Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ, ನೋವು ಕೊಡಬೇಡಿ...
ಮಕ್ಕಳು ದೇವರಿಗೆ ಸಮಾನ ಎಂಬ ಮಾತಿದೆ. ಅವರ ಆಟ ಪಾಠ ಹಾವ ಭಾವ ಹೀಗೆ ಪ್ರತಿಯೊಂದೂ ಕಣ್ಣಿಗೆ ಆನಂದ ನೀಡುವ ಸಂಗತಿಗಳೇ. ಮಕ್ಕಳು ಬಾಲ್ಯದಲ್ಲಿ ತಮ್ಮ ಪೋಷಕರ ಒಡನಾಟವನ್ನು ಹೆಚ್ಚು ಹಚ್ಚಿಕೊಳ್ಳುವುದರಿಂದ ತಂದೆ ತಾಯಿ ತಮ್ಮೊಡನೇ ಇರಬೇಕು ಅವರೊಂದಿಗೆ ಹೆಚ್ಚುವರಿ ಸಮಯವನ್ನು ಕಳೆಯಬೇಕು ಎಂಬ ಇಂಗಿತ ಅವರಲ್ಲಿರುತ್ತದೆ. ಸಂಜೆಯ ಸಮಯದಲ್ಲಿ ತಮ್ಮೊಂದಿಗೆ ಆಟವಾಡುವುದು, ತಮ್ಮನ್ನು ಪಾರ್ಕ್ಗೆ ಕರೆದೊಯ್ಯುವುದು, ಶಾಲಾ ಚಟುವಟಿಕೆಗಳಲ್ಲಿ ತಮ್ಮ ಸಾಧನೆಯನ್ನು ನೋಡಿ ಹೆತ್ತವರು ಖುಷಿಪಡಬೇಕು ಎಂಬುದಾಗಿ ಮಕ್ಕಳು ಭಾವಿಸುತ್ತಾರೆ.

ಆದರೆ ಮುಂಚಿನ ದಿನಗಳಲ್ಲಿ ತಂದೆ ತಾಯಿಯರು ತಮ್ಮ ಮಕ್ಕಳಿಗೆ ನೀಡುತ್ತಿದ್ದ ಕಾಳಜಿ ಸಮಯ ಈಗ ಇಲ್ಲವಾಗಿದೆ. ಪೋಷಕರಿಬ್ಬರೂ ದುಡಿಯುವುದರ ಕಡೆಗೆ ಗಮನ ನೀಡುವುದರಿಂದ ಮಕ್ಕಳ ಕಡೆಗೆ ಸಾಕಷ್ಟು ಗಮನ ನೀಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರ ಆಟಪಾಠಗಳನ್ನು ಕಣ್ತುಂಬಿಕೊಳ್ಳಲು ಈಗ ಅವರಲ್ಲಿ ಸಮಯವೇ ಇಲ್ಲ. ಇದರಿಂದ ಹೂವಿನಂತಹ ಮಕ್ಕಳ ಹೃದಯಕ್ಕೆ ಬರೆ ಎಳೆದಂತಾಗುತ್ತದೆ. ಅವರುಗಳು ಕೀಳರಿಮೆಯಿಂದ ಬಳಲುತ್ತಾರೆ. ತಾವು ಏಕಾಂಗಿಯೆಂಬ ಭಾವನೆಯಿಂದ ತತ್ತರಿಸಿ ಹೋಗುತ್ತಾರೆ. ಹೂವಿನಂತಹ ಆ ಮೃದು ಮನಸ್ಸಿಗೆ ಒಂದು ಸ್ವಲ್ಪ ವೇದನೆಯಾದರೂ ಅದು ಮಾಸಲಾಗದೇ ಇರುವ ಕಲೆಯಾಗಿ ಅಚ್ಚೊತ್ತದೆ.
ಇಂದಿನ ಲೇಖನದಲ್ಲಿ ಮಕ್ಕಳು ಪೋಷಕರ ಪಾಲನೆಯನ್ನು ಪಡೆದುಕೊಳ್ಳದೇ ಬೆಳೆದಾಗ ಏನು ಸಂಭವಿಸುತ್ತದೆ ಎಂಬುದನ್ನು ನಾವು ನಿಮಗೆ ವಿಷದವಾಗಿ ತಿಳಿಸಲಿದ್ದು ನಿಮ್ಮ ಮಕ್ಕಳ ಪಾಲನೆ ಪೋಷಣೆಯಲ್ಲಿ ನಿಮ್ಮ ಪಾತ್ರವೇನು ಎಂಬುದನ್ನು ತಿಳಿಸಿಕೊಡಲಿದೆ. ಅಂತೆಯೇ ನಿಮ್ಮ ಮಗು ಈ ಕೆಳಗಿನ ಗುಣಗಳನ್ನು ಹೊಂದಿದೆ ಎಂದಾದಲ್ಲಿ ನೀವು ಆ ಮಗುವಿಗೆ ಸಾಕಷ್ಟು ಕಾಳಜಿ ಪ್ರಾಧಾನ್ಯತೆ ನೀಡುತ್ತಿಲ್ಲ ಎಂದೇ ಅರ್ಥವಾಗಿದೆ.
ಒಂಟಿ ಭಾವನೆ
ಪೋಷಕರು ತಮ್ಮದೇ ಕೆಲಸದಲ್ಲಿ ನಿರತರಾದಾಗ ಮಕ್ಕಳು ಒಬ್ಬಂಟಿಗರಾಗಿ ಬಿಡುತ್ತಾರೆ. ಈ ಒಂಟಿತನ ಅವರಿಗೆ ಸಾಕಷ್ಟು ನೋವನ್ನು ಉಂಟುಮಾಡುತ್ತದೆ ಮತ್ತು ಇದರಿಂದ ಖಿನ್ನತೆ ಅವರಲ್ಲಿ ಉಂಟಾಗುತ್ತದೆ.
ಪ್ರೀತಿಯೇ ಅವರಿಗೆ ದೊರೆಯುವುದಿಲ್ಲ
ಅವರ ಭಾವನೆಗಳಿಗೆ ಸ್ಪಂದಿಸುವವರು ಇಲ್ಲದಾದಾಗ, ಪೋಷಕರು ವಿರಳವಾಗಿ ಮಕ್ಕಳಗೊಂದಿಗೆ ಸಮಯ ಕಳೆಯುವಾಗ ಅವರಿಗೆ ಅದರಲ್ಲಿ ಆಸಕ್ತಿ ಇಲ್ಲವಾಗುತ್ತದೆ ಮತ್ತು ಅಸಡ್ಡೆಯನ್ನು ತೋರ್ಪಡಿಸುತ್ತಾರೆ.
ವ್ಯಗ್ರರಾಗುವುದು
ಪ್ರೀತಿ ದೊರೆಯದೇ ಇದ್ದ ಮಕ್ಕಳು ವ್ಯಗ್ರರಾಗುತ್ತಾರೆ. ಒಳಗೆ ಕೋಪವನ್ನು ಇಟ್ಟುಕೊಂಡು ಅದನ್ನು ಇತರ ಮಕ್ಕಳ ಮೇಲೆ ದೊಡ್ಡವರ ಮೇಲೆ ತೋರಿಸಿಕೊಳ್ಳಲು ಆರಂಭಿಸುತ್ತಾರೆ.
ಕೀಳರಿಮೆ
ತಮ್ಮ ಮೇಲೆ ಪ್ರೀತಿ ತೋರಿಸುವವರು ಇಲ್ಲ ನಮ್ಮನ್ನು ಬೆಂಬಲಿಸುವವರು ಇಲ್ಲ ಎಂದಾದಾಗ ಕೀಳರಿಮೆಯನ್ನು ಅವರು ಬೆಳೆಸಿಕೊಳ್ಳುತ್ತಾರೆ ಮತ್ತು ತಮ್ಮ ಆತ್ಮವಿಶ್ವಾಸವನ್ನೇ ಅವರು ಕಳೆದುಕೊಳ್ಳುತ್ತಾರೆ.



Click it and Unblock the Notifications

