Just In
- 6 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 7 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 7 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 7 hrs ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಕ್ಕಳ ಆರೋಗ್ಯಕ್ಕೆ 'ಕಲ್ಲಂಗಡಿ ಹಣ್ಣು' ಬಹಳ ಒಳ್ಳೆಯದು...
ಮಕ್ಕಳು ಕಲ್ಲಂಗಡಿ ಹಣ್ಣನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಬರುತ್ತದೆ.ಆದರೆ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಬಾರದು.ಆದರೆ ಎರಡು ವರ್ಷಕ್ಕಿಂತ ಮೇಲಿನ ಮಕ್ಕಳಿಗೆ ಕಲ್ಲಂಗಡಿ ಹಣ್ಣನ್ನು ಸೇವಿಸಬಹುದು..
ಬೇಸಿಗೆಯಲ್ಲಿ ಅತಿಯಾದ ಉಷ್ಣತೆಯನ್ನು ತಡೆಯಲು ಪ್ರಮುಖವಾಗಿ ನಾವು ಆದಷ್ಟು ಮಟ್ಟಿಗೆ ನೀರನ್ನು ಕುಡಿಯಬೇಕು. ನೀರು ಕುಡಿದರೆ ದೇಹದಲ್ಲಿ ನಿರ್ಜಲೀಕರಣದ ಸಮಸ್ಯೆ ಇರದು. ಕೇವಲ ನೀರು ಮಾತ್ರವಲ್ಲ, ನೀರಿನಾಂಶ ಹೆಚ್ಚಿಗೆ ಇರುವಂತಹ ಹಣ್ಣುಗಳನ್ನು ಕೂಡ ತಿನ್ನಬೇಕು.
ಅದರಲ್ಲಿಯೂ ಪ್ರಮುಖವಾಗಿ ಕಲ್ಲಂಗಡಿ ಹಣ್ಣುಗಳನ್ನು ತಿಂದರೆ ಅದರಲ್ಲಿ ಇರುವಂತಹ ಹೆಚ್ಚಿನ ನೀರಿನಾಂಶವು ನಮ್ಮ ದೇಹಕ್ಕೆ ತುಂಬಾನೇ ಉಪಯೋಗಕಾರಿ.
ಆದರೆ ಮಕ್ಕಳು ಕಲ್ಲಂಗಡಿ ಹಣ್ಣನ್ನು ತಿನ್ನಬಹುದೇ ಎನ್ನುವ ಪ್ರಶ್ನೆ ಬರುತ್ತದೆ. ಆದರೆ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಬಾರದು. ಆದರೆ ಎರಡು ವರ್ಷಕ್ಕಿಂತ ಮೇಲಿನ ಮಕ್ಕಳಿಗೆ ಕಲ್ಲಂಗಡಿ ಹಣ್ಣನ್ನು ತಿನ್ನಿಸಿದರೆ ಅದರಿಂದ ಆಗುವ ಲಾಭಗಳು ಯಾವುದು ಎಂದು ತಿಳಿಯಿರಿ....
ಎರಡು ವರ್ಷ ದಾಟಿದ ಮಗುವಿಗೆ
ಹೌದು ಎರಡು ವರ್ಷ ದಾಟಿದ ಮಗುವಿಗೆ ಮಾತ್ರ ಕಲ್ಲಂಗಡಿ ಹಣ್ಣನ್ನು ತಿನ್ನಿಸಬೇಕು. ಇದು ಮಗುವಿನ ದೇಹದಲ್ಲಿ ನೀರಿನಾಂಶವನ್ನು ಕಾಪಾಡಲು ನೆರವಾಗುವುದು. ಬೇಸಿಗೆ ಕಾಲದಲ್ಲಿ ಮಗುವನ್ನು ನಿರ್ಜಲೀಕರಣದಿಂದ ಕಾಪಾಡುವುದು.
ವಿಟಮಿನ್ ಎ
ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಬೆಟಾಕ್ಯಾರೋಟಿನ್ ಸಮೃದ್ಧವಾಗಿದೆ..ಹಾಗಾಗಿ ಮಕ್ಕಳು ಕಲ್ಲಂಗಡಿ ಹಣ್ಣು ಸೇವಿಸುವುದರಿಂದ ಆರೋಗ್ಯಕರ ಚರ್ಮ, ಒಳ್ಳೆಯ ದೃಷ್ಟಿ ಮತ್ತು ಹಲ್ಲುಗಳಿಗೆ ಇದು ಅತ್ಯಗತ್ಯ.
ದೃಷ್ಟಿಯ-ಹೃದಯದ ಸಮಸ್ಯೆಗೆ ರಾಮಬಾಣ
ಕಲ್ಲಂಗಡಿಯಲ್ಲಿ ಇರುವಂತಹ ಪೋಷಕಾಂಶಗಳು ದೃಷ್ಟಿಯ ಸಮಸ್ಯೆ, ಹೃದಯದ ಸಮಸ್ಯೆ ಮತ್ತು ಇತರ ಕೆಲವೊಂದು ಸಮಸ್ಯೆಗಳನ್ನು ನಿವಾರಣೆ ಮಾಡಲು ಸಹಕಾರಿ.
ಮೂಳೆಯ ಬೆಳವಣಿಗೆಗೆ
ಮಕ್ಕಳ ಮೂಳೆಯ ಬೆಳವಣಿಗೆಗೆ ಕ್ಯಾಲ್ಸಿಯಂ ಮತ್ತು ಸ್ನಾಯುಗಳ ಬೆಳವಣಿಗೆ ಮತ್ತು ನರಗಳ ಕಾರ್ಯಚಟುವಟಿಕೆಗೆ ಮೆಗ್ನಿಶಿಯಂ ಬೇಕಾಗಿದೆ. ಕಲ್ಲಂಗಡಿಯಲ್ಲಿ ಈ ಎರಡೂ ಖನಿಜಾಂಶಗಳು ಇದೆ.
ವಿಟಮಿನ್ ಬಿ6
ಕಲ್ಲಂಗಡಿಯಲ್ಲಿ ವಿಟಮಿನ್ ಬಿ6, ನಿಯಾಸಿನ್, ರಿಬೊಫ್ಲಾವಿನ್ ಮತ್ತು ಥೈಮೆನ್ ಎನ್ನುವ ವಿಟಮಿನ್ ಗಳಿವೆ. ಮಕ್ಕಳ ಬೆಳವಣಿಗೆಗೆ ಈ ವಿಟಮಿನ್ಗಳು ಅತೀ ಅಗತ್ಯ.
ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ
ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹವು ಕಬ್ಬಿನಾಂಶವನ್ನು ಬೇಗನೆ ಹೀರಿಕೊಳ್ಳಲು ನೆರವಾಗುವುದು. ಇದು ಮಕ್ಕಳಿಗೆ ತುಂಬಾ ಒಳ್ಳೆಯದು.