Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಮಗುವಿಗೆ ಡಯಾಪರ್ ಕಿರಿಕಿರಿಯಾಗದಿರಲಿ

ಆದ್ದರಿಂದ ಮಕ್ಕಳಿಗೆ ಡಯಾಪರ್ ಹಾಕಿದಾಗ ಗುಳ್ಳೆ, ತುರಿಕೆ ಉಂಟಾಗದಿರಲು ಈ ಕೆಳಗಿನ ಸಲಹೆಗಳನ್ನು ಪಾಲಿಸುವುದು ಒಳ್ಳೆಯದು.
* ಮಕ್ಕಳಿಗೆ ಸ್ನಾನ ಮಾಡಿಸಿದ ಬಳಿಕ ಮಗುವಿನ ದೇಹವನ್ನು ಮೃದುವಾದ ಟವಲ್ ನಿಂದ ಮೃದುವಾಗಿ, ಚೆನ್ನಾಗಿ ಒರೆಸಬೇಕು. ತೊಡೆಯ ಸಂದುಗಳಲ್ಲಿ, ಹಿಂಭಾಗದಲ್ಲಿ ನೀರಿನ ಅಂಶ ಉಳಿಯದಂತೆ ಒರೆಸಬೇಕು. ನೀರಿನ ಅಂಶ ಉಳಿದರೆ ಬ್ಯಾಕ್ಟೀರಿಯಾದಿಂದಾಗಿ ಗುಳ್ಳೆಗಳು ಉಂಟಾಗುವುದು.
* ಮಕ್ಕಳಿಗೆ ನೆಗಡಿ, ಕೆಮ್ಮು, ಭೇದಿ ಮೂದಲಾದ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಈ ಕಾಯಿಲೆಗಳಿ ಮದ್ದು ಕೊಟ್ಟಾಗ ಕೆಲವೊಮ್ಮೆ ಶಿಲೀಂಧ್ರದ ಸೋಂಕು ಉಂಟಾಗಿ ಡಯಾಪರ್ ಗುಳ್ಳೆಗಳು ಬರುತ್ತದೆ.
* ಚರ್ಮ ಒದ್ದೆಯಾದರೆ ಈ ರೀತಿಯ ಗುಳ್ಳೆಗಳು ಕಂಡು ಬರುತ್ತದೆ. ಆದ್ದರಿಂದ ಮಕ್ಕಳ ಡಯಾಪರ್ಗಳನ್ನು ಆಗಾಗ ಬದಲಾಯಿಸುತ್ತಿರಬೇಕು. ಮನೆಯಲ್ಲಿರುವಾಗ ಡಯಾಪರ್ ಬದಲು ಹತ್ತಿ ಬಟ್ಟೆ ಬಳಸಿ.
* ಮಕ್ಕಳು ಒದ್ದೆ ಅಥವಾ ಕೊಳೆ ಮಾಡಿಕೊಂಡರೆ ಬಟ್ಟೆಗಳನ್ನು ತಕ್ಷಣವೇ ಬದಲಿಸಿ. ಇದರಿಂದ ಮಗುವಿನ ಮೃದು ಚರ್ಮದಲ್ಲಿ ಕೆರೆತ, ಗಾಯ, ಗುಳ್ಳೆ ಉಂಟಾಗುವುದು ತಪ್ಪುತ್ತದೆ.
* ಡಯಾಪರ್ ಧರಿಸುವ ಪ್ರದೇಶವನ್ನು ಬೆಚ್ಚಗಿನ ನೀರಿನಲ್ಲಿ ದಿನಕ್ಕೆ 3-4 ಬಾರಿ ತೊಳೆಯಬೇಕು. ಆ ಜಾಗದಲ್ಲಿ ಹೆಚ್ಚು ಪೌಡರ್ ಬಳಸದಿರಿ.
* ಬಟ್ಟೆ ಕಟ್ಟುವುದಾದರೆ ತುಂಬಾ ಬಿಗಿಯಾಗಿ ಕಟ್ಟಬಾರದು. ಸ್ವಲ್ಪ ಸಡಿಲವಾಗಿ ಕಟ್ಟಿ, ಅದರಲ್ಲೂ ಹತ್ತಿ ಬಟ್ಟೆ ಮಾತ್ರ ಬಳಸಿ.
* ಒಂದು ವೇಲೆ ಗುಳ್ಳೆಗಳು ಉಂಟಾದರೆ ಚಂದನ, ಸ್ವಲ್ಪ ಅರಿಶಿಣ ಮತ್ತು ತುಪ್ಪವನ್ನು ಬೆರೆಸಿ ಹಚ್ಚಿದರೆ ಗಾಯ, ಗುಳ್ಳೆಗಳು ಒಣಗುತ್ತವೆ.
* ತುಪ್ಪದಲ್ಲಿ ಅರಿಶಿಣ ಮತ್ತು ಜಾಜಿಯ ಎಲೆ, ತುಳಸೀ ಎಲೆ, ಬೇವಿನ ಎಲೆಗಳನ್ನು ಹಾಕಿ ಕುದಿಸಿ, ಸೋಸಿ ಇಟ್ಟುಕೊಳ್ಳಬೇಕು. ಗುಳ್ಳೆಗಳು ಉಂಟಾದರೆ ಈ ತೈಲ ಹಚ್ಚಿದರೆ ಕಮ್ಮಿಯಾಗುವುದು. ಆದರೆ ಗಾಯವಾಗಿದ್ದರೆ ವೈದ್ಯರನ್ನು ಕಂಡು ಮಲಾಮು ಹಚ್ಚುವುದು ಒಳ್ಳೆಯದು.



Click it and Unblock the Notifications