Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಬಾಲ್ಯದಲ್ಲಿಯೇ ಮಾನಸಿಕ ಒತ್ತಡ, ತರುವುದು ಅಪಾಯ
ಚಿಕ್ಕ ಪ್ರಾಯದಲ್ಲಿಯೇ ಅಧಿಕ ಮಾನಸಿಕ ಒತ್ತಡಕ್ಕೆ ಒಳಗಾದ ಮಕ್ಕಳು ದೊಡ್ಡವರಾದಾಗ ಗುಣ ಪಡಿಸಲಾಗದ ಮಾನಸಿಕ ಮತ್ತು ದೈಹಿಕ ನೋವನ್ನು ಅನುಭವಿಸುತ್ತಾರೆ ಅನ್ನುವುದು ಕ್ಯಾಲಿಫೋನಿರ್ಯಾ ಯೂನಿವರ್ಸಿಟಿಯಲ್ಲಿ ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ.
ಕೌಟುಂಬಿಕ ಕಲಹಗಳು, ವಿಚ್ಛೇದನ ಇವೆಲ್ಲವೂ ಮಕ್ಕಳ ಮೇಲೆ ಅಧಿಕ ಪರಿಣಾಮವನ್ನು ಬೀರುತ್ತದೆ. ಕೌಟುಂಬಿಕ ಕಲಹದಿಂದಾಗಿ ಹೆಚ್ಚಿನ ತಾಯಿಂದಿರು ತಮ್ಮ ಮಕ್ಕಳ ಬೇಕು-ಬೇಡಗಳ ಕಡೆ ಗಮನ ಕೊಡಲು ಮರೆತು ಬಿಡುತ್ತಾರೆ. ಇದರಿಂದ ಮಕ್ಕಳ ಮೇಲೆ ಪ್ರಭಾವ ಮಾತ್ರ ತುಂಬಾ ಕೆಟ್ಟದ್ದು. ಮಕ್ಕಳು ತುಂಬಾ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಇದು ಅವರ ಮುಂದಿನ ಬದುಕಿನ ಮೇಲೆ ಕೆಟ್ಟ ಪ್ರಭಾವ ಬೀರುವುದು.

ಚಿಕ್ಕ ಪ್ರಾಯದಲ್ಲಿ ಮಾನಸಿಕ ಒತ್ತಡ ಅನುಭವಿಸಿದರೆ ಬೆಳೆದಂತೆ ಮಾನಸಿಕ ನೋವಿನ ಜೊತೆ ದೈಹಿಕ ನೋವುಗಳು ಕಂಡು ಬರುವುದು. ಕೆಲವರಿಗೆ ಸ್ಟ್ರೋಕ್ ಬರುವ ಸಾಧ್ಯತೆ ಕೂಡ ಇದೆ. ಸ್ನಾಯು ಸೆಳೆತ ಕಂಡು ಬರುವುದು. ಯಾವುದೇ ಔಷಧಿಗಳು ಈ ನೋವನ್ನು ಕಡಿಮೆ ಮಾಡುವಲ್ಲಿ ವಿಫಲವಾಗುತ್ತವೆ. ಆ ವ್ಯಕ್ತಿ ಬದುಕಿದ್ದಷ್ಟು ಕಾಲ ನೋವನ್ನು ಅನುಭವಿಸಬೇಕಾಗುವುದು ಅನ್ನುವ ಅಂಶ ಅಧ್ಯಯನದಿಂದ ಬೆಳಕಿಗೆ ಬಂದಿದೆ.
ಮಾನಸಿಕ ಒತ್ತಡವು ಹಾರ್ಮೋನ್ ಗಳಲ್ಲಿ ಅಸಮತೋಲನವನ್ನು ಉಂಟು ಮಾಡುತ್ತದೆ. ಇದರಿಂಂದಾಗಿ ಉರಿಯೂತದ ಸಮಸ್ಯೆ, ಮೈ ಕೈ ನೋವು ಕಂಡು ಬರುವುದು. ಅಲ್ಲದೆ ಮಕ್ಕಳಲ್ಲಿ ಆತ್ಮವಿಶ್ವಾಸ ಕಮ್ಮಿಯಾಗುವ ಸಾಧ್ಯತೆ ಕೂಡ ಇದೆ.
ಬರೀ ಕೌಟುಂಬಿಕ ಜಗಳದಿಂದ ಮಾತ್ರವಲ್ಲ, ಕೆಲವೊಮ್ಮೆ ಪೋಷಕರು ಮತ್ತಿತರ ಕಾರಣಕ್ಕೆ ತುಂಬಾ ಒತ್ತಡ ಹಾಕುತ್ತಾರೆ. ನಿಮ್ಮ ಮಕ್ಕಳಿಗೆ ಮಾನಸಿಕ ಒತ್ತಡವನ್ನು ಹಾಕಬೇಡಿ. ಕೆಲ ಪೋಷಕರು ತಮ್ಮ ಮಕ್ಕಳಿಗೆ ಓದಿನ ವಿಷಯದಲ್ಲಿ ತುಂಬಾ ಮಾನಸಿಕ ಒತ್ತಡ ಹಾಕುತ್ತಾರೆ. ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಬರದಿದ್ದರೆ ಹೊಡೆಯುವುದು, ಬೈಯ್ಯುವುದು ಮಾಡುತ್ತಾರೆ. ಇವೆಲ್ಲಾ ಮಕ್ಕಳ ಮನಸ್ಸಿನ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ.
ಮಕ್ಕಳಿಗೆ ಓದು ಎಂದು ಜೋರು ಮಾಡಿ ಹೇಳುವ ಬದಲು ನಯವಾಗಿ, ಉಪಾಯವಾಗಿ ಹೇಳಿ, ಆಗ ಮಕ್ಕಳು ಓದಿನ ಕಡೆ ಗಮನ ಹರಿಸಲು ಪ್ರಾರಂಭಿಸುತ್ತಾರೆ.
ಮಕ್ಕಳು ಮಾನಸಿಕ ಒತ್ತಡದಿಂದ ಮುಕ್ತರಾಗಲಿ, ಉತ್ತಮ ಬದುಕು ಕಾಣಲಿ.



Click it and Unblock the Notifications