Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಮಕ್ಕಳಿಗೆ ಬರುವ ಕಾಯಿಲೆಗಳು ಮತ್ತು ಮನೆಮದ್ದು

ಬೇಧಿ: ಈ ಕಾಯಿಲೆ ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಆದ್ದರಿಂದ ಬೇಧಿ ಉಂಟಾದರೆ ಅದನ್ನು ಹೋಗಲಾಡಿಸಲು ಮನೆಮದ್ದು ತಿಳಿದುಕೊಂಡಿರುವುದು ಒಳ್ಳೆಯದು. ಒಂದು ಗ್ಲಾಸ್ ಹದ ಬಿಸಿ ನೀರಿಗೆ ಒಂದು ಚಮಚ ಸಕ್ಕರೆ ಮತ್ತು ಅರ್ಧ ಚಮಚ ಉಪ್ಪು ಹಾಕಿ ಚೆನ್ನಾಗಿ ಕರಗಿಸಿ ಅದನ್ನು ಕುಡಿಸಿದರೆ ಬೇಧಿ ಕಡಿಮೆಯಾಗುತ್ತದೆ. ಈ ರೀತಿ ಮಾಡಿಯೂ ಬೇಧಿ ಕಡಿಮೆಯಾಗದಿದ್ದರೆ ಕೂಡಲೇ ವೈದ್ಯರನ್ನು ಕಂಡು ಔಷಧಿ ತೆಗೆದುಕೊಳ್ಳಬೇಕು.
ಜ್ವರ: ಸೋಂಕು, ಶೀತ ಇವುಗಳಿಂದ ಜ್ವರ ಉಂಟಾಗುತ್ತದೆ. ಜ್ವರ ಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಕಂಡು ಔಷಧಿ ತೆಗದುಕೊಳ್ಳಬೇಕು.
ಶೀತ: ಶೀತ ಮತ್ತು ಕೆಮ್ಮು ಕಾಣಿಸಿಕೊಂಡರೆ ಒಂದು ಚಮಚ ತುಳಸಿ ರಸಕ್ಕೆ 2 ಕರಿಮೆಣಸನ್ನು ಪುಡಿ ಮಾಡಿ ಹಾಕಿ ಅದಕ್ಕೆ ಅರ್ಧ ಚಮಚ ಜೇನು ಸೇರಿಸಿ ಮಿಶ್ರಣ ಮಾಡಿ ಕುಡಿಸಿದರೆ ಜ್ವರ ಕಡಿಮೆಯಾಗುತ್ತದೆ. ಈ ಮನೆ ಮದ್ದನ್ನು 6 ತಿಂಗಳಗಿಂತ ಚಿಕ್ಕ ವಯಸ್ಸಿನ ಮಗುವಿಗೆ ಕೊಡಬೇಡಿ. ವೈದ್ಯರ ಸಲಹೆ ಪಡೆಯದೆ ಔಷದಿ ಅಂಗಡಿಯಿಂದ ಔಷಧಿ ತಂದು ಕೊಡಬೇಡಿ.
ಹೊಟ್ಟೆಯ ಸಮಸ್ಯೆ: ಮಲಬದ್ಧತೆ, ಹೊಟ್ಟೆ ನೋವು, ಅಜೀರ್ಣ ಈ ರೀತಿಯ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತದೆ. ಮಗುವಿಗೆ ಹೊಟ್ಟೆ ನೋವು ಇದ್ದಾಗ ಸ್ವಲ್ಪ ಇಂಗನ್ನು ನೀರಿನಲ್ಲಿ ಕಲೆಸಿ ಕೊಟ್ಟರೆ ಹೊಟ್ಟೆ ನೋವು ಕಡಿಮೆಯಾಗುವುದು. ಹಾಗಲಕಾಯಿಯ ಎಲೆಯಿಂದ ರಸವನ್ನು ಇಂಡಿ ಅದನ್ನು ಮಕ್ಕಳಿಗೆ ಕುಡಿಸುವುದು ಒಳ್ಳೆಯದು. ಅಜೀರ್ಣ ಸಮಸ್ಯೆ ಕಂಡು ಬಂದರೆ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಕುಡಿಯಲು ಮತ್ತು ತಿನ್ನಲು ಕೊಡಬಾರದು.
ಕೆಂಪು ಗುಳ್ಳೆಗಳು: ಚಿಕ್ಕ ಮಕ್ಕಳಿಗೆ ಡಯಾಫರ್ ಹಾಕಿದಾಗ ಈ ರೀತಿಯ ಗುಳ್ಳೆಗಳು ಉಂಟಾಗುತ್ತದೆ. ಸೊಳ್ಳೆ ಕಚ್ಚಿ ಅಲರ್ಜಿ ಉಂಟಾಗುವುದು. ಡಯಾಫರ್ ಅಥವಾ ಸೊಳ್ಳೆ ಕಚ್ಚಿ ಮಕ್ಕಳ ತ್ವಚೆಯಲ್ಲಿ ಗುಳ್ಳೆಗಳು ಉಂಟಾದರೆ ಕುಡಿ ಬಾಳೆ ಎಲೆ ರಸ, ಆಲೀವ್ ಎಣ್ಣೆ, ಸ್ವಲ್ಪ ಮೇಣ (beeswax) ಮಿಶ್ರ ಮಾಡಿ ಗುಳ್ಳೆಗಳ ಮೇಲೆ ಹಚ್ಚಿದರೆ ಆ ಗುಳ್ಳೆಗಳು ಮಾಯವಾಗುವುದು.



Click it and Unblock the Notifications