Latest Updates
-
ರಾಖಿ ಹಬ್ಬ 2026: ಆಗಸ್ಟ್ 28ರಂದು ರಕ್ಷಾಬಂಧನ ಆಚರಣೆ; ಶುಭ ಮುಹೂರ್ತ ಮತ್ತು ಭದ್ರಾ ಕಾಲದ ಸಂಪೂರ್ಣ ಮಾಹಿತಿ ಇಲ್ಲಿದೆ -
ಬೆಂಗಳೂರು ಮಳೆ: ಮನೆಯಲ್ಲೇ ಮಾಡಿ 15 ನಿಮಿಷದ ನೋ-ಜಂಪ್ ವರ್ಕೌಟ್, ಫಿಟ್ ಆಗಿರಿ! -
ಮಳೆಗಾಲದ ಪ್ರಯಾಣ: ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ನಡೆಯಲು 7 ನಿಮಿಷದ ಸರಳ ವ್ಯಾಯಾಮಗಳು -
ಮಳೆಗಾಲದ ಪ್ರಯಾಣ: ಟ್ರಾಫಿಕ್ ಮತ್ತು ಕ್ಯಾಬ್ ಸಮಸ್ಯೆಗಳ ನಡುವೆ ದಂಪತಿಗಳು ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ಇಂದಿನ ಪರಿಷ್ಕೃತ ಪಟ್ಟಿ ಮತ್ತು ನಿಮ್ಮ ಪ್ರಕರಣದ ಸ್ಥಿತಿ ಪರಿಶೀಲಿಸಿ -
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್!
ಮಕ್ಕಳಿಗೆ ಬರುವ ಕಾಯಿಲೆಗಳು ಮತ್ತು ಮನೆಮದ್ದು

ಬೇಧಿ: ಈ ಕಾಯಿಲೆ ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಆದ್ದರಿಂದ ಬೇಧಿ ಉಂಟಾದರೆ ಅದನ್ನು ಹೋಗಲಾಡಿಸಲು ಮನೆಮದ್ದು ತಿಳಿದುಕೊಂಡಿರುವುದು ಒಳ್ಳೆಯದು. ಒಂದು ಗ್ಲಾಸ್ ಹದ ಬಿಸಿ ನೀರಿಗೆ ಒಂದು ಚಮಚ ಸಕ್ಕರೆ ಮತ್ತು ಅರ್ಧ ಚಮಚ ಉಪ್ಪು ಹಾಕಿ ಚೆನ್ನಾಗಿ ಕರಗಿಸಿ ಅದನ್ನು ಕುಡಿಸಿದರೆ ಬೇಧಿ ಕಡಿಮೆಯಾಗುತ್ತದೆ. ಈ ರೀತಿ ಮಾಡಿಯೂ ಬೇಧಿ ಕಡಿಮೆಯಾಗದಿದ್ದರೆ ಕೂಡಲೇ ವೈದ್ಯರನ್ನು ಕಂಡು ಔಷಧಿ ತೆಗೆದುಕೊಳ್ಳಬೇಕು.
ಜ್ವರ: ಸೋಂಕು, ಶೀತ ಇವುಗಳಿಂದ ಜ್ವರ ಉಂಟಾಗುತ್ತದೆ. ಜ್ವರ ಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಕಂಡು ಔಷಧಿ ತೆಗದುಕೊಳ್ಳಬೇಕು.
ಶೀತ: ಶೀತ ಮತ್ತು ಕೆಮ್ಮು ಕಾಣಿಸಿಕೊಂಡರೆ ಒಂದು ಚಮಚ ತುಳಸಿ ರಸಕ್ಕೆ 2 ಕರಿಮೆಣಸನ್ನು ಪುಡಿ ಮಾಡಿ ಹಾಕಿ ಅದಕ್ಕೆ ಅರ್ಧ ಚಮಚ ಜೇನು ಸೇರಿಸಿ ಮಿಶ್ರಣ ಮಾಡಿ ಕುಡಿಸಿದರೆ ಜ್ವರ ಕಡಿಮೆಯಾಗುತ್ತದೆ. ಈ ಮನೆ ಮದ್ದನ್ನು 6 ತಿಂಗಳಗಿಂತ ಚಿಕ್ಕ ವಯಸ್ಸಿನ ಮಗುವಿಗೆ ಕೊಡಬೇಡಿ. ವೈದ್ಯರ ಸಲಹೆ ಪಡೆಯದೆ ಔಷದಿ ಅಂಗಡಿಯಿಂದ ಔಷಧಿ ತಂದು ಕೊಡಬೇಡಿ.
ಹೊಟ್ಟೆಯ ಸಮಸ್ಯೆ: ಮಲಬದ್ಧತೆ, ಹೊಟ್ಟೆ ನೋವು, ಅಜೀರ್ಣ ಈ ರೀತಿಯ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತದೆ. ಮಗುವಿಗೆ ಹೊಟ್ಟೆ ನೋವು ಇದ್ದಾಗ ಸ್ವಲ್ಪ ಇಂಗನ್ನು ನೀರಿನಲ್ಲಿ ಕಲೆಸಿ ಕೊಟ್ಟರೆ ಹೊಟ್ಟೆ ನೋವು ಕಡಿಮೆಯಾಗುವುದು. ಹಾಗಲಕಾಯಿಯ ಎಲೆಯಿಂದ ರಸವನ್ನು ಇಂಡಿ ಅದನ್ನು ಮಕ್ಕಳಿಗೆ ಕುಡಿಸುವುದು ಒಳ್ಳೆಯದು. ಅಜೀರ್ಣ ಸಮಸ್ಯೆ ಕಂಡು ಬಂದರೆ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಕುಡಿಯಲು ಮತ್ತು ತಿನ್ನಲು ಕೊಡಬಾರದು.
ಕೆಂಪು ಗುಳ್ಳೆಗಳು: ಚಿಕ್ಕ ಮಕ್ಕಳಿಗೆ ಡಯಾಫರ್ ಹಾಕಿದಾಗ ಈ ರೀತಿಯ ಗುಳ್ಳೆಗಳು ಉಂಟಾಗುತ್ತದೆ. ಸೊಳ್ಳೆ ಕಚ್ಚಿ ಅಲರ್ಜಿ ಉಂಟಾಗುವುದು. ಡಯಾಫರ್ ಅಥವಾ ಸೊಳ್ಳೆ ಕಚ್ಚಿ ಮಕ್ಕಳ ತ್ವಚೆಯಲ್ಲಿ ಗುಳ್ಳೆಗಳು ಉಂಟಾದರೆ ಕುಡಿ ಬಾಳೆ ಎಲೆ ರಸ, ಆಲೀವ್ ಎಣ್ಣೆ, ಸ್ವಲ್ಪ ಮೇಣ (beeswax) ಮಿಶ್ರ ಮಾಡಿ ಗುಳ್ಳೆಗಳ ಮೇಲೆ ಹಚ್ಚಿದರೆ ಆ ಗುಳ್ಳೆಗಳು ಮಾಯವಾಗುವುದು.



Click it and Unblock the Notifications