Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಹೆರಿಗೆಯ ನಂತರ ಕಾಡುವ ಮಲಬದ್ಧತೆಗೆ ಪರಿಹಾರ
ಗರ್ಭಿಣಿಯಾದಾಗ ಹಾಗೂ ಹೆರಿಗೆಯ ನಂತರ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತದೆ. ಆದ್ದರಿಂದ ಗರ್ಭಿಣಿಯಾಗಿರುವಾಗ ದೇಹದ ಆರೈಕೆಗೆ ಎಷ್ಟು ಗಮನ ಕೊಡುತ್ತೇವೋ ಅಷ್ಟೇ ಗಮನವನ್ನು ಹೆರಿಗೆಯಾಗಿ 6 ತಿಂಗಳವರೆಗೆ ಕೊಡಬೇಕಾಗುತ್ತದೆ, ಆದರೆ ಆರೈಕೆಯ ವಿಧಾನ ಮಾತ್ರ ಬದಲಾಗಿರುತ್ತದೆ.
ಹೆರಿಗೆಯ ನಂತರ ಮಲಬದ್ಧತೆಯ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಸಿಸೇರಿಯನ್ ಆದವರಂತೂ ಮಲವಿಸರ್ಜನೆಗೆ ಹೋಗುವಾಗ ತುಂಬಾ ಒತ್ತಡ ಹಾಕಬಾರದು. ಮಲಬದ್ಧತೆ ಸಮಸ್ಯೆ ತಾಯಿಗೆ ಇದ್ದರೆ ಮಗುವಿಗೆ ಎದೆ ಹಾಲು ಕೊಡಬಾರದೆಂದು ಹೇಳುತ್ತಾರೆ. ಈ ಬಗ್ಗೆ ವೈದ್ಯರನ್ನು ಕೇಳಿ ಖಚಿತ ಪಡಿಸಿಕೊಳ್ಳಿ.
ಮಲಬದ್ಧತೆ ಸಮಸ್ಯೆಯಿಂದ ಹೊರಬರಲು ಹೆರಿಗೆಯ ನಂತರ ಈ ಕೆಳಗಿನ ಆಹಾರಗಳನ್ನು ತಿನ್ನುವುದು ಒಳ್ಳೆಯದು:

ಸಬ್ಬಸಿಗೆ ಸೊಪ್ಪು
ಈ ಸೊಪ್ಪನ್ನು ಬಳಸಿ ಮಾಡಿದ ಸಾರು ಅಥವಾ ಸೂಪ್ ಕುಡಿದರೆ ಎದೆ ಹಾಲು ಹೆಚ್ಚಾಗುವುದು ಹಾಗೂ ಜೀರ್ಣಕ್ರಿಯೆ ಸರಾಗವಾಗಿ ನಡೆದು ಮಲಬದ್ಧತೆ ಸಮಸ್ಯೆ ಉಂಟಾಗುವುದಿಲ್ಲ.

ಸೊಪ್ಪು
ಹೆರಿಗೆಯ ನಂತರ ಸೊಪ್ಪು ತಿಂದರೆ ಜೀರ್ಣಕ್ರಿಯೆಗೆ ಒಳ್ಳೆಯದು ಹಾಗೂ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತದೆ.

ಜೀರಿಗೆ ಮತ್ತು ತುಪ್ಪ
ಇದು ಅತ್ಯಂತ ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ತುಪ್ಪ ಹಾಕಿ ಜೀರಿಗೆಯನ್ನು ಹುರಿದು ಪುಡಿ ಮಾಡಿ ಅನ್ನದ ಜೊತೆ ಕಲೆಸಿ ತಿಂದರೆ ಜೀರ್ಣಕ್ರಿಯೆ ಚೆನ್ನಾಗಿ ನಡೆಯುವುದರಿಂದ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ.

ನಾರಿನಂಶವಿರುವ ಹಣ್ಣುಗಳು
ಹಣ್ಣುಗಳಲ್ಲಿ ನಾರಿನಂಶ ಅಧಿಕವಿರುವ ಹಣ್ಣುಗಳನ್ನು ತಿನ್ನುವುದು ಒಳ್ಳೆಯದು.

ಆಮ್ಲ ಜ್ಯೂಸ್
ಆಮ್ಲ ಜ್ಯೂಸ್ ಕೂಡ ಮಲಬದ್ಧತೆ ಸಮಸ್ಯೆ ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ. ಇದು ತುಂಬಾ ಸಮಯದಿಂದ ಇರುವ ಮಲಬದ್ಧತೆ ಸಮಸ್ಯೆಯನ್ನು ಕೂಡ ಗುಣ ಪಡಿಸುತ್ತದೆ.

ಗೋಧಿ
ಗೋಧಿಯಿಂದ ಮಾಡಿದ ಪದಾರ್ಥಗಳನ್ನು ತಿನ್ನುವುದರಿಂದ ಮಲಬದ್ಧತೆ ಸಮಸ್ಯೆ ಬರದಂತೆ ತಡೆಯಬಹುದು.

ಒಣ ಹಣ್ಣುಗಳು
ಒಣ ಹಣ್ಣುಗಳಲ್ಲಿ ವಿಟಮಿನ್ಸ್ ಮತ್ತು ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಮೊಸರು
ಮೊಸರು ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುವುದು ಮಾತ್ರವಲ್ಲ ಮೂತ್ರ ಉರಿ ಉಂಟಾಗದಂತೆ ತಡೆಯುತ್ತದೆ. ಆದ್ದರಿಂದ ಎದೆ ಹಾಲು ಕೊಡುವ ತಾಯಿ ಇದನ್ನು ಪ್ರತೀದಿನ ತಿನ್ನುವುದು ಒಳ್ಳೆಯದು.

ಬಿಸಿ ನೀರು
ಊಟದ ನಂತರ ಒಂದು ಲೋಟ ಬಿಸಿ ನೀರು ಕುಡಿಯುವುದು ಒಳ್ಳೆಯದು. ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಮಲಬದ್ಧತೆ ಉಂಟಾಗುವುದು ಆದ್ದರಿಂದ ದೇಹದಲ್ಲಿ ನೀರಿನಂಶ ಇರುವಂತೆ ನೋಡಿಕೊಳ್ಳಿ.



Click it and Unblock the Notifications