Latest Updates
-
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ -
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ!
ಬಾಲ್ಯದಲ್ಲಿಯೇ ಮಾನಸಿಕ ಒತ್ತಡ, ತರುವುದು ಅಪಾಯ
ಚಿಕ್ಕ ಪ್ರಾಯದಲ್ಲಿಯೇ ಅಧಿಕ ಮಾನಸಿಕ ಒತ್ತಡಕ್ಕೆ ಒಳಗಾದ ಮಕ್ಕಳು ದೊಡ್ಡವರಾದಾಗ ಗುಣ ಪಡಿಸಲಾಗದ ಮಾನಸಿಕ ಮತ್ತು ದೈಹಿಕ ನೋವನ್ನು ಅನುಭವಿಸುತ್ತಾರೆ ಅನ್ನುವುದು ಕ್ಯಾಲಿಫೋನಿರ್ಯಾ ಯೂನಿವರ್ಸಿಟಿಯಲ್ಲಿ ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ.
ಕೌಟುಂಬಿಕ ಕಲಹಗಳು, ವಿಚ್ಛೇದನ ಇವೆಲ್ಲವೂ ಮಕ್ಕಳ ಮೇಲೆ ಅಧಿಕ ಪರಿಣಾಮವನ್ನು ಬೀರುತ್ತದೆ. ಕೌಟುಂಬಿಕ ಕಲಹದಿಂದಾಗಿ ಹೆಚ್ಚಿನ ತಾಯಿಂದಿರು ತಮ್ಮ ಮಕ್ಕಳ ಬೇಕು-ಬೇಡಗಳ ಕಡೆ ಗಮನ ಕೊಡಲು ಮರೆತು ಬಿಡುತ್ತಾರೆ. ಇದರಿಂದ ಮಕ್ಕಳ ಮೇಲೆ ಪ್ರಭಾವ ಮಾತ್ರ ತುಂಬಾ ಕೆಟ್ಟದ್ದು. ಮಕ್ಕಳು ತುಂಬಾ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಇದು ಅವರ ಮುಂದಿನ ಬದುಕಿನ ಮೇಲೆ ಕೆಟ್ಟ ಪ್ರಭಾವ ಬೀರುವುದು.

ಚಿಕ್ಕ ಪ್ರಾಯದಲ್ಲಿ ಮಾನಸಿಕ ಒತ್ತಡ ಅನುಭವಿಸಿದರೆ ಬೆಳೆದಂತೆ ಮಾನಸಿಕ ನೋವಿನ ಜೊತೆ ದೈಹಿಕ ನೋವುಗಳು ಕಂಡು ಬರುವುದು. ಕೆಲವರಿಗೆ ಸ್ಟ್ರೋಕ್ ಬರುವ ಸಾಧ್ಯತೆ ಕೂಡ ಇದೆ. ಸ್ನಾಯು ಸೆಳೆತ ಕಂಡು ಬರುವುದು. ಯಾವುದೇ ಔಷಧಿಗಳು ಈ ನೋವನ್ನು ಕಡಿಮೆ ಮಾಡುವಲ್ಲಿ ವಿಫಲವಾಗುತ್ತವೆ. ಆ ವ್ಯಕ್ತಿ ಬದುಕಿದ್ದಷ್ಟು ಕಾಲ ನೋವನ್ನು ಅನುಭವಿಸಬೇಕಾಗುವುದು ಅನ್ನುವ ಅಂಶ ಅಧ್ಯಯನದಿಂದ ಬೆಳಕಿಗೆ ಬಂದಿದೆ.
ಮಾನಸಿಕ ಒತ್ತಡವು ಹಾರ್ಮೋನ್ ಗಳಲ್ಲಿ ಅಸಮತೋಲನವನ್ನು ಉಂಟು ಮಾಡುತ್ತದೆ. ಇದರಿಂಂದಾಗಿ ಉರಿಯೂತದ ಸಮಸ್ಯೆ, ಮೈ ಕೈ ನೋವು ಕಂಡು ಬರುವುದು. ಅಲ್ಲದೆ ಮಕ್ಕಳಲ್ಲಿ ಆತ್ಮವಿಶ್ವಾಸ ಕಮ್ಮಿಯಾಗುವ ಸಾಧ್ಯತೆ ಕೂಡ ಇದೆ.
ಬರೀ ಕೌಟುಂಬಿಕ ಜಗಳದಿಂದ ಮಾತ್ರವಲ್ಲ, ಕೆಲವೊಮ್ಮೆ ಪೋಷಕರು ಮತ್ತಿತರ ಕಾರಣಕ್ಕೆ ತುಂಬಾ ಒತ್ತಡ ಹಾಕುತ್ತಾರೆ. ನಿಮ್ಮ ಮಕ್ಕಳಿಗೆ ಮಾನಸಿಕ ಒತ್ತಡವನ್ನು ಹಾಕಬೇಡಿ. ಕೆಲ ಪೋಷಕರು ತಮ್ಮ ಮಕ್ಕಳಿಗೆ ಓದಿನ ವಿಷಯದಲ್ಲಿ ತುಂಬಾ ಮಾನಸಿಕ ಒತ್ತಡ ಹಾಕುತ್ತಾರೆ. ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಬರದಿದ್ದರೆ ಹೊಡೆಯುವುದು, ಬೈಯ್ಯುವುದು ಮಾಡುತ್ತಾರೆ. ಇವೆಲ್ಲಾ ಮಕ್ಕಳ ಮನಸ್ಸಿನ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ.
ಮಕ್ಕಳಿಗೆ ಓದು ಎಂದು ಜೋರು ಮಾಡಿ ಹೇಳುವ ಬದಲು ನಯವಾಗಿ, ಉಪಾಯವಾಗಿ ಹೇಳಿ, ಆಗ ಮಕ್ಕಳು ಓದಿನ ಕಡೆ ಗಮನ ಹರಿಸಲು ಪ್ರಾರಂಭಿಸುತ್ತಾರೆ.
ಮಕ್ಕಳು ಮಾನಸಿಕ ಒತ್ತಡದಿಂದ ಮುಕ್ತರಾಗಲಿ, ಉತ್ತಮ ಬದುಕು ಕಾಣಲಿ.



Click it and Unblock the Notifications
