Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
ಮಕ್ಕಳ ಆರೋಗ್ಯಕ್ಕೆ 'ಪಪ್ಪಾಯಿ ಹಣ್ಣು' ಬಹಳ ಒಳ್ಳೆಯದು...
ಮಗು ಒಂದರಿಂದ ಒಂದುವರೆ ವರ್ಷ ದಾಟಿದ ಬಳಿಕ ಅದಕ್ಕೆ ಸರಿಯಾಗಿ ಹಣ್ಣಾಗಿರುವ ಪಪ್ಪಾಯಿ ತುಂಡುಗಳನ್ನು ಸೇವಿಸಲು ನೀಡಬೇಕು, ಆದರೂ ಮಗುವಿಗೆ ಪಪ್ಪಾಯಿ ನೀಡುವ ಮೊದಲು ವೈದ್ಯರ ಸಲಹೆ ಪಡೆದುಕೊಂಡರೆ ಒಳ್ಳೆಯದು. ...
ಮಕ್ಕಳಿಗೆ ತಾಯಿಯ ಹಾಲು ಅತೀ ಅಗತ್ಯವಾಗಿ ಬೇಕೇಬೇಕು. ಆರು ತಿಂಗಳ ನಂತರ ಮಕ್ಕಳಿಗೆ ತಾಯಿ ಹಾಲಿನೊಂದಿಗೆ ಸ್ವಲ್ಪ ಘನ ಆಹಾರವನ್ನು ನೀಡುತ್ತಾ ಬರಬೇಕು. ಅದರಲ್ಲೂ ಮುಖ್ಯವಾಗಿ ತರಕಾರಿ ಹಾಗೂ ಹಣ್ಣುಗಳನ್ನು ನೀಡಿದರೆ ಮಕ್ಕಳ ಬೆಳವಣಿಗೆಗೆ ಇದು ಪೂರಕ. ಮಗು ಒಂದರಿಂದ ಒಂದುವರೆ ವರ್ಷ ದಾಟಿದ ಬಳಿಕ ಅದಕ್ಕೆ ಸರಿಯಾಗಿ ಹಣ್ಣಾಗಿರುವ ಪಪ್ಪಾಯಿ ತುಂಡುಗಳನ್ನು (ಪರಂಗಿ ಹಣ್ಣು) ನೀಡಬೇಕು. ಸರ್ವಗುಣ ಸಂಪನ್ನ ಪಪ್ಪಾಯಿ ಹಣ್ಣಿನ ಮೂಲ ಅರಿಯಿರಿ
ಮಗು ಪಪ್ಪಾಯಿಯನ್ನು ಸರಿಯಾಗಿ ತಿನ್ನುತ್ತಾ ಇದೆಯಾ ಎಂದು ತಿಳಿದುಕೊಂಡು ಮುಂದೆ ಅದಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಇದನ್ನು ತಿನ್ನಿಸಬೇಕು. ಮೊದಲು ಮಗು ಪಪ್ಪಾಯಿ ಹಣ್ಣನ್ನು ಸರಿಯಾಗಿ ತಿನ್ನುತ್ತಿದಿಯಾ ಎಂಬುದನ್ನು ತಿಳಿಯಿರಿ. ಮಗುವಿನಿಂದ ಭಿನ್ನ ಪ್ರತಿಕ್ರಿಯೆ ಬರುತ್ತಾ ಇದ್ದರೆ ತಕ್ಷಣ ಇದನ್ನು ನಿಲ್ಲಿಸಿ. ಮಗುವಿಗೆ ಪಪ್ಪಾಯಿ ನೀಡುವ ಮೊದಲು ವೈದ್ಯರ ಸಲಹೆ ಪಡೆದುಕೊಂಡರೆ ಒಳ್ಳೆಯದು. ಹಣ್ಣಾದ ಪಪ್ಪಾಯಿ ನೀಡುವುದರಿಂದ ಯಾವೆಲ್ಲಾ ಲಾಭಗಳು ಆಗಲಿದೆ ಎಂದು ತಿಳಿಯಿರಿ.....

ಜೀರ್ಣಕ್ರಿಯೆ
ಸಣ್ಣ ಮಟ್ಟದ ಪಪ್ಪಾಯಿಯನ್ನು ಮಕ್ಕಳಿಗೆ ನೀಡುವುದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು.

ಪ್ರತಿರೋಧಕ ಶಕ್ತಿ
ಇದರಲ್ಲಿ ವಿಟಮಿನ್ ಸಿ ಇರುವುದರಿಂದ ಮಗುವಿನ ದೇಹದ ಪ್ರತಿರೋಧಕ ಶಕ್ತಿಯು ಹೆಚ್ಚಾಗುವುದು. ಇದರಿಂದ ಹಲವಾರು ರೀತಿಯ ಸೋಂಕನ್ನು ನಿವಾರಿಸಬಹುದು.

ಮೈಮೇಲೆ ಬೀಳುವ ಗುಳ್ಳೆಗಳಿಗೆ.....
ಮಗುವಿನ ಮೈಮೇಲೆ ಬೀಳುವ ಗುಳ್ಳೆ, ಕಜ್ಜಿಗಳ ನಿವಾರಣೆಗೆ ಪಪ್ಪಾಯಿಯನ್ನು ನೇರವಾಗಿ ಚರ್ಮಕ್ಕೆ ಹಚ್ಚಬಹುದು. ಚರ್ಮದಲ್ಲಿ ಆಗಿಗುವ ಕಚ್ಚಿಯಿಂದ ಮಗುವಿಗೆ ಉರಿ ಅಥವಾ ಕೆರೆತ ಕಾಣಿಸಿಕೊಳ್ಳುತ್ತಾ ಇದ್ದರೆ ಪಪ್ಪಾಯಿ ಪೇಸ್ಟ್ ಹಚ್ಚಿಕೊಳ್ಳಿ.

ಮಲಬದ್ಧತೆ
ಮಗು ಸರಿಯಾಗಿ ಮಲ ವಿಸರ್ಜನೆ ಮಾಡುತ್ತಿಲ್ಲವೆಂದಾದರೆ ಆಗ ಮಗುವಿಗೆ ದಿನದಲ್ಲಿ ಎರಡು ಸಲ ಪಪ್ಪಾಯಿ ಪೇಸ್ಟ್ ತಿನ್ನಿಸಿ. ಇದು ಮಲಬದ್ಧತೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಲ್ಲಿ ಕಾಣಿಸುವ ಮಲಬದ್ಧತೆಗೆ ಒಂದಿಷ್ಟು ಸರಳ ಪರಿಹಾರ

ಕರುಳಿನ ಹುಳಗಳು
ಒಂದು ವರ್ಷಕ್ಕಿಂತ ದೊಡ್ಡ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕರುಳಿನ ಹುಳು ಸಮಸ್ಯೆ ನಿವಾರಣೆಗೆ ಪಪ್ಪಾಯಿಯನ್ನು ಬಳಸಬಹುದು. ಪಪ್ಪಾಯಿ ಬೀಜದ ಹುಡಿಯನ್ನು ಜೇನುತುಪ್ಪದೊಂದಿಗೆ ಕೆಲವು ದಿನಗಳ ಕಾಲ ಸೇವಿಸಿದರೆ ಇದರಿಂದ ಕರುಳಿನ ಹುಳುಗಳು ಕಡಿಮೆಯಾಗುವುದು.



Click it and Unblock the Notifications