Latest Updates
-
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ!
ಮಕ್ಕಳ ಆರೋಗ್ಯಕ್ಕೆ 'ಕಲ್ಲಂಗಡಿ ಹಣ್ಣು' ಬಹಳ ಒಳ್ಳೆಯದು...
ಮಕ್ಕಳು ಕಲ್ಲಂಗಡಿ ಹಣ್ಣನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಬರುತ್ತದೆ.ಆದರೆ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಬಾರದು.ಆದರೆ ಎರಡು ವರ್ಷಕ್ಕಿಂತ ಮೇಲಿನ ಮಕ್ಕಳಿಗೆ ಕಲ್ಲಂಗಡಿ ಹಣ್ಣನ್ನು ಸೇವಿಸಬಹುದು..
ಬೇಸಿಗೆಯಲ್ಲಿ ಅತಿಯಾದ ಉಷ್ಣತೆಯನ್ನು ತಡೆಯಲು ಪ್ರಮುಖವಾಗಿ ನಾವು ಆದಷ್ಟು ಮಟ್ಟಿಗೆ ನೀರನ್ನು ಕುಡಿಯಬೇಕು. ನೀರು ಕುಡಿದರೆ ದೇಹದಲ್ಲಿ ನಿರ್ಜಲೀಕರಣದ ಸಮಸ್ಯೆ ಇರದು. ಕೇವಲ ನೀರು ಮಾತ್ರವಲ್ಲ, ನೀರಿನಾಂಶ ಹೆಚ್ಚಿಗೆ ಇರುವಂತಹ ಹಣ್ಣುಗಳನ್ನು ಕೂಡ ತಿನ್ನಬೇಕು.
ಅದರಲ್ಲಿಯೂ ಪ್ರಮುಖವಾಗಿ ಕಲ್ಲಂಗಡಿ ಹಣ್ಣುಗಳನ್ನು ತಿಂದರೆ ಅದರಲ್ಲಿ ಇರುವಂತಹ ಹೆಚ್ಚಿನ ನೀರಿನಾಂಶವು ನಮ್ಮ ದೇಹಕ್ಕೆ ತುಂಬಾನೇ ಉಪಯೋಗಕಾರಿ.
ಆದರೆ ಮಕ್ಕಳು ಕಲ್ಲಂಗಡಿ ಹಣ್ಣನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಬರುತ್ತದೆ. ಆದರೆ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಬಾರದು. ಆದರೆ ಎರಡು ವರ್ಷಕ್ಕಿಂತ ಮೇಲಿನ ಮಕ್ಕಳಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಿದರೆ ಅದರಿಂದ ಆಗುವ ಲಾಭಗಳು ಯಾವುದು ಎಂದು ತಿಳಿಯಿರಿ....

ಎರಡು ವರ್ಷ ದಾಟಿದ ಮಗುವಿಗೆ
ಹೌದು ಎರಡು ವರ್ಷ ದಾಟಿದ ಮಗುವಿಗೆ ಮಾತ್ರ ಕಲ್ಲಂಗಡಿ ಹಣ್ಣನ್ನು ತಿನ್ನಿಸಬೇಕು. ಇದು ಮಗುವಿನ ದೇಹದಲ್ಲಿ ನೀರಿನಾಂಶವನ್ನು ಕಾಪಾಡಲು ನೆರವಾಗುವುದು. ಬೇಸಿಗೆ ಕಾಲದಲ್ಲಿ ಮಗುವನ್ನು ನಿರ್ಜಲೀಕರಣದಿಂದ ಕಾಪಾಡುವುದು.

ವಿಟಮಿನ್ ಎ
ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಬೆಟಾಕ್ಯಾರೋಟಿನ್ ಸಮೃದ್ಧವಾಗಿದೆ..ಹಾಗಾಗಿ ಮಕ್ಕಳು ಕಲ್ಲಂಗಡಿ ಹಣ್ಣು ಸೇವಿಸುವುದರಿಂದ ಆರೋಗ್ಯಕರ ಚರ್ಮ, ಒಳ್ಳೆಯ ದೃಷ್ಟಿ ಮತ್ತು ಹಲ್ಲುಗಳಿಗೆ ಇದು ಅತ್ಯಗತ್ಯ.

ದೃಷ್ಟಿಯ-ಹೃದಯದ ಸಮಸ್ಯೆಗೆ ರಾಮಬಾಣ
ಕಲ್ಲಂಗಡಿಯಲ್ಲಿ ಇರುವಂತಹ ಪೋಷಕಾಂಶಗಳು ದೃಷ್ಟಿಯ ಸಮಸ್ಯೆ, ಹೃದಯದ ಸಮಸ್ಯೆ ಮತ್ತು ಇತರ ಕೆಲವೊಂದು ಸಮಸ್ಯೆಗಳನ್ನು ನಿವಾರಣೆ ಮಾಡಲು ಸಹಕಾರಿ.

ಮೂಳೆಯ ಬೆಳವಣಿಗೆಗೆ
ಮಕ್ಕಳ ಮೂಳೆಯ ಬೆಳವಣಿಗೆಗೆ ಕ್ಯಾಲ್ಸಿಯಂ ಮತ್ತು ಸ್ನಾಯುಗಳ ಬೆಳವಣಿಗೆ ಮತ್ತು ನರಗಳ ಕಾರ್ಯಚಟುವಟಿಕೆಗೆ ಮೆಗ್ನಿಶಿಯಂ ಬೇಕಾಗಿದೆ. ಕಲ್ಲಂಗಡಿಯಲ್ಲಿ ಈ ಎರಡೂ ಖನಿಜಾಂಶಗಳು ಇದೆ.

ವಿಟಮಿನ್ ಬಿ6
ಕಲ್ಲಂಗಡಿಯಲ್ಲಿ ವಿಟಮಿನ್ ಬಿ6, ನಿಯಾಸಿನ್, ರಿಬೊಫ್ಲಾವಿನ್ ಮತ್ತು ಥೈಮೆನ್ ಎನ್ನುವ ವಿಟಮಿನ್ ಗಳಿವೆ. ಮಕ್ಕಳ ಬೆಳವಣಿಗೆಗೆ ಈ ವಿಟಮಿನ್ಗಳು ಅತೀ ಅಗತ್ಯ.

ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ
ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹವು ಕಬ್ಬಿನಾಂಶವನ್ನು ಬೇಗನೆ ಹೀರಿಕೊಳ್ಳಲು ನೆರವಾಗುವುದು. ಇದು ಮಕ್ಕಳಿಗೆ ತುಂಬಾ ಒಳ್ಳೆಯದು.



Click it and Unblock the Notifications