Latest Updates
-
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು!
Ration Card-Karnataka: ಈ ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಇನ್ಮೇಲೆ ಸಿಗಲ್ಲ ಫ್ರೀ ಅಕ್ಕಿ
ಅನ್ನಭಾಗ್ಯ ಯೋಜನೆಯಡಿ (Annabhagya Yojana) ಸರ್ಕಾರ ಬಡವರಿಗೆ ಸಬ್ಸಿಡಿ ದರದಲ್ಲಿ ಅಕ್ಕಿ, ಧಾನ್ಯಗಳನ್ನು ನೀಡುತ್ತಿತ್ತು. ಅಲ್ಲದೇ ಈ ಯೋಜನೆಯ ಫಲಾನುಭವಿಗಳಾಗಬೇಕೆಂದರೆ ಬಿಪಿಎಲ್, ಅಂತ್ಯೋದಯ ಕಾರ್ಡ್ಗಳು ಇರಲೇಬೇಕು. ಆದರೆ ಇತ್ತೀಚೆಗೆ ಬಿಪಿಎಲ್ ಕಾರ್ಡ್ (BPL Card), ದುರುಪಯೋಗವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಈ ಆರೋಪದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಇದೀಗ ಮಹತ್ವದ ಕ್ರಮ ಕೈಗೊಂಡಿದೆ.

ಬಿಪಿಎಲ್ ಕಾರ್ಡ್ ರದ್ದು
ಹೌದು, ಕರ್ನಾಟಕದಲ್ಲಿ ರೇಷನ್ ಕಾರ್ಡ್ ರದ್ದು ಪ್ರಕ್ರಿಯೆ ಇತ್ತೀಚೆಗೆ ಭಾರೀ ಚರ್ಚೆಗೆ ಒಳಗಾಗಿದೆ. ಸರ್ಕಾರು ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ತೆಗೆದುಹಾಕುವ ನಿರ್ಧಾರ ಕೈಗೊಂಡಿದ್ದು, ಈ ಹಿನ್ನೆಲೆ ಲಕ್ಷಗಟ್ಟಲೆ ಬಿಪಿಎಲ್ ಕಾರ್ಡ್ಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಇದರ ಜೊತೆಗೆ ಕೆಲವು ಬಡವರ ಕಾರ್ಡ್ಗಳೂ ರದ್ದಾಗಿದೆ ಎಂದು ಆರೋಪಗಳಿವೆ.
ಈ ಜಿಲ್ಲೆಯಲ್ಲಿ ಹೆಚ್ಚು ಬಿಪಿಎಲ್ ಕಾರ್ಡ್ ರದ್ದು!
ಬೆಂಗಳೂರನ್ನು ಹೊರತುಪಡಿಸಿ, ರಾಜ್ಯದಲ್ಲೇ ಅತಿ ಹೆಚ್ಚು ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕಾರ್ಡ್ಗಳನ್ನು ರದ್ದುಗೊಳಿಸಿದ ಜಿಲ್ಲೆ ಎಂಬ ಸ್ಥಾನಕ್ಕೆ ಮೈಸೂರು ಗುರುತಿಸಿಕೊಂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ತೆರದಾಳ ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ವಿಧಾನಸಭಾ ಅಧಿವೇಶನದಲ್ಲಿ ಉತ್ತರಿಸುವ ಸಂದರ್ಭದಲ್ಲಿ, ಕಳೆದ ಒಂದು ವರ್ಷದಲ್ಲಿ ಮೈಸೂರು ಜಿಲ್ಲೆಯಲ್ಲಿ ಒಟ್ಟು 23,359 ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ (ಬಡತನ ರೇಖೆಗಿಂತ ಮೇಲಿರುವ) ಕಾರ್ಡ್ಗಳಾಗಿ ಪರಿವರ್ತಿಸಲಾಗಿದೆ ಎಂದು ಹೇಳಿದರು.
ವಾರ್ಷಿಕ ಆದಾಯ ಕಡಿಮೆ ಇದ್ದರೂ, ಅನೇಕ ಕುಟುಂಬಗಳು ಜಿಎಸ್ಟಿ ಸಂಖ್ಯೆ ಪಡೆದ ಕಾರಣ, ಅಥವಾ ವಿವಿಧ ಆರ್ಥಿಕ ಚಟುವಟಿಕೆಗಳಿಗಾಗಿ ಕಂಪನಿ ನಿರ್ದೇಶಕರಾದ ಹಿನ್ನೆಲೆಯಲ್ಲಿ ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಕಳೆದುಕೊಂಡಿವೆ. ಆದರೆ, ಫಲಾನುಭವಿಗಳು ನಿಜವಾಗಿಯೂ ಅರ್ಹರಾಗಿದ್ದರೆ, ಅವರ ಬಿಪಿಎಲ್ ಕಾರ್ಡ್ಗಳನ್ನು ಮತ್ತೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ರಾಜ್ಯಾದ್ಯಂತ, ಫಲಾನುಭವಿಗಳ ಅರ್ಹತೆಯನ್ನು ನಿರ್ಧರಿಸುವ 14 ಮಾನದಂಡಗಳ ಆಧಾರದ ಮೇಲೆ ಒಟ್ಟು 4,05,719 ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸಲಾಗಿದೆ ಎಂದು ವರದಿಯಾಗಿದೆ.
ಮಂತ್ರಿಗಳು ಹಂಚಿಕೊಂಡ ದತ್ತಾಂಶದ ಪ್ರಕಾರ, ಮೈಸೂರು ಜಿಲ್ಲೆಯಲ್ಲಿ 1,309 ಅಂತ್ಯೋದಯ ಅನ್ನ ಯೋಜನೆ (AAY) ಪಡಿತರ ಕಾರ್ಡ್ಗಳು ಮತ್ತು 22,050 ಆದ್ಯತಾ ಕುಟುಂಬ (PHH) ಕಾರ್ಡ್ಗಳನ್ನು ಎಪಿಎಲ್ (NPHH) ಪಡಿತರ ಕಾರ್ಡ್ಗಳಾಗಿ ಪರಿವರ್ತಿಸಲಾಗಿದೆ. ಈ ಬದಲಾವಣೆಗೊಂಡ ಕಾರ್ಡ್ಗಳಲ್ಲಿ ಅತಿಹೆಚ್ಚು, ಅಂದರೆ 11,955 ಕಾರ್ಡ್ಗಳು ಮೈಸೂರು ತಾಲ್ಲೂಕಿನಲ್ಲಿವೆ ಎಂದು ಹೇಳಲಾಗಿದೆ.
ಕುಟುಂಬದ ವಾರ್ಷಿಕ ಆದಾಯ, ವಾಹನ ಮಾಲೀಕತ್ವ, ಪಡಿತರ ಕಾರ್ಡ್ನ ಸ್ಥಿತಿ, ₹25 ಲಕ್ಷಕ್ಕೂ ಹೆಚ್ಚು ಜಿಎಸ್ಟಿ ವಹಿವಾಟು ಮುಂತಾದ 14 ಮಾನದಂಡಗಳನ್ನು ಪರಿಗಣಿಸಿ, ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
"ಬಿಪಿಎಲ್ ಕಾರ್ಡ್ ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಪ್ರಮುಖ ಸರ್ಕಾರಿ ದಾಖಲೆಯಾಗಿದೆ. ಹೀಗಾಗಿ, ಈ ಕಾರ್ಡ್ಗಳ ರದ್ದತಿ ಸರ್ಕಾರಕ್ಕೆ ಸಂಪತ್ತಿನ ಮೂಲವಾಗಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Credit: Goodreturns



Click it and Unblock the Notifications