Latest Updates
-
ಮಳೆಗಾಲದ ಪ್ರಯಾಣ: ಟ್ರಾಫಿಕ್ ಮತ್ತು ಕ್ಯಾಬ್ ಸಮಸ್ಯೆಗಳ ನಡುವೆ ದಂಪತಿಗಳು ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ಇಂದಿನ ಪರಿಷ್ಕೃತ ಪಟ್ಟಿ ಮತ್ತು ನಿಮ್ಮ ಪ್ರಕರಣದ ಸ್ಥಿತಿ ಪರಿಶೀಲಿಸಿ -
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ!
ಬಾಲ್ಯದಲ್ಲಿಯೇ ಮಾನಸಿಕ ಒತ್ತಡ, ತರುವುದು ಅಪಾಯ
ಚಿಕ್ಕ ಪ್ರಾಯದಲ್ಲಿಯೇ ಅಧಿಕ ಮಾನಸಿಕ ಒತ್ತಡಕ್ಕೆ ಒಳಗಾದ ಮಕ್ಕಳು ದೊಡ್ಡವರಾದಾಗ ಗುಣ ಪಡಿಸಲಾಗದ ಮಾನಸಿಕ ಮತ್ತು ದೈಹಿಕ ನೋವನ್ನು ಅನುಭವಿಸುತ್ತಾರೆ ಅನ್ನುವುದು ಕ್ಯಾಲಿಫೋನಿರ್ಯಾ ಯೂನಿವರ್ಸಿಟಿಯಲ್ಲಿ ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ.
ಕೌಟುಂಬಿಕ ಕಲಹಗಳು, ವಿಚ್ಛೇದನ ಇವೆಲ್ಲವೂ ಮಕ್ಕಳ ಮೇಲೆ ಅಧಿಕ ಪರಿಣಾಮವನ್ನು ಬೀರುತ್ತದೆ. ಕೌಟುಂಬಿಕ ಕಲಹದಿಂದಾಗಿ ಹೆಚ್ಚಿನ ತಾಯಿಂದಿರು ತಮ್ಮ ಮಕ್ಕಳ ಬೇಕು-ಬೇಡಗಳ ಕಡೆ ಗಮನ ಕೊಡಲು ಮರೆತು ಬಿಡುತ್ತಾರೆ. ಇದರಿಂದ ಮಕ್ಕಳ ಮೇಲೆ ಪ್ರಭಾವ ಮಾತ್ರ ತುಂಬಾ ಕೆಟ್ಟದ್ದು. ಮಕ್ಕಳು ತುಂಬಾ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಇದು ಅವರ ಮುಂದಿನ ಬದುಕಿನ ಮೇಲೆ ಕೆಟ್ಟ ಪ್ರಭಾವ ಬೀರುವುದು.

ಚಿಕ್ಕ ಪ್ರಾಯದಲ್ಲಿ ಮಾನಸಿಕ ಒತ್ತಡ ಅನುಭವಿಸಿದರೆ ಬೆಳೆದಂತೆ ಮಾನಸಿಕ ನೋವಿನ ಜೊತೆ ದೈಹಿಕ ನೋವುಗಳು ಕಂಡು ಬರುವುದು. ಕೆಲವರಿಗೆ ಸ್ಟ್ರೋಕ್ ಬರುವ ಸಾಧ್ಯತೆ ಕೂಡ ಇದೆ. ಸ್ನಾಯು ಸೆಳೆತ ಕಂಡು ಬರುವುದು. ಯಾವುದೇ ಔಷಧಿಗಳು ಈ ನೋವನ್ನು ಕಡಿಮೆ ಮಾಡುವಲ್ಲಿ ವಿಫಲವಾಗುತ್ತವೆ. ಆ ವ್ಯಕ್ತಿ ಬದುಕಿದ್ದಷ್ಟು ಕಾಲ ನೋವನ್ನು ಅನುಭವಿಸಬೇಕಾಗುವುದು ಅನ್ನುವ ಅಂಶ ಅಧ್ಯಯನದಿಂದ ಬೆಳಕಿಗೆ ಬಂದಿದೆ.
ಮಾನಸಿಕ ಒತ್ತಡವು ಹಾರ್ಮೋನ್ ಗಳಲ್ಲಿ ಅಸಮತೋಲನವನ್ನು ಉಂಟು ಮಾಡುತ್ತದೆ. ಇದರಿಂಂದಾಗಿ ಉರಿಯೂತದ ಸಮಸ್ಯೆ, ಮೈ ಕೈ ನೋವು ಕಂಡು ಬರುವುದು. ಅಲ್ಲದೆ ಮಕ್ಕಳಲ್ಲಿ ಆತ್ಮವಿಶ್ವಾಸ ಕಮ್ಮಿಯಾಗುವ ಸಾಧ್ಯತೆ ಕೂಡ ಇದೆ.
ಬರೀ ಕೌಟುಂಬಿಕ ಜಗಳದಿಂದ ಮಾತ್ರವಲ್ಲ, ಕೆಲವೊಮ್ಮೆ ಪೋಷಕರು ಮತ್ತಿತರ ಕಾರಣಕ್ಕೆ ತುಂಬಾ ಒತ್ತಡ ಹಾಕುತ್ತಾರೆ. ನಿಮ್ಮ ಮಕ್ಕಳಿಗೆ ಮಾನಸಿಕ ಒತ್ತಡವನ್ನು ಹಾಕಬೇಡಿ. ಕೆಲ ಪೋಷಕರು ತಮ್ಮ ಮಕ್ಕಳಿಗೆ ಓದಿನ ವಿಷಯದಲ್ಲಿ ತುಂಬಾ ಮಾನಸಿಕ ಒತ್ತಡ ಹಾಕುತ್ತಾರೆ. ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಬರದಿದ್ದರೆ ಹೊಡೆಯುವುದು, ಬೈಯ್ಯುವುದು ಮಾಡುತ್ತಾರೆ. ಇವೆಲ್ಲಾ ಮಕ್ಕಳ ಮನಸ್ಸಿನ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ.
ಮಕ್ಕಳಿಗೆ ಓದು ಎಂದು ಜೋರು ಮಾಡಿ ಹೇಳುವ ಬದಲು ನಯವಾಗಿ, ಉಪಾಯವಾಗಿ ಹೇಳಿ, ಆಗ ಮಕ್ಕಳು ಓದಿನ ಕಡೆ ಗಮನ ಹರಿಸಲು ಪ್ರಾರಂಭಿಸುತ್ತಾರೆ.
ಮಕ್ಕಳು ಮಾನಸಿಕ ಒತ್ತಡದಿಂದ ಮುಕ್ತರಾಗಲಿ, ಉತ್ತಮ ಬದುಕು ಕಾಣಲಿ.



Click it and Unblock the Notifications