Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ಸ್ವಂತ ಮನೆಯಲ್ಲಿಯೇ ಕದಿಯುವುದು ಏಕೆ?

ಕಾರಣಗಳು:
1. ಪೋಷಕರಿಗೆ ಮಕ್ಕಳ ಬಗ್ಗೆ ಶ್ರದ್ಧೆ ಇಲ್ಲದಿದ್ದರೆ ಈ ರೀತಿಯ ಕದಿಯುವ ಕಾಯಿಲೆ ಬೆಳೆಸಿಕೊಳ್ಳುತ್ತಾರೆ. ಪ್ರಾರಂಭದಲ್ಲಿ ತಿಂಡಿ, ಚಾಕೋಲೆಟ್, ಒಡ ಹುಟ್ಟಿದವರ ಆಟದ ಸಾಮಾನುಗಳನ್ನು ಕದಿಯುತ್ತಾರೆ. ನಂತರ ನಿಧಾನಕ್ಕೆ ಹಣ ಕದಿಯಲು ಪ್ರಾರಂಭಿಸುತ್ತಾರೆ.
2. ಕೆಲವೊಮ್ಮೆ ಮನೆಯಲ್ಲಿ ಎರಡು ಮಕ್ಕಳಿದ್ದರೆ ಒಂದು ಮಗುವನ್ನು ತುಂಬಾ ಪ್ರೀತಿ ಮಾಡುತ್ತಿದು, ಇನ್ನೊಂದು ಮಗುವಿನ ಬಗ್ಗೆ ಅಷ್ಟಾಗಿ ಗಮನ ಹರಿಸದಿದ್ದರೆ ಮಕ್ಕಳು ಈ ರೀತಿಯ ತಪ್ಪುಗಳನ್ನು ಮಾಡುತ್ತಾರೆ.
3. ಸಹವಾಸ ದೋಷದಿಂದ ಕೂಡ ಈ ರೀತಿಯ ತಪ್ಪು ಮಾಡುತ್ತಾರೆ. ಸ್ನೇಹಿತರ ಮುಂದೆ ತಾನು ದೊಡ್ಡ ಜನ ಅನ್ನಿಸಿಕೊಳ್ಳಬೇಕೆಂದು ಕೂಡ ಈ ರೀತಿಯ ತಪ್ಪು ಮಾಡುತ್ತಾರೆ.
ಪರಿಹಾರ:
1. ಪೋಷಕರಿಗೆ ಎಷ್ಟೇ ಕೆಲಸವಿರಲಿ ಮಕ್ಕಳ ಕಡೆ ಗಮನ ಕೊಡುವುದು ಒಳ್ಳೆಯದು. ಕೆಲಸದವರ ಸುಪರ್ದಿಗೆ ಮಕ್ಕಳನ್ನು ಒಪ್ಪಿಸಿ ಸುಮ್ಮನೆ ಕೂರುವುದು ಕೆಲ ಪೋಷಕರು ಮಾಡುವ ದೊಡ್ಡ ತಪ್ಪು. ಮಕ್ಕಳ ಬೇಕು, ಬೇಡ ಮತ್ತು ಗುಣಗಳ ಬಗ್ಗೆ ಗಮನ ಕೊಡಬೇಕಾದದು ಪೋಷಕರ ಕರ್ತವ್ಯ, ಇಲ್ಲದಿದ್ದರೆ ಮುಂದೆ ಪಶ್ಚಾತಾಪ ಪಡಬೇಕಾಗುತ್ತದೆ.
2. ಅಪ್ಪ-ಅಮ್ಮ ನನ್ನನ್ನು ಸರಿಯಾಗಿ ನೋಡುತ್ತಿಲ್ಲ ಎಂಬ ಭಾವನೆ ಮಕ್ಕಳ ಮನಸ್ಸಿನಲ್ಲಿ ತುಂಬಲು ಅವಕಾಶ ಕೊಡಬೇಡಿ. ಏಕೆಂದರೆ ಕೆಲವೊಂದು ಮನೆಗಳಲ್ಲಿ ಕೊನೆಯ ಮಕ್ಕಳನ್ನು ತುಂಬಾ ಮುದ್ದು ಮಾಡುತ್ತಾರೆ, ಕೆಲವರು ಗಂಡು ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತಾರೆ. ಈ ರೀತಿ ಮಾಡಬಾರದು, ಎಲ್ಲಾ ಮಕ್ಕಳನ್ನು ಸಮನಾಗಿ ನೋಡಬೇಕು. ಇಲ್ಲದಿದ್ದರೆ ಚಿಕ್ಕ ಮನಸ್ಸು ತಪ್ಪು ಹಾದಿಯನ್ನು ಸುಳಿಯುವುದು.
3. ನಮ್ಮ ಮಕ್ಕಳ ಸ್ನೇಹಿತರ ಬಗ್ಗೆ ತಿಳಿದಿರಬೇಕು. ಕೆಟ್ಟ ಗುಣವಿರುವ ಮಕ್ಕಳ ಸಹವಾಸ ಮಾಡಲು ಬಿಡಬಾರದು.
4. ಮಕ್ಕಳ ಬೇಕು ಬೇಡಗಳನ್ನು ತಿಳಿದು ಪೂರೈಸಬೇಕು. ಒಂದು ವೇಳೆ ನಿಮಗೆ ಅವರ ಬೇಡಿಕೆಯನ್ನು ಪೂರೈಸಲು ಆಗದಿದ್ದರೆ ನಿಮ್ಮ ಅಸಹಾಯಕತೆಯನ್ನು ಮಕ್ಕಳಿಗೆ ಮನದಟ್ಟು ಮಾಡಲು ಹಿಂಜರಿಯಬಾರದು. ನಿಮ್ಮ ಆರ್ಥಿಕ ಹಿತಿ-ಮಿತಿ ಬಗ್ಗೆ ಮಕ್ಕಳಿಗೆ ತಿಳಿದಿರುವುದು ಒಳ್ಳೆಯದು. ಆಗ ಅವರು ಕೂಡ ಅದಕ್ಕೆ ತಕ್ಕಂತೆ ಜೀವನ ನಡೆಸಲು ಕಲಿಯುತ್ತಾರೆ.



Click it and Unblock the Notifications
