Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
Gruhalakshmi Scheme: ರಾಜ್ಯದಲ್ಲಿ ಗೃಹಲಕ್ಷ್ಮಿ ₹2,000 ಹಣ ಜಮಾ ಬಗ್ಗೆ ಮಹತ್ವದ ಮಾಹಿತಿ
Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಇದರಲ್ಲಿ ಗೃಹಲಕ್ಷಿ ಯೋಜನೆಯೂ ಒಂದಾಗಿದೆ. ಇದರಡಿಯಲ್ಲಿ ಪ್ರತಿ ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣವನ್ನು ಜಮೆ ಮಾಡಲಾಗುತ್ತದೆ. ಇದೀಗ ಹಣ ಬಾಕಿ ಉಳಿಸಿಕೊಳ್ಳಲಾಗಿದೆ ಎನ್ನುವ ಆರೋಪಗಳ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ಸಿಎಂ ಆರ್ಥಿಕ ಸಲಹೆಗಾರ ನೀಡಿದ್ದಾರೆ. ಹಾಗಾದ್ರೆ ಏನೆಲ್ಲಾ ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಹಣ ತಿಂಗಳಿಗೊಮ್ಮೆ ಬಿಡುಗಡೆ ಆಗಬೇಕಿದೆ. ಆದರೂ ಕೆಲವೊಮ್ಮೆ ತಾಂತ್ರಿಕ ಕಾರಣಗಳ ಜಕಾರಣ ಒಂದೇ ಬಾರಿ ಎರಡು ಅಥವಾ ಮೂರು ತಿಂಗಳ ಹಣವೂ ಜಮಾ ಆಗುತ್ತಿದೆ. ಈ ಕುರಿತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 3 ತಿಂಗಳಿಗೊಮ್ಮೆ ಕಾಂಗ್ರಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊ ಒಂದಾದ 'ಗೃಹಲಕ್ಷ್ಮಿ' ಹಣವನ್ನ ನೀಡುತ್ತೇವೆ. ನಾವು ಆರ್ಥಿಕವಾಗಿ ಗಟ್ಟಿಯಾಗಿದ್ದೇವೆ. ಜಿಎಸ್ಟಿ ಸಂಗ್ರಹದಲ್ಲಿ ಕೇಂದ್ರದವರು ಅರ್ಧ ಹಣ ಕೊಡಬೇಕು, ಅವರು ಕೊಡುವುದು ವಿಳಂಬ ಆಗುತ್ತದೆ. ಆದ್ದರಿಂದ ಹಣ ಹೊಂದಿಸುವುದು ತಡವಾಗುತ್ತದೆ ಅಷ್ಟೇ. 3 ತಿಂಗಳಿಗೊಮ್ಮೆ ಆದರೂ ಗೃಹಲಕ್ಷ್ಮಿ ಹಣವನ್ನೂ ನೀಡುತ್ತೇವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿಯರಿಗೆ ಇದರಿಂದ ಶಾಕ್ ಕೊಟ್ಟಂತಾಗಿದೆ. ಇನ್ನೂ ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, ಯೋಜನೆ ಆರಂಭ ಆದಗಿನಿಂದ ಈ ಯೋಜನೆ ಅಡಿಯಲ್ಲಿ 1.24 ಕೋಟಿ ಮಹಿಳೆಯರಿಗೆ 54,000 ಕೋಟಿ ರೂಪಾಯಿ ಹಣ ಜಮೆ ಮಾಡಲಾಗಿದೆ. ಒಟ್ಟು 23 ಕಂತುಗಳಲ್ಲಿ ನೊಂದಣಿ ಆದ ಪ್ರತಿ ಕುಟುಂಬದ ಯಜಮಾನಿಗೆ ತಲಾ 46,000 ರೂಪಾಯಿ ನೀಡಲಾಗಿದೆ ಎಂದು ಹೇಳಿದರು.
ಈ ಹಿಂದೆ ಇಲಾಖೆಯಿಂದಲೇ ಫಲಾನುಭವಿಗಳ ಖಾತೆಗೆ 2,000 ರೂಪಾಯೊ ಹಣ ಜಮೆ ಮಾಡಲಾಗುತ್ತಿತ್ತು. ಸದ್ಯ ತಾಲ್ಲೂಕು ಪಂಚಾಯಿತಿಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ಬದಲಾವಣೆ ಮಾಡಲಾಗಿದೆ. ಆದ್ದರಿಂದ ಕೆಲ ತಿಂಗಳ ಕಂತುಗಳ ಹಣ ವಿಳಂಬ ಆಗಿದೆ ಎಂದು ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ತುಂಬಾ ಬಡ ಕುಟುಂಬಗಳಿಗೆ ಆಧಾರವಾಗಿದೆ. ಅದೆಷ್ಟೋ ಜನ ಇದರಿಂದ ಮನೆಗೆ ಬೇಕಾದ ಅಗತ್ಯ ವಸ್ತುಗಳಿಂದ ಹಿಡಿದು, ವಾಹನ ಖರೀದಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಈ ಹಣದಿಂದ ತಮ್ಮ ಮಕ್ಕಳ ವಿದ್ಯಾಭ್ಯಾಸ, ಕೃಷಿ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಉದಾಹರಣೆಗಳಿವೆ. ಈ ಬಗ್ಗೆ ತುಂಬಾ ಜನ ಫಲಾನುಭವಿಗಳು ಹೇಳಿಕೊಂಡಿದ್ದಾರೆ. ಮತ್ತೊಂದೆಡೆ ಇದೀಗ ಇನ್ನೂ ಕಂತುಗಳು ಬಾಕಿಯಿದ್ದು, ಅವುಗಳನ್ನು ಯಾವಾಗ ಬಿಡುಗಡೆ ಮಾಡುತ್ತಾರೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಹೀಗೆ ಕೊಟ್ಟು ಒಂದೇ ಬಾರಿ ನಿಲ್ಲಿಸುವುದರಿಂದ ತುಂಬಾ ತೊಂದರೆ ಆಗುತ್ತಿದೆ ಅಂತಲೂ ಅಸಮಾಧಾನ ಹೊರಹಾಕುತ್ತಿದ್ದಾರೆ. ಅದರಲ್ಲೂ ವಿಪಕ್ಷಗಳು ಕೂಡ ಈ ಬಗ್ಗೆ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಲಿದ್ದಾರೆ. ಇದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಸ್ಪಷ್ಟನೆ ನೀಡಿ ಜನರ ಗೊಂದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಸಹ ಮಾಡುತ್ತಿದ್ದಾರೆ.
Credit: Oneindia



Click it and Unblock the Notifications
