Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಮಕ್ಕಳ ಆರೋಗ್ಯಕ್ಕೆ 'ಪಪ್ಪಾಯಿ ಹಣ್ಣು' ಬಹಳ ಒಳ್ಳೆಯದು...
ಮಗು ಒಂದರಿಂದ ಒಂದುವರೆ ವರ್ಷ ದಾಟಿದ ಬಳಿಕ ಅದಕ್ಕೆ ಸರಿಯಾಗಿ ಹಣ್ಣಾಗಿರುವ ಪಪ್ಪಾಯಿ ತುಂಡುಗಳನ್ನು ಸೇವಿಸಲು ನೀಡಬೇಕು, ಆದರೂ ಮಗುವಿಗೆ ಪಪ್ಪಾಯಿ ನೀಡುವ ಮೊದಲು ವೈದ್ಯರ ಸಲಹೆ ಪಡೆದುಕೊಂಡರೆ ಒಳ್ಳೆಯದು. ...
ಮಕ್ಕಳಿಗೆ ತಾಯಿಯ ಹಾಲು ಅತೀ ಅಗತ್ಯವಾಗಿ ಬೇಕೇಬೇಕು. ಆರು ತಿಂಗಳ ನಂತರ ಮಕ್ಕಳಿಗೆ ತಾಯಿ ಹಾಲಿನೊಂದಿಗೆ ಸ್ವಲ್ಪ ಘನ ಆಹಾರವನ್ನು ನೀಡುತ್ತಾ ಬರಬೇಕು. ಅದರಲ್ಲೂ ಮುಖ್ಯವಾಗಿ ತರಕಾರಿ ಹಾಗೂ ಹಣ್ಣುಗಳನ್ನು ನೀಡಿದರೆ ಮಕ್ಕಳ ಬೆಳವಣಿಗೆಗೆ ಇದು ಪೂರಕ. ಮಗು ಒಂದರಿಂದ ಒಂದುವರೆ ವರ್ಷ ದಾಟಿದ ಬಳಿಕ ಅದಕ್ಕೆ ಸರಿಯಾಗಿ ಹಣ್ಣಾಗಿರುವ ಪಪ್ಪಾಯಿ ತುಂಡುಗಳನ್ನು (ಪರಂಗಿ ಹಣ್ಣು) ನೀಡಬೇಕು. ಸರ್ವಗುಣ ಸಂಪನ್ನ ಪಪ್ಪಾಯಿ ಹಣ್ಣಿನ ಮೂಲ ಅರಿಯಿರಿ
ಮಗು ಪಪ್ಪಾಯಿಯನ್ನು ಸರಿಯಾಗಿ ತಿನ್ನುತ್ತಾ ಇದೆಯಾ ಎಂದು ತಿಳಿದುಕೊಂಡು ಮುಂದೆ ಅದಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಇದನ್ನು ತಿನ್ನಿಸಬೇಕು. ಮೊದಲು ಮಗು ಪಪ್ಪಾಯಿ ಹಣ್ಣನ್ನು ಸರಿಯಾಗಿ ತಿನ್ನುತ್ತಿದಿಯಾ ಎಂಬುದನ್ನು ತಿಳಿಯಿರಿ. ಮಗುವಿನಿಂದ ಭಿನ್ನ ಪ್ರತಿಕ್ರಿಯೆ ಬರುತ್ತಾ ಇದ್ದರೆ ತಕ್ಷಣ ಇದನ್ನು ನಿಲ್ಲಿಸಿ. ಮಗುವಿಗೆ ಪಪ್ಪಾಯಿ ನೀಡುವ ಮೊದಲು ವೈದ್ಯರ ಸಲಹೆ ಪಡೆದುಕೊಂಡರೆ ಒಳ್ಳೆಯದು. ಹಣ್ಣಾದ ಪಪ್ಪಾಯಿ ನೀಡುವುದರಿಂದ ಯಾವೆಲ್ಲಾ ಲಾಭಗಳು ಆಗಲಿದೆ ಎಂದು ತಿಳಿಯಿರಿ.....

ಜೀರ್ಣಕ್ರಿಯೆ
ಸಣ್ಣ ಮಟ್ಟದ ಪಪ್ಪಾಯಿಯನ್ನು ಮಕ್ಕಳಿಗೆ ನೀಡುವುದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು.

ಪ್ರತಿರೋಧಕ ಶಕ್ತಿ
ಇದರಲ್ಲಿ ವಿಟಮಿನ್ ಸಿ ಇರುವುದರಿಂದ ಮಗುವಿನ ದೇಹದ ಪ್ರತಿರೋಧಕ ಶಕ್ತಿಯು ಹೆಚ್ಚಾಗುವುದು. ಇದರಿಂದ ಹಲವಾರು ರೀತಿಯ ಸೋಂಕನ್ನು ನಿವಾರಿಸಬಹುದು.

ಮೈಮೇಲೆ ಬೀಳುವ ಗುಳ್ಳೆಗಳಿಗೆ.....
ಮಗುವಿನ ಮೈಮೇಲೆ ಬೀಳುವ ಗುಳ್ಳೆ, ಕಜ್ಜಿಗಳ ನಿವಾರಣೆಗೆ ಪಪ್ಪಾಯಿಯನ್ನು ನೇರವಾಗಿ ಚರ್ಮಕ್ಕೆ ಹಚ್ಚಬಹುದು. ಚರ್ಮದಲ್ಲಿ ಆಗಿಗುವ ಕಚ್ಚಿಯಿಂದ ಮಗುವಿಗೆ ಉರಿ ಅಥವಾ ಕೆರೆತ ಕಾಣಿಸಿಕೊಳ್ಳುತ್ತಾ ಇದ್ದರೆ ಪಪ್ಪಾಯಿ ಪೇಸ್ಟ್ ಹಚ್ಚಿಕೊಳ್ಳಿ.

ಮಲಬದ್ಧತೆ
ಮಗು ಸರಿಯಾಗಿ ಮಲ ವಿಸರ್ಜನೆ ಮಾಡುತ್ತಿಲ್ಲವೆಂದಾದರೆ ಆಗ ಮಗುವಿಗೆ ದಿನದಲ್ಲಿ ಎರಡು ಸಲ ಪಪ್ಪಾಯಿ ಪೇಸ್ಟ್ ತಿನ್ನಿಸಿ. ಇದು ಮಲಬದ್ಧತೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಲ್ಲಿ ಕಾಣಿಸುವ ಮಲಬದ್ಧತೆಗೆ ಒಂದಿಷ್ಟು ಸರಳ ಪರಿಹಾರ

ಕರುಳಿನ ಹುಳಗಳು
ಒಂದು ವರ್ಷಕ್ಕಿಂತ ದೊಡ್ಡ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕರುಳಿನ ಹುಳು ಸಮಸ್ಯೆ ನಿವಾರಣೆಗೆ ಪಪ್ಪಾಯಿಯನ್ನು ಬಳಸಬಹುದು. ಪಪ್ಪಾಯಿ ಬೀಜದ ಹುಡಿಯನ್ನು ಜೇನುತುಪ್ಪದೊಂದಿಗೆ ಕೆಲವು ದಿನಗಳ ಕಾಲ ಸೇವಿಸಿದರೆ ಇದರಿಂದ ಕರುಳಿನ ಹುಳುಗಳು ಕಡಿಮೆಯಾಗುವುದು.



Click it and Unblock the Notifications