Latest Updates
-
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್!
ಹೆರಿಗೆಯ ನಂತರದ ಕೂದಲುದುರುವಿಕೆ ತಡೆಯಲು ಐದು ವಿಧಾನಗಳು
ನೀವು ಈಗಷ್ಟೇ ಮಗುವನ್ನು ಪಡೆದು ಹೊಸ ಜೀವನಕ್ಕೆ ಹೊಂದಿಕೊಳ್ಳುತ್ತಿದ್ದೀರಾ? ಈ ಸಂತೋಷವನ್ನು ಅನುಭವಿಸುವುದರ ಜೊತೆಗೆ ನಿಮ್ಮ ದೇಹದ ಬಗ್ಗೆ ಕಾಳಜಿ ಕೂಡ ಅಷ್ಟೇ ಮುಖ್ಯವಾಗಿದೆ.ಹೆಚ್ಚಿನ ಮಹಿಳೆಯರು ಹೆರಿಗೆಯ ನಂತರ ಮುಖದ ಕಾಂತಿಯನ್ನು ಹಿಂತಿರುಗಿ ಪಡೆಯಲು ಪ್ರಯತ್ನಿಸುತ್ತಾರೆ ಆದರೆ ಕೂದಲಿನ ಕಾಳಜಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿಬಿಟ್ಟಿರುತ್ತಾರೆ.ಮಗು ಹುಟ್ಟಿದ ನಂತರ ತಾಯಿಯ ಈಸ್ಟ್ರೋಜೆನ್ ಮಟ್ಟದಲ್ಲಿ ಏರುಪೇರು ಕಂಡು ಬರುವುದರಿಂದ ಕೂದಲುದುರುವಿಕೆ ಸಾಮಾನ್ಯ.ನೀವೂ ಕೂಡ ಕೂದಲಿನ ಆರೈಕೆಗೆ ಸರಿಯಾದ ಮಾರ್ಗ ಹುಡುಕುತ್ತಿದ್ದಲ್ಲಿ ಈ ಕೆಳಗೆ ನೀಡಲಾಗಿರುವ ಐದು ವಿಧಾನಗಳನ್ನು ಪಾಲಿಸಿ.

ಮೊಟ್ಟೆಯ ಬಿಳಿ ಭಾಗ
ನಿಮಗೆ ಬೇರೇನನ್ನು ಮಾಡಲು ಸಮಯವಿಲ್ಲದಿದ್ದರೆ ಮೂರು ಚಮಚ ಆಲೀವ್ ಎಣ್ಣೆಗೆ ಮೊಟ್ಟೆಯ ಬಿಳಿ ಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿ ಇದರಿಂದ ಸಿಗುವ ಫಲಿತಾಂಶ ನಿಮ್ಮನ್ನು ನಿಬ್ಬೆರಗಾಗಿಸುತ್ತದೆ.ಇದು ನಿಮ್ಮ ಕೂದಲಿಗೆ ಬೇಕಾದ ನುಣುಪನ್ನು ನೀಡಿ ಕೂದಲ ಪೋಷಣೆ ಮಾಡುತ್ತದೆ.

ಮೆಂತೆ ಕಾಳು
ಕೂದಲು ಉದುರುವಿಕೆ ತಡೆಯುವಲ್ಲಿ ಮೆಂತೆ ಕಾಳು ಹೆಚ್ಚು ಕೆಲಸ ಮಾಡುತ್ತದೆ. ಮೆಂತೆಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ ಈ ನೀರನ್ನು ಕೂದಲಿಗೆ ಮರುದಿನ ಬೆಳಗ್ಗೆ ಹಚ್ಚಿ ಇದನ್ನು ಎರಡು ಗಂಟೆಗಳ ಕಾಲ ಹಾಗೆಯೇ ಬಿಡಿ.ಇದು ಕೂದಲನ್ನು ಆರೋಗ್ಯಯುತವಾಗಿ ಮಾಡುವುದರ ಜೊತೆಗೆ ತಲೆಹೊಟ್ಟನ್ನು ಕೂಡ ಹೋಗಲಾಡಿಸುತ್ತದೆ.

ಮೊಸರು
ಇದು ಕೂದಲಿಗೆ ಅತ್ಯುತ್ತಮ ಟಾನಿಕ್.ಸ್ವಲ್ಪ ಕಡೆದ ಮೊಸರನ್ನು ಕೂದಲಿನ ಬುಡಕ್ಕೆ ಹಚ್ಚಿ ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.ಇದರಿಂದ ದೊರೆತ ಫಲಿತಾಂಶದಿಂದ ನೀವು ನಿಮ್ಮ ಕೂದಲನ್ನು ಇಷ್ಟಪಡಲು ಪ್ರಾರಂಭಿಸುತ್ತೀರಿ.

ಕಾಯಿ ಹಾಲು
ಕೊಬ್ಬರಿ ಎಣ್ಣೆ ಬಳಸುವುದರಿಂದ ಕೂದಲು ಉದುರುವಿಕೆ ತಡೆಯಬಹುದು ಎಂಬುದು ಎಲ್ಲರಿಗೂ ತಿಳಿದ ವಿಷಯ.ಆದರೆ ಹೆಚ್ಚಿನ ಜನರಿಗೆ ಕಾಯಿ ಹಾಲು ಬಳಸುವುದರಿಂದ ಕೂದಲು ಉದುರುವುದು ಮಾತ್ರವಲ್ಲ,ಕೂದಲ ಬೆಳವಣಿಗೆ ಕೂಡ ಹೆಚ್ಚುತ್ತದೆ ಎಂಬುದು ತಿಳಿದಿಲ್ಲ.ನಿಯಮಿತವಾಗಿ ಕೂದಲಿಗೆ ಕಾಯಿ ಹಾಲು ಬಳಸುವುದರಿಂದ ಕೂದಲು ಉದುರುವುದನ್ನು ತಡೆಯುವುದರ ಜೊತೆಗೆ ದಟ್ಟವಾಗಿ ಬೆಳೆಯಲು ಕೂಡ ಸಹಕರಿಸುತ್ತದೆ.

ಭೃ೦ಗರಾಜ ತೈಲ
ಎಲ್ಲೆಡೆ ಸುಲಭವಾಗಿ ದೊರಕುವ ಭೃ೦ಗರಾ ಅಥವಾ ಫಾಲ್ಸ್ ಡೈಸಿ ಎಂದೇ ಕರೆಯಲ್ಪಡುವ ಸಸ್ಯವು ಕೂದಲು ಉದುರುವಿಕೆ ತಡೆಯಲು ಅನುಕೂಲಕರ.ಒಂದು ಮುಷ್ಠಿ ಭೃಂಗರಾಜ ಎಲೆಗಳನ್ನು ತೆಗೆದುಕೊಳ್ಳಿ ನಂತರ ಇದನ್ನು ಸಂಪೂರ್ಣ ಪೇಸ್ಟ್ ತಯಾರಿಸಿಕೊಳ್ಳಿ.ಇದನ್ನು ಹಾಗೆಯೇ ಕೂದಲಿಗೆ ಹಚ್ಚಬಹುದು ಅಥವಾ ಹಾಲಿನ ಜೊತೆ ಮಿಕ್ಸ್ ಮಾಡಿ ಕೂಡ ಬಳಸಬಹುದು.



Click it and Unblock the Notifications