Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಸ್ವಂತ ಮನೆಯಲ್ಲಿಯೇ ಕದಿಯುವುದು ಏಕೆ?

ಕಾರಣಗಳು:
1. ಪೋಷಕರಿಗೆ ಮಕ್ಕಳ ಬಗ್ಗೆ ಶ್ರದ್ಧೆ ಇಲ್ಲದಿದ್ದರೆ ಈ ರೀತಿಯ ಕದಿಯುವ ಕಾಯಿಲೆ ಬೆಳೆಸಿಕೊಳ್ಳುತ್ತಾರೆ. ಪ್ರಾರಂಭದಲ್ಲಿ ತಿಂಡಿ, ಚಾಕೋಲೆಟ್, ಒಡ ಹುಟ್ಟಿದವರ ಆಟದ ಸಾಮಾನುಗಳನ್ನು ಕದಿಯುತ್ತಾರೆ. ನಂತರ ನಿಧಾನಕ್ಕೆ ಹಣ ಕದಿಯಲು ಪ್ರಾರಂಭಿಸುತ್ತಾರೆ.
2. ಕೆಲವೊಮ್ಮೆ ಮನೆಯಲ್ಲಿ ಎರಡು ಮಕ್ಕಳಿದ್ದರೆ ಒಂದು ಮಗುವನ್ನು ತುಂಬಾ ಪ್ರೀತಿ ಮಾಡುತ್ತಿದು, ಇನ್ನೊಂದು ಮಗುವಿನ ಬಗ್ಗೆ ಅಷ್ಟಾಗಿ ಗಮನ ಹರಿಸದಿದ್ದರೆ ಮಕ್ಕಳು ಈ ರೀತಿಯ ತಪ್ಪುಗಳನ್ನು ಮಾಡುತ್ತಾರೆ.
3. ಸಹವಾಸ ದೋಷದಿಂದ ಕೂಡ ಈ ರೀತಿಯ ತಪ್ಪು ಮಾಡುತ್ತಾರೆ. ಸ್ನೇಹಿತರ ಮುಂದೆ ತಾನು ದೊಡ್ಡ ಜನ ಅನ್ನಿಸಿಕೊಳ್ಳಬೇಕೆಂದು ಕೂಡ ಈ ರೀತಿಯ ತಪ್ಪು ಮಾಡುತ್ತಾರೆ.
ಪರಿಹಾರ:
1. ಪೋಷಕರಿಗೆ ಎಷ್ಟೇ ಕೆಲಸವಿರಲಿ ಮಕ್ಕಳ ಕಡೆ ಗಮನ ಕೊಡುವುದು ಒಳ್ಳೆಯದು. ಕೆಲಸದವರ ಸುಪರ್ದಿಗೆ ಮಕ್ಕಳನ್ನು ಒಪ್ಪಿಸಿ ಸುಮ್ಮನೆ ಕೂರುವುದು ಕೆಲ ಪೋಷಕರು ಮಾಡುವ ದೊಡ್ಡ ತಪ್ಪು. ಮಕ್ಕಳ ಬೇಕು, ಬೇಡ ಮತ್ತು ಗುಣಗಳ ಬಗ್ಗೆ ಗಮನ ಕೊಡಬೇಕಾದದು ಪೋಷಕರ ಕರ್ತವ್ಯ, ಇಲ್ಲದಿದ್ದರೆ ಮುಂದೆ ಪಶ್ಚಾತಾಪ ಪಡಬೇಕಾಗುತ್ತದೆ.
2. ಅಪ್ಪ-ಅಮ್ಮ ನನ್ನನ್ನು ಸರಿಯಾಗಿ ನೋಡುತ್ತಿಲ್ಲ ಎಂಬ ಭಾವನೆ ಮಕ್ಕಳ ಮನಸ್ಸಿನಲ್ಲಿ ತುಂಬಲು ಅವಕಾಶ ಕೊಡಬೇಡಿ. ಏಕೆಂದರೆ ಕೆಲವೊಂದು ಮನೆಗಳಲ್ಲಿ ಕೊನೆಯ ಮಕ್ಕಳನ್ನು ತುಂಬಾ ಮುದ್ದು ಮಾಡುತ್ತಾರೆ, ಕೆಲವರು ಗಂಡು ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತಾರೆ. ಈ ರೀತಿ ಮಾಡಬಾರದು, ಎಲ್ಲಾ ಮಕ್ಕಳನ್ನು ಸಮನಾಗಿ ನೋಡಬೇಕು. ಇಲ್ಲದಿದ್ದರೆ ಚಿಕ್ಕ ಮನಸ್ಸು ತಪ್ಪು ಹಾದಿಯನ್ನು ಸುಳಿಯುವುದು.
3. ನಮ್ಮ ಮಕ್ಕಳ ಸ್ನೇಹಿತರ ಬಗ್ಗೆ ತಿಳಿದಿರಬೇಕು. ಕೆಟ್ಟ ಗುಣವಿರುವ ಮಕ್ಕಳ ಸಹವಾಸ ಮಾಡಲು ಬಿಡಬಾರದು.
4. ಮಕ್ಕಳ ಬೇಕು ಬೇಡಗಳನ್ನು ತಿಳಿದು ಪೂರೈಸಬೇಕು. ಒಂದು ವೇಳೆ ನಿಮಗೆ ಅವರ ಬೇಡಿಕೆಯನ್ನು ಪೂರೈಸಲು ಆಗದಿದ್ದರೆ ನಿಮ್ಮ ಅಸಹಾಯಕತೆಯನ್ನು ಮಕ್ಕಳಿಗೆ ಮನದಟ್ಟು ಮಾಡಲು ಹಿಂಜರಿಯಬಾರದು. ನಿಮ್ಮ ಆರ್ಥಿಕ ಹಿತಿ-ಮಿತಿ ಬಗ್ಗೆ ಮಕ್ಕಳಿಗೆ ತಿಳಿದಿರುವುದು ಒಳ್ಳೆಯದು. ಆಗ ಅವರು ಕೂಡ ಅದಕ್ಕೆ ತಕ್ಕಂತೆ ಜೀವನ ನಡೆಸಲು ಕಲಿಯುತ್ತಾರೆ.



Click it and Unblock the Notifications