Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಡಿ.ಕೆ ಶಿವಕುಮಾರ್ ಜೊತೆ ಸಿದ್ದರಾಮಯ್ಯ ರಾಜಿ ಸಂಧಾನ ?, ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ
ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮಧ್ಯಪ್ರವೇಶ ಮಾಡಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಡಿ.ಕೆ ಶಿವಕುಮಾರ್ ಅವರೊಂದಿಗೆ ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದ್ದು, ಇದಕ್ಕೆ ಕನ್ನಡಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದೇನು, ವೈರಲ್ ಆಗುತ್ತಿರುವುದೇನು ಎನ್ನುವ ವಿವರ ಇಲ್ಲಿದೆ.
ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಂದುವರಿದು ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದೂ ಹೇಳಿದ್ದಾರೆ.
ಸಿದ್ದರಾಮಯ್ಯ - ಡಿ.ಕೆ ಶಿವಕುಮಾರ್ ರಾಜಿ ಸಂಧಾನ ?
ಇನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ನಡುವೆ ರಾಜಿ ಸಂಧಾನ ನಡೆಯುವುದಕ್ಕೆ ವೇದಿಕೆ ಕಲ್ಪಿಸಿದಂತಾಗಿದೆ. ಇಷ್ಟು ದಿನ ಆತ್ಮೀಯ ಶಾಸಕರು ಹಾಗೂ ಸಚಿವರೊಂದಿಗೆ ಡಿನ್ನರ್ ಪಾರ್ಟಿ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಅವರನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸ್ಥಿರ ಅಡಳಿತಕ್ಕಾಗಿ 136 ಸ್ಥಾನಗಳನ್ನು ರಾಜ್ಯದ ಜನತೆ ಆಶೀರ್ವಾದ ಕಲ್ಪಿಸಿದೆ. ಆದರೆ ಈ ಬದಲಾವಣೆ ಕ್ರಾಂತಿ, ಅವಿಶ್ವಾಸ, ವಿಸರ್ಜನೆ ಮೊದಲಾದವುಗಳಿಂದ ಅಸ್ಥಿರಗೊಳಿಸುತ್ತದೆ. ಅಧಿಕಾರ ಹಂಚಿಕೆ ಒಳ ಒಪ್ಪಂದ 50:50 ಆಗಿದ್ದರೆ, ನುಡಿದಂತೆ ನಡೆಯಬೇಕು ಎಂದು ನೆಟ್ಟಿಗರು ಹೇಳಿದ್ದಾರೆ.
ಗ್ಯಾರಂಟಿಯ ನಡುವೆಯೂ ಸ್ಥಿರ ಆಡಳಿತ ನಡೆಸುವ ಮೂಲಕ ಸಮರ್ಥ ಆಡಳಿತಗಾರ ಎನ್ನುವುದನ್ನು ಮತ್ತೊಮ್ಮೆ ತೋರಿಸಿ ಕೊಟ್ಟಿದ್ದೀರಿ. ನಿಮ್ಮನ ಮುಖ್ಯಮಂತ್ರಿ ಸ್ಥಾನ ದಿಂದ ಕೆಳಗಿಳಿಸಿದ್ರೆ ಆಡಳಿತ ಯತ್ರ ಸಂಪೂರ್ಣ ಹಳಿ ತಪ್ಪುವುದು ಗ್ಯಾರಂಟಿ. ಗ್ಯಾರಂಟಿ ಯೋಜನೆಯನ್ನು ಸಮರ್ಥವಾಗಿ ಪೂರೈಸಿಕೊಂಡು ಆಡಳಿತ ನಡೆಸುವುದು ಯಾರಿಗೂ ಸುಲಭವಲ್ಲ ಎಂದು ರಾಮದಾಸ್ ಎನ್ನುವವರು ಹೇಳಿದ್ದಾರೆ.
Credit: Oneindia



Click it and Unblock the Notifications
