜ್ನಲ್ಲಿ ಪ್ರಯಾಣಿಸುವ ಭಕ್ತರು, ಎಲ್ಲಾ ಸೌಲಭ್ಯಗಳನ್ನು ಪಡೆಯಬಹುದು. ಆ ಮೂಲಕ 2,780 ರೂ. ಆಗಿರುತ್ತದೆ. ಜೊತೆಗೆ ಸೌಲಭ್ಯ ಕೂಡಾ ಇದೆ. ಬುಕ್ ಮಾಡಿ, 48 ಗಂಟೆಗಳ ಮೊದಲು ಟಿಕೆಟ್ ರದ್ದು ಮಾಡಿದ್ರೆ, 10% ಕಡಿತಗೊಳಿಸಲಾಗುತ್ತದೆ. 24 ಗಂಟೆಗಳು ಮೊದಲು ಟಿಕೆಟ್ ರದ್ದು ಮಾಡಿದ್ರೆ 25% ಕಡಿತಗೊಳಿಸಲಾಗುತ್ತದೆ. 24 ಗಂಟೆಗಳ ಒಳಗೆ ರದ್ದು ಮಾಡಿದ್ರೆ ಯಾವುದೇ ಮರುಪಾವತಿ ಇರುವುದಿಲ್ಲ. ಇನ್ನು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವೆಬ್ಸೈಟ್ ಓಪನ್ ಮಾಡಿ ಮಾಹಿತಿ ಪಡೆಯಬಹುದು.
ಇನ್ನು ಮರುದಿನ ಬೆಳಿಗ್ಗೆ 4:30 ಗಂಟೆಯಿಂದ 6ರವರೆಗೆ ಪ್ರಯಾನಿಕರಿಗೆ ರೆಡಿಯಾಗಲು ಅವಕಾಶ ಇರುತ್ತದೆ. ನಂತರ 6:30 ರಿಂದ 10 ಗಂಟೆ ಹೊತ್ತಿಗೆ ಮಠದಲ್ಲಿ ರಾಯರ ದರ್ಶನ ಪಡೆಯಲು ಅವಕಾಶ ನೀಡಲಾಗುತ್ತದೆ. ನಂತರ ಬೆಳಿಗ್ಗೆ ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಪಂಚಮುಖಿ ಆಂಜನೇಯ ದೇವರ ದರ್ಶನಕ್ಕಾಗಿ ಬಸ್ ಅಲ್ಲಿಗೆ ಹೋಗುತ್ತದೆ. ಆ ನಂತರ ಮಧ್ಯಾಹ್ನದ ವೇಳೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ಅದನ್ನು ಮುಗಿಸಿಕೊಂಡು ಬಸ್ ಹೊರಟು ಅದೇ ದಿನ ರಾತ್ರಿ 9 ಗಂಟೆ ಸುಮಾರಿಗೆ ಮರಳಿ ಬೆಂಗಳೂರಿಗೆ ಬಂದು ಕೆಎಸ್ಟಿಡಿಸಿ ಬಸ್ ಬರಲಿದೆ.
Credit: Goodreturns



Click it and Unblock the Notifications
