Latest Updates
-
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ!
ಸ್ವಂತ ಮನೆಯಲ್ಲಿಯೇ ಕದಿಯುವುದು ಏಕೆ?

ಕಾರಣಗಳು:
1. ಪೋಷಕರಿಗೆ ಮಕ್ಕಳ ಬಗ್ಗೆ ಶ್ರದ್ಧೆ ಇಲ್ಲದಿದ್ದರೆ ಈ ರೀತಿಯ ಕದಿಯುವ ಕಾಯಿಲೆ ಬೆಳೆಸಿಕೊಳ್ಳುತ್ತಾರೆ. ಪ್ರಾರಂಭದಲ್ಲಿ ತಿಂಡಿ, ಚಾಕೋಲೆಟ್, ಒಡ ಹುಟ್ಟಿದವರ ಆಟದ ಸಾಮಾನುಗಳನ್ನು ಕದಿಯುತ್ತಾರೆ. ನಂತರ ನಿಧಾನಕ್ಕೆ ಹಣ ಕದಿಯಲು ಪ್ರಾರಂಭಿಸುತ್ತಾರೆ.
2. ಕೆಲವೊಮ್ಮೆ ಮನೆಯಲ್ಲಿ ಎರಡು ಮಕ್ಕಳಿದ್ದರೆ ಒಂದು ಮಗುವನ್ನು ತುಂಬಾ ಪ್ರೀತಿ ಮಾಡುತ್ತಿದು, ಇನ್ನೊಂದು ಮಗುವಿನ ಬಗ್ಗೆ ಅಷ್ಟಾಗಿ ಗಮನ ಹರಿಸದಿದ್ದರೆ ಮಕ್ಕಳು ಈ ರೀತಿಯ ತಪ್ಪುಗಳನ್ನು ಮಾಡುತ್ತಾರೆ.
3. ಸಹವಾಸ ದೋಷದಿಂದ ಕೂಡ ಈ ರೀತಿಯ ತಪ್ಪು ಮಾಡುತ್ತಾರೆ. ಸ್ನೇಹಿತರ ಮುಂದೆ ತಾನು ದೊಡ್ಡ ಜನ ಅನ್ನಿಸಿಕೊಳ್ಳಬೇಕೆಂದು ಕೂಡ ಈ ರೀತಿಯ ತಪ್ಪು ಮಾಡುತ್ತಾರೆ.
ಪರಿಹಾರ:
1. ಪೋಷಕರಿಗೆ ಎಷ್ಟೇ ಕೆಲಸವಿರಲಿ ಮಕ್ಕಳ ಕಡೆ ಗಮನ ಕೊಡುವುದು ಒಳ್ಳೆಯದು. ಕೆಲಸದವರ ಸುಪರ್ದಿಗೆ ಮಕ್ಕಳನ್ನು ಒಪ್ಪಿಸಿ ಸುಮ್ಮನೆ ಕೂರುವುದು ಕೆಲ ಪೋಷಕರು ಮಾಡುವ ದೊಡ್ಡ ತಪ್ಪು. ಮಕ್ಕಳ ಬೇಕು, ಬೇಡ ಮತ್ತು ಗುಣಗಳ ಬಗ್ಗೆ ಗಮನ ಕೊಡಬೇಕಾದದು ಪೋಷಕರ ಕರ್ತವ್ಯ, ಇಲ್ಲದಿದ್ದರೆ ಮುಂದೆ ಪಶ್ಚಾತಾಪ ಪಡಬೇಕಾಗುತ್ತದೆ.
2. ಅಪ್ಪ-ಅಮ್ಮ ನನ್ನನ್ನು ಸರಿಯಾಗಿ ನೋಡುತ್ತಿಲ್ಲ ಎಂಬ ಭಾವನೆ ಮಕ್ಕಳ ಮನಸ್ಸಿನಲ್ಲಿ ತುಂಬಲು ಅವಕಾಶ ಕೊಡಬೇಡಿ. ಏಕೆಂದರೆ ಕೆಲವೊಂದು ಮನೆಗಳಲ್ಲಿ ಕೊನೆಯ ಮಕ್ಕಳನ್ನು ತುಂಬಾ ಮುದ್ದು ಮಾಡುತ್ತಾರೆ, ಕೆಲವರು ಗಂಡು ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತಾರೆ. ಈ ರೀತಿ ಮಾಡಬಾರದು, ಎಲ್ಲಾ ಮಕ್ಕಳನ್ನು ಸಮನಾಗಿ ನೋಡಬೇಕು. ಇಲ್ಲದಿದ್ದರೆ ಚಿಕ್ಕ ಮನಸ್ಸು ತಪ್ಪು ಹಾದಿಯನ್ನು ಸುಳಿಯುವುದು.
3. ನಮ್ಮ ಮಕ್ಕಳ ಸ್ನೇಹಿತರ ಬಗ್ಗೆ ತಿಳಿದಿರಬೇಕು. ಕೆಟ್ಟ ಗುಣವಿರುವ ಮಕ್ಕಳ ಸಹವಾಸ ಮಾಡಲು ಬಿಡಬಾರದು.
4. ಮಕ್ಕಳ ಬೇಕು ಬೇಡಗಳನ್ನು ತಿಳಿದು ಪೂರೈಸಬೇಕು. ಒಂದು ವೇಳೆ ನಿಮಗೆ ಅವರ ಬೇಡಿಕೆಯನ್ನು ಪೂರೈಸಲು ಆಗದಿದ್ದರೆ ನಿಮ್ಮ ಅಸಹಾಯಕತೆಯನ್ನು ಮಕ್ಕಳಿಗೆ ಮನದಟ್ಟು ಮಾಡಲು ಹಿಂಜರಿಯಬಾರದು. ನಿಮ್ಮ ಆರ್ಥಿಕ ಹಿತಿ-ಮಿತಿ ಬಗ್ಗೆ ಮಕ್ಕಳಿಗೆ ತಿಳಿದಿರುವುದು ಒಳ್ಳೆಯದು. ಆಗ ಅವರು ಕೂಡ ಅದಕ್ಕೆ ತಕ್ಕಂತೆ ಜೀವನ ನಡೆಸಲು ಕಲಿಯುತ್ತಾರೆ.



Click it and Unblock the Notifications