Latest Updates
-
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು!
ಬಾಲ್ಯದಲ್ಲಿಯೇ ಮಾನಸಿಕ ಒತ್ತಡ, ತರುವುದು ಅಪಾಯ
ಚಿಕ್ಕ ಪ್ರಾಯದಲ್ಲಿಯೇ ಅಧಿಕ ಮಾನಸಿಕ ಒತ್ತಡಕ್ಕೆ ಒಳಗಾದ ಮಕ್ಕಳು ದೊಡ್ಡವರಾದಾಗ ಗುಣ ಪಡಿಸಲಾಗದ ಮಾನಸಿಕ ಮತ್ತು ದೈಹಿಕ ನೋವನ್ನು ಅನುಭವಿಸುತ್ತಾರೆ ಅನ್ನುವುದು ಕ್ಯಾಲಿಫೋನಿರ್ಯಾ ಯೂನಿವರ್ಸಿಟಿಯಲ್ಲಿ ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ.
ಕೌಟುಂಬಿಕ ಕಲಹಗಳು, ವಿಚ್ಛೇದನ ಇವೆಲ್ಲವೂ ಮಕ್ಕಳ ಮೇಲೆ ಅಧಿಕ ಪರಿಣಾಮವನ್ನು ಬೀರುತ್ತದೆ. ಕೌಟುಂಬಿಕ ಕಲಹದಿಂದಾಗಿ ಹೆಚ್ಚಿನ ತಾಯಿಂದಿರು ತಮ್ಮ ಮಕ್ಕಳ ಬೇಕು-ಬೇಡಗಳ ಕಡೆ ಗಮನ ಕೊಡಲು ಮರೆತು ಬಿಡುತ್ತಾರೆ. ಇದರಿಂದ ಮಕ್ಕಳ ಮೇಲೆ ಪ್ರಭಾವ ಮಾತ್ರ ತುಂಬಾ ಕೆಟ್ಟದ್ದು. ಮಕ್ಕಳು ತುಂಬಾ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಇದು ಅವರ ಮುಂದಿನ ಬದುಕಿನ ಮೇಲೆ ಕೆಟ್ಟ ಪ್ರಭಾವ ಬೀರುವುದು.

ಚಿಕ್ಕ ಪ್ರಾಯದಲ್ಲಿ ಮಾನಸಿಕ ಒತ್ತಡ ಅನುಭವಿಸಿದರೆ ಬೆಳೆದಂತೆ ಮಾನಸಿಕ ನೋವಿನ ಜೊತೆ ದೈಹಿಕ ನೋವುಗಳು ಕಂಡು ಬರುವುದು. ಕೆಲವರಿಗೆ ಸ್ಟ್ರೋಕ್ ಬರುವ ಸಾಧ್ಯತೆ ಕೂಡ ಇದೆ. ಸ್ನಾಯು ಸೆಳೆತ ಕಂಡು ಬರುವುದು. ಯಾವುದೇ ಔಷಧಿಗಳು ಈ ನೋವನ್ನು ಕಡಿಮೆ ಮಾಡುವಲ್ಲಿ ವಿಫಲವಾಗುತ್ತವೆ. ಆ ವ್ಯಕ್ತಿ ಬದುಕಿದ್ದಷ್ಟು ಕಾಲ ನೋವನ್ನು ಅನುಭವಿಸಬೇಕಾಗುವುದು ಅನ್ನುವ ಅಂಶ ಅಧ್ಯಯನದಿಂದ ಬೆಳಕಿಗೆ ಬಂದಿದೆ.
ಮಾನಸಿಕ ಒತ್ತಡವು ಹಾರ್ಮೋನ್ ಗಳಲ್ಲಿ ಅಸಮತೋಲನವನ್ನು ಉಂಟು ಮಾಡುತ್ತದೆ. ಇದರಿಂಂದಾಗಿ ಉರಿಯೂತದ ಸಮಸ್ಯೆ, ಮೈ ಕೈ ನೋವು ಕಂಡು ಬರುವುದು. ಅಲ್ಲದೆ ಮಕ್ಕಳಲ್ಲಿ ಆತ್ಮವಿಶ್ವಾಸ ಕಮ್ಮಿಯಾಗುವ ಸಾಧ್ಯತೆ ಕೂಡ ಇದೆ.
ಬರೀ ಕೌಟುಂಬಿಕ ಜಗಳದಿಂದ ಮಾತ್ರವಲ್ಲ, ಕೆಲವೊಮ್ಮೆ ಪೋಷಕರು ಮತ್ತಿತರ ಕಾರಣಕ್ಕೆ ತುಂಬಾ ಒತ್ತಡ ಹಾಕುತ್ತಾರೆ. ನಿಮ್ಮ ಮಕ್ಕಳಿಗೆ ಮಾನಸಿಕ ಒತ್ತಡವನ್ನು ಹಾಕಬೇಡಿ. ಕೆಲ ಪೋಷಕರು ತಮ್ಮ ಮಕ್ಕಳಿಗೆ ಓದಿನ ವಿಷಯದಲ್ಲಿ ತುಂಬಾ ಮಾನಸಿಕ ಒತ್ತಡ ಹಾಕುತ್ತಾರೆ. ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಬರದಿದ್ದರೆ ಹೊಡೆಯುವುದು, ಬೈಯ್ಯುವುದು ಮಾಡುತ್ತಾರೆ. ಇವೆಲ್ಲಾ ಮಕ್ಕಳ ಮನಸ್ಸಿನ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ.
ಮಕ್ಕಳಿಗೆ ಓದು ಎಂದು ಜೋರು ಮಾಡಿ ಹೇಳುವ ಬದಲು ನಯವಾಗಿ, ಉಪಾಯವಾಗಿ ಹೇಳಿ, ಆಗ ಮಕ್ಕಳು ಓದಿನ ಕಡೆ ಗಮನ ಹರಿಸಲು ಪ್ರಾರಂಭಿಸುತ್ತಾರೆ.
ಮಕ್ಕಳು ಮಾನಸಿಕ ಒತ್ತಡದಿಂದ ಮುಕ್ತರಾಗಲಿ, ಉತ್ತಮ ಬದುಕು ಕಾಣಲಿ.



Click it and Unblock the Notifications











