Latest Updates
-
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ -
ವೀಕೆಂಡ್ ಪ್ಲಾನ್ ಮಾಡಿದ್ದೀರಾ? ಹವಾಮಾನ ವೈಪರೀತ್ಯದ ಎಚ್ಚರಿಕೆ: ನಿಮ್ಮ ಸುರಕ್ಷತೆಗಾಗಿ ಈ ಬದಲಾವಣೆ ಮಾಡಿಕೊಳ್ಳಿ! -
ಮುಂಬೈ ಬಿಸಿಲು ಮತ್ತು ಆರ್ದ್ರತೆ: 15 ನಿಮಿಷದಲ್ಲಿ ನಿಮ್ಮ ಮನೆಯನ್ನು ತಂಪಾಗಿರಿಸುವ ಸರಳ ಉಪಾಯಗಳು! -
ನಿಮ್ಮ ಆಹಾರದ ಪ್ಯಾಕೆಟ್ನಲ್ಲಿ ಸ್ಟೇಪ್ಲರ್ ಪಿನ್ ಇದೆಯೇ? ಎಚ್ಚರ, FSSAI ಕಠಿಣ ಆದೇಶ! -
ಧರ್ಮಶಾಲಾದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಮಳೆ ಆತಂಕದ ನಡುವೆ ಗೆಲ್ಲೋರು ಯಾರು?
ಮಕ್ಕಳ ಆರೋಗ್ಯಕ್ಕೆ 'ಕಲ್ಲಂಗಡಿ ಹಣ್ಣು' ಬಹಳ ಒಳ್ಳೆಯದು...
ಮಕ್ಕಳು ಕಲ್ಲಂಗಡಿ ಹಣ್ಣನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಬರುತ್ತದೆ.ಆದರೆ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಬಾರದು.ಆದರೆ ಎರಡು ವರ್ಷಕ್ಕಿಂತ ಮೇಲಿನ ಮಕ್ಕಳಿಗೆ ಕಲ್ಲಂಗಡಿ ಹಣ್ಣನ್ನು ಸೇವಿಸಬಹುದು..
ಬೇಸಿಗೆಯಲ್ಲಿ ಅತಿಯಾದ ಉಷ್ಣತೆಯನ್ನು ತಡೆಯಲು ಪ್ರಮುಖವಾಗಿ ನಾವು ಆದಷ್ಟು ಮಟ್ಟಿಗೆ ನೀರನ್ನು ಕುಡಿಯಬೇಕು. ನೀರು ಕುಡಿದರೆ ದೇಹದಲ್ಲಿ ನಿರ್ಜಲೀಕರಣದ ಸಮಸ್ಯೆ ಇರದು. ಕೇವಲ ನೀರು ಮಾತ್ರವಲ್ಲ, ನೀರಿನಾಂಶ ಹೆಚ್ಚಿಗೆ ಇರುವಂತಹ ಹಣ್ಣುಗಳನ್ನು ಕೂಡ ತಿನ್ನಬೇಕು.
ಅದರಲ್ಲಿಯೂ ಪ್ರಮುಖವಾಗಿ ಕಲ್ಲಂಗಡಿ ಹಣ್ಣುಗಳನ್ನು ತಿಂದರೆ ಅದರಲ್ಲಿ ಇರುವಂತಹ ಹೆಚ್ಚಿನ ನೀರಿನಾಂಶವು ನಮ್ಮ ದೇಹಕ್ಕೆ ತುಂಬಾನೇ ಉಪಯೋಗಕಾರಿ.
ಆದರೆ ಮಕ್ಕಳು ಕಲ್ಲಂಗಡಿ ಹಣ್ಣನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಬರುತ್ತದೆ. ಆದರೆ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಬಾರದು. ಆದರೆ ಎರಡು ವರ್ಷಕ್ಕಿಂತ ಮೇಲಿನ ಮಕ್ಕಳಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಿದರೆ ಅದರಿಂದ ಆಗುವ ಲಾಭಗಳು ಯಾವುದು ಎಂದು ತಿಳಿಯಿರಿ....

ಎರಡು ವರ್ಷ ದಾಟಿದ ಮಗುವಿಗೆ
ಹೌದು ಎರಡು ವರ್ಷ ದಾಟಿದ ಮಗುವಿಗೆ ಮಾತ್ರ ಕಲ್ಲಂಗಡಿ ಹಣ್ಣನ್ನು ತಿನ್ನಿಸಬೇಕು. ಇದು ಮಗುವಿನ ದೇಹದಲ್ಲಿ ನೀರಿನಾಂಶವನ್ನು ಕಾಪಾಡಲು ನೆರವಾಗುವುದು. ಬೇಸಿಗೆ ಕಾಲದಲ್ಲಿ ಮಗುವನ್ನು ನಿರ್ಜಲೀಕರಣದಿಂದ ಕಾಪಾಡುವುದು.

ವಿಟಮಿನ್ ಎ
ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಬೆಟಾಕ್ಯಾರೋಟಿನ್ ಸಮೃದ್ಧವಾಗಿದೆ..ಹಾಗಾಗಿ ಮಕ್ಕಳು ಕಲ್ಲಂಗಡಿ ಹಣ್ಣು ಸೇವಿಸುವುದರಿಂದ ಆರೋಗ್ಯಕರ ಚರ್ಮ, ಒಳ್ಳೆಯ ದೃಷ್ಟಿ ಮತ್ತು ಹಲ್ಲುಗಳಿಗೆ ಇದು ಅತ್ಯಗತ್ಯ.

ದೃಷ್ಟಿಯ-ಹೃದಯದ ಸಮಸ್ಯೆಗೆ ರಾಮಬಾಣ
ಕಲ್ಲಂಗಡಿಯಲ್ಲಿ ಇರುವಂತಹ ಪೋಷಕಾಂಶಗಳು ದೃಷ್ಟಿಯ ಸಮಸ್ಯೆ, ಹೃದಯದ ಸಮಸ್ಯೆ ಮತ್ತು ಇತರ ಕೆಲವೊಂದು ಸಮಸ್ಯೆಗಳನ್ನು ನಿವಾರಣೆ ಮಾಡಲು ಸಹಕಾರಿ.

ಮೂಳೆಯ ಬೆಳವಣಿಗೆಗೆ
ಮಕ್ಕಳ ಮೂಳೆಯ ಬೆಳವಣಿಗೆಗೆ ಕ್ಯಾಲ್ಸಿಯಂ ಮತ್ತು ಸ್ನಾಯುಗಳ ಬೆಳವಣಿಗೆ ಮತ್ತು ನರಗಳ ಕಾರ್ಯಚಟುವಟಿಕೆಗೆ ಮೆಗ್ನಿಶಿಯಂ ಬೇಕಾಗಿದೆ. ಕಲ್ಲಂಗಡಿಯಲ್ಲಿ ಈ ಎರಡೂ ಖನಿಜಾಂಶಗಳು ಇದೆ.

ವಿಟಮಿನ್ ಬಿ6
ಕಲ್ಲಂಗಡಿಯಲ್ಲಿ ವಿಟಮಿನ್ ಬಿ6, ನಿಯಾಸಿನ್, ರಿಬೊಫ್ಲಾವಿನ್ ಮತ್ತು ಥೈಮೆನ್ ಎನ್ನುವ ವಿಟಮಿನ್ ಗಳಿವೆ. ಮಕ್ಕಳ ಬೆಳವಣಿಗೆಗೆ ಈ ವಿಟಮಿನ್ಗಳು ಅತೀ ಅಗತ್ಯ.

ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ
ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹವು ಕಬ್ಬಿನಾಂಶವನ್ನು ಬೇಗನೆ ಹೀರಿಕೊಳ್ಳಲು ನೆರವಾಗುವುದು. ಇದು ಮಕ್ಕಳಿಗೆ ತುಂಬಾ ಒಳ್ಳೆಯದು.



Click it and Unblock the Notifications