Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಮಕ್ಕಳ ಮನಸ್ಸು ಹೂವಿನಂತೆ, ಏಕಾಂಗಿತನ ಕಾಡದಿರಲಿ
ಮಕ್ಕಳು ಹೆಚ್ಚು ಚಟುವಟಿಕೆಯಿಂದ ಇದ್ದರೆ ಮಾತ್ರವೇ ಅವರ ಬಾಲ್ಯ ಮಾಸದ ನೆನಪಾಗಿ ಅವರಲ್ಲಿ ಉಳಿಯುತ್ತದೆ. ಈ ಚಟುವಟಿಕೆ ಅವರಲ್ಲಿ ಉಂಟಾಗುವುದು ನೆರೆಹೊರೆಯವರೊಂದಿಗೆ ಅವರ ಕಲೆತು ಬೆರೆತಾಗ ಮಾತ್ರವೇ. ಸುತ್ತಲಿನ ಮಕ್ಕಳಗೊಂದಿಗೆ ನಿತ್ಯದ ಆಟಪಾಠದಲ್ಲಿ ಅವರು ತೊಡಗಿಕೊಂಡಾಗ ಚುರುಕಾಗಿ ತಮ್ಮೊಳಗಿನ ಪ್ರತಿಭೆಯನ್ನು ತಾವೇ ಕಂಡುಕೊಳ್ಳುತ್ತಾರೆ.

ಮಕ್ಕಳು ಇತರೆ ಮಕ್ಕಳೊಂದಿಗೆ ಬೆರೆತಾಗ ಎಲ್ಲವರು ಹಾಳಾಗುತ್ತಾರೋ ಎಂದು ಭಯಪಟ್ಟುಕೊಂಡು ಎಷ್ಟೋ ಹೆತ್ತವರು ಅವರಲ್ಲಿ ಇತರರೊಂದಿಗೆ ಬೆರೆಯಲು ಬಿಡುವುದಿಲ್ಲ. ಇದರಿಂದ ಮಕ್ಕಳ ಮೃದು ಮನಸ್ಸು ಮುದುಡಿ ಹೋಗುತ್ತದೆ. ಸಾಮಾನ್ಯವಾಗಿ ನಮ್ಮ ಸುತ್ತಲೂ ಹೆಚ್ಚು ಜನರಿದ್ದು ಚಟುವಟಿಕೆ ಇದೆ ಎಂದಾದಲ್ಲಿ ನಾವು ಸಂತೋಷವಾಗಿರುತ್ತೇವೆ. ಖಿನ್ನತೆ ನಮ್ಮನ್ನು ಕಾಡುವುದಿಲ್ಲ.
ನಮ್ಮೊಡನೆ ಯಾರೂ ಇಲ್ಲ ಮತ್ತು ನಾವು ಒಬ್ಬಂಟಿಯಾಗಿ ಇದ್ದ ಸಂದರ್ಭದಲ್ಲಿ ನಾವು ಅಂತರ್ಮುಖಿಗಳಾಗುತ್ತೇವೆ ಮತ್ತು ಮನೋವ್ಯಾಧಿ ನಮ್ಮನ್ನು ಕಾಡುತ್ತದೆ. ಮಕ್ಕಳ ವಿಷಯದಲ್ಲೂ ಈ ಅಂಶ ಇನ್ನೂ ಹೆಚ್ಚು ಪ್ರಖರವಾಗಿರುತ್ತದೆ. ಆದಷ್ಟು ನಿಮ್ಮ ಮಕ್ಕಳನ್ನು ನೆರೆಹೊರೆಯವರೊಂದಿಗೆ ಆಡಲು ಬಿಡಿ.
ಮಾರುಕಟ್ಟೆ, ಗಾರ್ಡನ್ ಮೊದಲಾದ ಜನನಿಬಿಡ ಪ್ರದೇಶಗಳ ನಿಮ್ಮ ಮನೆಯ ಹತ್ತಿರ ಇದೆಯೇ ಎಂಬುದನ್ನು ಕಂಡುಕೊಳ್ಳಿ. ದೊಡ್ಡ ದೊಡ್ಡ ನಗರಗಳಲ್ಲಿ ಕೂಡ ಫ್ಲಾಟ್ ಅಪಾರ್ಟ್ಮೆಂಟ್ಗಳು ಇದೇ ರೀತಿಯ ಯೋಜನೆಯನ್ನಿಟ್ಟುಕೊಂಡೇ ಮನೆಗಳನ್ನು ಕಟ್ಟುತ್ತಿವೆ.
ಅಪಾರ್ಟ್ಮೆಂಟ್ ಎದುರುಗಡೆ ದೊಡ್ಡ ಗಾರ್ಡನ್, ಮಕ್ಕಳು ಆಟವಾಡಲು ಬೇಕಾಗಿರುವ ಸ್ಥಳ, ಮಾರುಕಟ್ಟೆ ಅಂತೆಯೇ ಸಾಮಾಜಿಕ ಒಟ್ಟುಗೂಡುವಿಕೆಗೆ ಅವಶ್ಯಕವಾಗಿರುವ ಸೌಲಭ್ಯಗಳನ್ನೇ ನಿರ್ಮಿಸುತ್ತಿವೆ. ಆದ್ದರಿಂದ ಹೊಸ ಮನೆಯನ್ನು ಕಟ್ಟುವ ಸಂದರ್ಭದಲ್ಲಿ ಈ ಎಲ್ಲಾ ಅಂಶಗಳಿಗೆ ನೀವು ಆದ್ಯತೆ ನೀಡಬೇಕಾಗುತ್ತದೆ.
ನಿಮ್ಮ ಮಕ್ಕಳು ಆದಷ್ಟು ಒಬ್ಬಂಟಿಗರಾಗಿ ಇರದಂತೆ ನೀವು ನೋಡಿಕೊಳ್ಳಬೇಕು. ಮಕ್ಕಳ ಮನಸ್ಸು ಹೂವಿನಂತೆ. ಈ ಹೂವಿಗೆ ಕೊಂಚ ಘಾಸಿಯಾದರೂ ಅದನ್ನು ಸರಿಪಡಿಸುವುದು ತುಂಬಾ ಕಷ್ಟ ಎಂಬುದು ನಿಮ್ಮ ನೆನಪಿನಲ್ಲಿರಲಿ.



Click it and Unblock the Notifications



