Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ, ನೋವು ಕೊಡಬೇಡಿ...
ಮಕ್ಕಳು ದೇವರಿಗೆ ಸಮಾನ ಎಂಬ ಮಾತಿದೆ. ಅವರ ಆಟ ಪಾಠ ಹಾವ ಭಾವ ಹೀಗೆ ಪ್ರತಿಯೊಂದೂ ಕಣ್ಣಿಗೆ ಆನಂದ ನೀಡುವ ಸಂಗತಿಗಳೇ. ಮಕ್ಕಳು ಬಾಲ್ಯದಲ್ಲಿ ತಮ್ಮ ಪೋಷಕರ ಒಡನಾಟವನ್ನು ಹೆಚ್ಚು ಹಚ್ಚಿಕೊಳ್ಳುವುದರಿಂದ ತಂದೆ ತಾಯಿ ತಮ್ಮೊಡನೇ ಇರಬೇಕು ಅವರೊಂದಿಗೆ ಹೆಚ್ಚುವರಿ ಸಮಯವನ್ನು ಕಳೆಯಬೇಕು ಎಂಬ ಇಂಗಿತ ಅವರಲ್ಲಿರುತ್ತದೆ. ಸಂಜೆಯ ಸಮಯದಲ್ಲಿ ತಮ್ಮೊಂದಿಗೆ ಆಟವಾಡುವುದು, ತಮ್ಮನ್ನು ಪಾರ್ಕ್ಗೆ ಕರೆದೊಯ್ಯುವುದು, ಶಾಲಾ ಚಟುವಟಿಕೆಗಳಲ್ಲಿ ತಮ್ಮ ಸಾಧನೆಯನ್ನು ನೋಡಿ ಹೆತ್ತವರು ಖುಷಿಪಡಬೇಕು ಎಂಬುದಾಗಿ ಮಕ್ಕಳು ಭಾವಿಸುತ್ತಾರೆ.

ಆದರೆ ಮುಂಚಿನ ದಿನಗಳಲ್ಲಿ ತಂದೆ ತಾಯಿಯರು ತಮ್ಮ ಮಕ್ಕಳಿಗೆ ನೀಡುತ್ತಿದ್ದ ಕಾಳಜಿ ಸಮಯ ಈಗ ಇಲ್ಲವಾಗಿದೆ. ಪೋಷಕರಿಬ್ಬರೂ ದುಡಿಯುವುದರ ಕಡೆಗೆ ಗಮನ ನೀಡುವುದರಿಂದ ಮಕ್ಕಳ ಕಡೆಗೆ ಸಾಕಷ್ಟು ಗಮನ ನೀಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರ ಆಟಪಾಠಗಳನ್ನು ಕಣ್ತುಂಬಿಕೊಳ್ಳಲು ಈಗ ಅವರಲ್ಲಿ ಸಮಯವೇ ಇಲ್ಲ. ಇದರಿಂದ ಹೂವಿನಂತಹ ಮಕ್ಕಳ ಹೃದಯಕ್ಕೆ ಬರೆ ಎಳೆದಂತಾಗುತ್ತದೆ. ಅವರುಗಳು ಕೀಳರಿಮೆಯಿಂದ ಬಳಲುತ್ತಾರೆ. ತಾವು ಏಕಾಂಗಿಯೆಂಬ ಭಾವನೆಯಿಂದ ತತ್ತರಿಸಿ ಹೋಗುತ್ತಾರೆ. ಹೂವಿನಂತಹ ಆ ಮೃದು ಮನಸ್ಸಿಗೆ ಒಂದು ಸ್ವಲ್ಪ ವೇದನೆಯಾದರೂ ಅದು ಮಾಸಲಾಗದೇ ಇರುವ ಕಲೆಯಾಗಿ ಅಚ್ಚೊತ್ತದೆ.
ಇಂದಿನ ಲೇಖನದಲ್ಲಿ ಮಕ್ಕಳು ಪೋಷಕರ ಪಾಲನೆಯನ್ನು ಪಡೆದುಕೊಳ್ಳದೇ ಬೆಳೆದಾಗ ಏನು ಸಂಭವಿಸುತ್ತದೆ ಎಂಬುದನ್ನು ನಾವು ನಿಮಗೆ ವಿಷದವಾಗಿ ತಿಳಿಸಲಿದ್ದು ನಿಮ್ಮ ಮಕ್ಕಳ ಪಾಲನೆ ಪೋಷಣೆಯಲ್ಲಿ ನಿಮ್ಮ ಪಾತ್ರವೇನು ಎಂಬುದನ್ನು ತಿಳಿಸಿಕೊಡಲಿದೆ. ಅಂತೆಯೇ ನಿಮ್ಮ ಮಗು ಈ ಕೆಳಗಿನ ಗುಣಗಳನ್ನು ಹೊಂದಿದೆ ಎಂದಾದಲ್ಲಿ ನೀವು ಆ ಮಗುವಿಗೆ ಸಾಕಷ್ಟು ಕಾಳಜಿ ಪ್ರಾಧಾನ್ಯತೆ ನೀಡುತ್ತಿಲ್ಲ ಎಂದೇ ಅರ್ಥವಾಗಿದೆ.
ಒಂಟಿ ಭಾವನೆ
ಪೋಷಕರು ತಮ್ಮದೇ ಕೆಲಸದಲ್ಲಿ ನಿರತರಾದಾಗ ಮಕ್ಕಳು ಒಬ್ಬಂಟಿಗರಾಗಿ ಬಿಡುತ್ತಾರೆ. ಈ ಒಂಟಿತನ ಅವರಿಗೆ ಸಾಕಷ್ಟು ನೋವನ್ನು ಉಂಟುಮಾಡುತ್ತದೆ ಮತ್ತು ಇದರಿಂದ ಖಿನ್ನತೆ ಅವರಲ್ಲಿ ಉಂಟಾಗುತ್ತದೆ.
ಪ್ರೀತಿಯೇ ಅವರಿಗೆ ದೊರೆಯುವುದಿಲ್ಲ
ಅವರ ಭಾವನೆಗಳಿಗೆ ಸ್ಪಂದಿಸುವವರು ಇಲ್ಲದಾದಾಗ, ಪೋಷಕರು ವಿರಳವಾಗಿ ಮಕ್ಕಳಗೊಂದಿಗೆ ಸಮಯ ಕಳೆಯುವಾಗ ಅವರಿಗೆ ಅದರಲ್ಲಿ ಆಸಕ್ತಿ ಇಲ್ಲವಾಗುತ್ತದೆ ಮತ್ತು ಅಸಡ್ಡೆಯನ್ನು ತೋರ್ಪಡಿಸುತ್ತಾರೆ.
ವ್ಯಗ್ರರಾಗುವುದು
ಪ್ರೀತಿ ದೊರೆಯದೇ ಇದ್ದ ಮಕ್ಕಳು ವ್ಯಗ್ರರಾಗುತ್ತಾರೆ. ಒಳಗೆ ಕೋಪವನ್ನು ಇಟ್ಟುಕೊಂಡು ಅದನ್ನು ಇತರ ಮಕ್ಕಳ ಮೇಲೆ ದೊಡ್ಡವರ ಮೇಲೆ ತೋರಿಸಿಕೊಳ್ಳಲು ಆರಂಭಿಸುತ್ತಾರೆ.
ಕೀಳರಿಮೆ
ತಮ್ಮ ಮೇಲೆ ಪ್ರೀತಿ ತೋರಿಸುವವರು ಇಲ್ಲ ನಮ್ಮನ್ನು ಬೆಂಬಲಿಸುವವರು ಇಲ್ಲ ಎಂದಾದಾಗ ಕೀಳರಿಮೆಯನ್ನು ಅವರು ಬೆಳೆಸಿಕೊಳ್ಳುತ್ತಾರೆ ಮತ್ತು ತಮ್ಮ ಆತ್ಮವಿಶ್ವಾಸವನ್ನೇ ಅವರು ಕಳೆದುಕೊಳ್ಳುತ್ತಾರೆ.



Click it and Unblock the Notifications

